AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು
ಡ್ರೋನ್ ಪ್ರತಾಪ್
ರಾಜೇಶ್ ದುಗ್ಗುಮನೆ
|

Updated on: Nov 12, 2023 | 7:34 AM

Share

ಡ್ರೋನ್ ಪ್ರತಾಪ್ (Drone Prathap) ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರಿಗೆ ದಿನ ಕಳೆದಂತೆ ಅಭಿಮಾನಿ ವರ್ಗ ಹೆಚ್ಚುತ್ತಿದೆ. ಅವರ ಚಾಣಾಕ್ಷತೆಯ ಆಟವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ಅವರು ಪಾಲಕರನ್ನು ಭೇಟಿ ಮಾಡದೇ ಹಲವು ಸಮಯ ಕಳೆದಿದೆ. ಈ ಬಗ್ಗೆ ದೊಡ್ಮನೆಯಲ್ಲಿ ಅವರು ಮಾತನಾಡಿದ್ದಾರೆ. ವಿನಯ್ ಗೌಡಅವರು ಈ ಬಗ್ಗೆ ಮಾತನಾಡಿದ್ದಾರೆ. ಹೊರ ಹೋದ ತಕ್ಷಣ ಅವರನ್ನು ಮೀಟ್ ಮಾಡುವಂತೆ ವಿನಯ್ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಬಗ್ಗೆ ಪ್ರತಾಪ್​ಗೂ ಅರಿವಿದೆ. ಈಗ ತಂದೆಯ ವಿಚಾರಕ್ಕೆ ವಿನಯ್​ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

‘ತಂದೆಯನ್ನು ಭೇಟಿ ಮಾಡದೇ ಎಷ್ಟು ಸಮಯ ಆಯಿತು’ ಎಂದು ಪ್ರತಾಪ್​ಗೆ ಕೇಳಲಾಯಿತು. ಇದಕ್ಕೆ ಅವರು ಮೂರು ವರ್ಷ ಎಂದರು. ಮೂರು ವರ್ಷವೇ ಎಂದು ಕೆಲವರು ಉದ್ಘಾರ ತೆಗೆದರು. ‘ನಾನು ತಂದೆ ತಾಯೀನ ಭೇಟಿ ಮಾಡುತ್ತೇನೆ. ಇದನ್ನು ಬಿಗ್ ಬಾಸ್​ಗೆ ಕೇಳಿದ್ದೇನೆ’ ಎಂದರು ಪ್ರತಾಪ್. ಆಗ ವಿನಯ್ ಅವರು ಕಿವಿಮಾತು ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್​ಗಿಲ್ಲ ಧೈರ್ಯ? ಎಲ್ಲರದ್ದೂ ಇದೇ ಅಭಿಪ್ರಾಯ

‘ನಾನು ನನ್ನ ತಂದೆಯನ್ನು 16 ವರ್ಷ ನೋಡಿರಲಿಲ್ಲ. ಆಮೇಲೆ ಅವರು ಸತ್ತು ಹೋದರು. ನೋಡಬೇಕು ಎಂದರೂ ಆಗಲಿಲ್ಲ. ಒಮ್ಮೆ ಕಳೆದುಕೊಂಡರೆ ಆ ಬಳಿಕ ಬೇಕು ಎಂದರೂ ಭೇಟಿ ಮಾಡೋಕೆ ಆಗಲ್ಲ. ಅವರು ಬಿಗ್ ಬಾಸ್​ನ ಖಂಡಿತವಾಗಿಯೂ ನೋಡುತ್ತಾ ಇರುತ್ತಾರೆ. ನಿನಗೆ ಉತ್ತಮ ಸಿಕ್ಕಿದ್ದು ಅವರಿಗೆ ಖುಷಿ ನೀಡಿರುತ್ತದೆ’ ಎಂದರು ವಿನಯ್. ಇದನ್ನು ಕೇಳಿ ಪ್ರತಾಪ್​ ಖುಷಿಪಟ್ಟಿದ್ದಾರೆ. ಕಲರ್ಸ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು