AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತುಕಾಲಿ ಗೆದ್ದರೆ ನಾನು ಹಿಮಾಲಯಕ್ಕೆ ಹೋಗಿ ದೀಕ್ಷೆ ಪಡೆಯುತ್ತೇನೆ’: ವಿನಯ್​ ಗೌಡ ಪ್ರತಿಜ್ಞೆ

ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್​, ವರ್ತೂರು ಸಂತೋಷ್​ ಅವರು ಫಿನಾಲೆ ತಲುಪಿದ್ದಾರೆ. ‘ತುಕಾಲಿ ಫಿನಾಲೆಯಲ್ಲಿ ಗೆದ್ದರೆ ವಿನಯ್​ ಗೌಡ ಪ್ರತಿಕ್ರಿಯೆ ಏನಾಗಿರುತ್ತದೆ’ ಎಂದು ಕಿಚ್ಚ ಸುದೀಪ್​ ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ವಿನಯ್​ ಅವರು ಈ ರೀತಿ ಪ್ರತಿಜ್ಞೆ ಮಾಡಿದ್ದಾರೆ. ‘ಆ ಬೀನ್ ಬ್ಯಾಗ್ ಬಗ್ಗೆ ಬಹಳ ಜೋಪಾನವಾಗಿರಿ’ ಎಂದು ಸುದೀಪ್​ ಹೇಳಿದ್ದಾರೆ.

‘ತುಕಾಲಿ ಗೆದ್ದರೆ ನಾನು ಹಿಮಾಲಯಕ್ಕೆ ಹೋಗಿ ದೀಕ್ಷೆ ಪಡೆಯುತ್ತೇನೆ’: ವಿನಯ್​ ಗೌಡ ಪ್ರತಿಜ್ಞೆ
ವಿನಯ್​ ಗೌಡ, ತುಕಾಲಿ ಸಂತೋಷ್​
ಮದನ್​ ಕುಮಾರ್​
|

Updated on: Jan 21, 2024 | 8:29 AM

Share

ನೋಡನೋಡುತ್ತಿದ್ದಂತೆಯೇ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (BBK 10) ರಿಯಾಲಿಟಿ ಶೋ ಕೊನೆಯ ಹಂತವನ್ನು ತಲುಪಿದೆ. ಜನವರಿ 27 ಮತ್ತು 28ರಂದು ಫಿನಾಲೆ ಸಂಚಿಕೆ ಪ್ರಸಾರ ಆಗಲಿದೆ. ಈಗಾಗಲೇ ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್​ ಮತ್ತು ವರ್ತೂರು ಸಂತೋಷ್​ ಅವರು ಫಿನಾಲೆಗೆ ಎಂಟ್ರಿ ನೀಡಿದ್ದಾರೆ. ತುಕಾಲಿ ಸಂತೋಷ್​ (Tukali Santosh) ಅವರು ಫಿನಾಲೆಗೆ ಪ್ರವೇಶ ಪಡೆದಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಆ ಬಗ್ಗೆ ಕೊನೇ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್​ ಅವರು ಮಾತನಾಡಿದ್ದಾರೆ. ಈ ಸಂಚಿಕೆಯಲ್ಲಿ ವಿನಯ್​ ಗೌಡ (Vinay Gowda) ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ತುಕಾಲಿ ಸಂತೋಷ್​ ಅವರನ್ನು ಕೆಲವರು ಗಂಭೀರವಾಗಿ ಸ್ವೀಕರಿಸಿರಲಿಲ್ಲ. ಕೆಲವರು ಏನೇನೋ ತಂತ್ರಗಾರಿಕೆ ಮಾಡಿದರೂ ಕೂಡ ಫಿನಾಲೆಗೆ ಬರಲು ಸಾಧ್ಯವಾಗಲಿಲ್ಲ. ಅವರೆಲ್ಲರಿಗಿಂತಲೂ ಮುಂಚೆ ತುಕಾಲಿ ಸಂತೋಷ್​ ಅವರು ಫಿನಾಲೆಗೆ ಎಂಟ್ರಿ ಪಡೆದಿದ್ದಾರೆ. ಆ ಬಗ್ಗೆ ಸುದೀಪ್​ ಒಂದು ಪ್ರಶ್ನೆ ಕೇಳಿದ್ದಾರೆ. ‘ನೀವೆಲ್ಲ ಬಹಳ ಒದ್ದಾಡಿಕೊಂಡು, ಕಿತ್ತಾಡಿಕೊಂಡು ಇರುವಾಗ ತುಕಾಲಿ ಸಂತೋಷ್​ ಅವರು ಮೆತ್ತಗೆ ಫಿನಾಲೆ ತಲುಪಿದರು. ಅವರೇ ಫಿನಾಲೆಯಲ್ಲಿ ಗೆದ್ದರೆ ವಿನಯ್​ ಗೌಡ ಪ್ರತಿಕ್ರಿಯೆ ಏನಾಗಿರುತ್ತದೆ’ ಎಂದು ಸುದೀಪ್​ ಕೇಳಿದ್ದಾರೆ.

ಇದನ್ನೂ ಓದಿ: ಫಿನಾಲೆ ತಲುಪಿದ ವರ್ತೂರು ಸಂತೋಷ್​; ಟ್ರೋಫಿಗಾಗಿ ಸಂಗೀತಾ, ತುಕಾಲಿ ಜತೆ ಪೈಪೋಟಿ

‘ನಾನು ಏನೂ ಮಾತನಾಡದೇ, ಸೀದಾ ಹಿಮಾಲಯಕ್ಕೆ ಹೋಗಿ ದೀಕ್ಷೆ ತೆಗೆದುಕೊಳ್ಳುತ್ತೇವೆ ಸರ್​’ ಎಂದು ವಿನಯ್​ ಗೌಡ ಅವರು ಸುದೀಪ್​ ಎದುರು ಪ್ರತಿಜ್ಞೆ ಮಾಡಿದ್ದಾರೆ. ಈ ಮಾತು ಕೇಳಿ ಸುದೀಪ್​ ಅವರಿಗೆ ಅಚ್ಚರಿ ಆಗಿದೆ. ‘ಆ ಬೀನ್ ಬ್ಯಾಗ್ ಬಗ್ಗೆ ಬಹಳ ಜೋಪಾನವಾಗಿರಿ’ ಎಂದು ಸುದೀಪ್​ ಹೇಳಿದ್ದಾರೆ. ಫಿನಾಲೆಯಲ್ಲಿ ಯಾರು ಗೆಲ್ಲಬಹುದು ಎಂಬ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ತಂದೆಯ ಹೆಸರು ದುರುಪಯೋಗ ಮಾಡಿಕೊಳ್ಳಬೇಡಿ’: ಬುಲೆಟ್​ ಪ್ರಕಾಶ್​ ಮಗ ರಕ್ಷಕ್​ಗೆ ಸುದೀಪ್​ ಎಚ್ಚರಿಕೆ

ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್​, ವರ್ತೂರು ಸಂತೋಷ್​ ಅವರು ಫಿನಾಲೆ ತಲುಪಿದ್ದಾರೆ. ಕಾಮಿಡಿ ಮಾಡುವ ಮೂಲಕ ತುಕಾಲಿ ಸಂತೋಷ್​ ಅವರು ಬಿಗ್ ಬಾಸ್​ ಮನೆಯಲ್ಲಿ ಎಲ್ಲರನ್ನೂ ನಗಿಸುತ್ತಾ ಬಂದಿದ್ದಾರೆ. ಅವರಿಂದಾಗಿ ಪ್ರೇಕ್ಷಕರಿಗೆ ಮನರಂಜನೆ ಸಿಕ್ಕಿದೆ. ವರ್ತೂರು ಸಂತೋಷ್ ಜೊತೆ ಅವರಿಗೆ ಹೆಚ್ಚು ಸ್ನೇಹ ಬೆಳೆದಿದೆ. ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವವರು ತಾವಿಬ್ಬರೇ ಆಗಿರಬೇಕು ಎಂದು ತುಕಾಲಿ ಸಂತೋಷ್​ ಆಸೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ