AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Nov 12, 2023 | 7:34 AM

Share

ಡ್ರೋನ್ ಪ್ರತಾಪ್ (Drone Prathap) ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರಿಗೆ ದಿನ ಕಳೆದಂತೆ ಅಭಿಮಾನಿ ವರ್ಗ ಹೆಚ್ಚುತ್ತಿದೆ. ಅವರ ಚಾಣಾಕ್ಷತೆಯ ಆಟವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ಅವರು ಪಾಲಕರನ್ನು ಭೇಟಿ ಮಾಡದೇ ಹಲವು ಸಮಯ ಕಳೆದಿದೆ. ಈ ಬಗ್ಗೆ ದೊಡ್ಮನೆಯಲ್ಲಿ ಅವರು ಮಾತನಾಡಿದ್ದಾರೆ. ವಿನಯ್ ಗೌಡಅವರು ಈ ಬಗ್ಗೆ ಮಾತನಾಡಿದ್ದಾರೆ. ಹೊರ ಹೋದ ತಕ್ಷಣ ಅವರನ್ನು ಮೀಟ್ ಮಾಡುವಂತೆ ವಿನಯ್ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಬಗ್ಗೆ ಪ್ರತಾಪ್​ಗೂ ಅರಿವಿದೆ. ಈಗ ತಂದೆಯ ವಿಚಾರಕ್ಕೆ ವಿನಯ್​ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

‘ತಂದೆಯನ್ನು ಭೇಟಿ ಮಾಡದೇ ಎಷ್ಟು ಸಮಯ ಆಯಿತು’ ಎಂದು ಪ್ರತಾಪ್​ಗೆ ಕೇಳಲಾಯಿತು. ಇದಕ್ಕೆ ಅವರು ಮೂರು ವರ್ಷ ಎಂದರು. ಮೂರು ವರ್ಷವೇ ಎಂದು ಕೆಲವರು ಉದ್ಘಾರ ತೆಗೆದರು. ‘ನಾನು ತಂದೆ ತಾಯೀನ ಭೇಟಿ ಮಾಡುತ್ತೇನೆ. ಇದನ್ನು ಬಿಗ್ ಬಾಸ್​ಗೆ ಕೇಳಿದ್ದೇನೆ’ ಎಂದರು ಪ್ರತಾಪ್. ಆಗ ವಿನಯ್ ಅವರು ಕಿವಿಮಾತು ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್​ಗಿಲ್ಲ ಧೈರ್ಯ? ಎಲ್ಲರದ್ದೂ ಇದೇ ಅಭಿಪ್ರಾಯ

‘ನಾನು ನನ್ನ ತಂದೆಯನ್ನು 16 ವರ್ಷ ನೋಡಿರಲಿಲ್ಲ. ಆಮೇಲೆ ಅವರು ಸತ್ತು ಹೋದರು. ನೋಡಬೇಕು ಎಂದರೂ ಆಗಲಿಲ್ಲ. ಒಮ್ಮೆ ಕಳೆದುಕೊಂಡರೆ ಆ ಬಳಿಕ ಬೇಕು ಎಂದರೂ ಭೇಟಿ ಮಾಡೋಕೆ ಆಗಲ್ಲ. ಅವರು ಬಿಗ್ ಬಾಸ್​ನ ಖಂಡಿತವಾಗಿಯೂ ನೋಡುತ್ತಾ ಇರುತ್ತಾರೆ. ನಿನಗೆ ಉತ್ತಮ ಸಿಕ್ಕಿದ್ದು ಅವರಿಗೆ ಖುಷಿ ನೀಡಿರುತ್ತದೆ’ ಎಂದರು ವಿನಯ್. ಇದನ್ನು ಕೇಳಿ ಪ್ರತಾಪ್​ ಖುಷಿಪಟ್ಟಿದ್ದಾರೆ. ಕಲರ್ಸ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ