AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Nov 12, 2023 | 7:34 AM

Share

ಡ್ರೋನ್ ಪ್ರತಾಪ್ (Drone Prathap) ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರಿಗೆ ದಿನ ಕಳೆದಂತೆ ಅಭಿಮಾನಿ ವರ್ಗ ಹೆಚ್ಚುತ್ತಿದೆ. ಅವರ ಚಾಣಾಕ್ಷತೆಯ ಆಟವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ಅವರು ಪಾಲಕರನ್ನು ಭೇಟಿ ಮಾಡದೇ ಹಲವು ಸಮಯ ಕಳೆದಿದೆ. ಈ ಬಗ್ಗೆ ದೊಡ್ಮನೆಯಲ್ಲಿ ಅವರು ಮಾತನಾಡಿದ್ದಾರೆ. ವಿನಯ್ ಗೌಡಅವರು ಈ ಬಗ್ಗೆ ಮಾತನಾಡಿದ್ದಾರೆ. ಹೊರ ಹೋದ ತಕ್ಷಣ ಅವರನ್ನು ಮೀಟ್ ಮಾಡುವಂತೆ ವಿನಯ್ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಬಗ್ಗೆ ಪ್ರತಾಪ್​ಗೂ ಅರಿವಿದೆ. ಈಗ ತಂದೆಯ ವಿಚಾರಕ್ಕೆ ವಿನಯ್​ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

‘ತಂದೆಯನ್ನು ಭೇಟಿ ಮಾಡದೇ ಎಷ್ಟು ಸಮಯ ಆಯಿತು’ ಎಂದು ಪ್ರತಾಪ್​ಗೆ ಕೇಳಲಾಯಿತು. ಇದಕ್ಕೆ ಅವರು ಮೂರು ವರ್ಷ ಎಂದರು. ಮೂರು ವರ್ಷವೇ ಎಂದು ಕೆಲವರು ಉದ್ಘಾರ ತೆಗೆದರು. ‘ನಾನು ತಂದೆ ತಾಯೀನ ಭೇಟಿ ಮಾಡುತ್ತೇನೆ. ಇದನ್ನು ಬಿಗ್ ಬಾಸ್​ಗೆ ಕೇಳಿದ್ದೇನೆ’ ಎಂದರು ಪ್ರತಾಪ್. ಆಗ ವಿನಯ್ ಅವರು ಕಿವಿಮಾತು ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್​ಗಿಲ್ಲ ಧೈರ್ಯ? ಎಲ್ಲರದ್ದೂ ಇದೇ ಅಭಿಪ್ರಾಯ

‘ನಾನು ನನ್ನ ತಂದೆಯನ್ನು 16 ವರ್ಷ ನೋಡಿರಲಿಲ್ಲ. ಆಮೇಲೆ ಅವರು ಸತ್ತು ಹೋದರು. ನೋಡಬೇಕು ಎಂದರೂ ಆಗಲಿಲ್ಲ. ಒಮ್ಮೆ ಕಳೆದುಕೊಂಡರೆ ಆ ಬಳಿಕ ಬೇಕು ಎಂದರೂ ಭೇಟಿ ಮಾಡೋಕೆ ಆಗಲ್ಲ. ಅವರು ಬಿಗ್ ಬಾಸ್​ನ ಖಂಡಿತವಾಗಿಯೂ ನೋಡುತ್ತಾ ಇರುತ್ತಾರೆ. ನಿನಗೆ ಉತ್ತಮ ಸಿಕ್ಕಿದ್ದು ಅವರಿಗೆ ಖುಷಿ ನೀಡಿರುತ್ತದೆ’ ಎಂದರು ವಿನಯ್. ಇದನ್ನು ಕೇಳಿ ಪ್ರತಾಪ್​ ಖುಷಿಪಟ್ಟಿದ್ದಾರೆ. ಕಲರ್ಸ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?