AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Nov 12, 2023 | 7:34 AM

Share

ಡ್ರೋನ್ ಪ್ರತಾಪ್ (Drone Prathap) ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರಿಗೆ ದಿನ ಕಳೆದಂತೆ ಅಭಿಮಾನಿ ವರ್ಗ ಹೆಚ್ಚುತ್ತಿದೆ. ಅವರ ಚಾಣಾಕ್ಷತೆಯ ಆಟವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ಅವರು ಪಾಲಕರನ್ನು ಭೇಟಿ ಮಾಡದೇ ಹಲವು ಸಮಯ ಕಳೆದಿದೆ. ಈ ಬಗ್ಗೆ ದೊಡ್ಮನೆಯಲ್ಲಿ ಅವರು ಮಾತನಾಡಿದ್ದಾರೆ. ವಿನಯ್ ಗೌಡಅವರು ಈ ಬಗ್ಗೆ ಮಾತನಾಡಿದ್ದಾರೆ. ಹೊರ ಹೋದ ತಕ್ಷಣ ಅವರನ್ನು ಮೀಟ್ ಮಾಡುವಂತೆ ವಿನಯ್ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಬಗ್ಗೆ ಪ್ರತಾಪ್​ಗೂ ಅರಿವಿದೆ. ಈಗ ತಂದೆಯ ವಿಚಾರಕ್ಕೆ ವಿನಯ್​ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

‘ತಂದೆಯನ್ನು ಭೇಟಿ ಮಾಡದೇ ಎಷ್ಟು ಸಮಯ ಆಯಿತು’ ಎಂದು ಪ್ರತಾಪ್​ಗೆ ಕೇಳಲಾಯಿತು. ಇದಕ್ಕೆ ಅವರು ಮೂರು ವರ್ಷ ಎಂದರು. ಮೂರು ವರ್ಷವೇ ಎಂದು ಕೆಲವರು ಉದ್ಘಾರ ತೆಗೆದರು. ‘ನಾನು ತಂದೆ ತಾಯೀನ ಭೇಟಿ ಮಾಡುತ್ತೇನೆ. ಇದನ್ನು ಬಿಗ್ ಬಾಸ್​ಗೆ ಕೇಳಿದ್ದೇನೆ’ ಎಂದರು ಪ್ರತಾಪ್. ಆಗ ವಿನಯ್ ಅವರು ಕಿವಿಮಾತು ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್​ಗಿಲ್ಲ ಧೈರ್ಯ? ಎಲ್ಲರದ್ದೂ ಇದೇ ಅಭಿಪ್ರಾಯ

‘ನಾನು ನನ್ನ ತಂದೆಯನ್ನು 16 ವರ್ಷ ನೋಡಿರಲಿಲ್ಲ. ಆಮೇಲೆ ಅವರು ಸತ್ತು ಹೋದರು. ನೋಡಬೇಕು ಎಂದರೂ ಆಗಲಿಲ್ಲ. ಒಮ್ಮೆ ಕಳೆದುಕೊಂಡರೆ ಆ ಬಳಿಕ ಬೇಕು ಎಂದರೂ ಭೇಟಿ ಮಾಡೋಕೆ ಆಗಲ್ಲ. ಅವರು ಬಿಗ್ ಬಾಸ್​ನ ಖಂಡಿತವಾಗಿಯೂ ನೋಡುತ್ತಾ ಇರುತ್ತಾರೆ. ನಿನಗೆ ಉತ್ತಮ ಸಿಕ್ಕಿದ್ದು ಅವರಿಗೆ ಖುಷಿ ನೀಡಿರುತ್ತದೆ’ ಎಂದರು ವಿನಯ್. ಇದನ್ನು ಕೇಳಿ ಪ್ರತಾಪ್​ ಖುಷಿಪಟ್ಟಿದ್ದಾರೆ. ಕಲರ್ಸ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?