AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ.

‘ತಂದೆ ಭೇಟಿ ಮಾಡು, ಒಮ್ಮೆ ಕಳೆದುಕೊಂಡರೆ ಮತ್ತೆ ಸಿಗಲ್ಲ’; ಪ್ರತಾಪ್​ಗೆ ವಿನಯ್ ಕಿವಿಮಾತು
ಡ್ರೋನ್ ಪ್ರತಾಪ್
Follow us
ರಾಜೇಶ್ ದುಗ್ಗುಮನೆ
|

Updated on: Nov 12, 2023 | 7:34 AM

ಡ್ರೋನ್ ಪ್ರತಾಪ್ (Drone Prathap) ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅವರಿಗೆ ದಿನ ಕಳೆದಂತೆ ಅಭಿಮಾನಿ ವರ್ಗ ಹೆಚ್ಚುತ್ತಿದೆ. ಅವರ ಚಾಣಾಕ್ಷತೆಯ ಆಟವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ಅವರು ಪಾಲಕರನ್ನು ಭೇಟಿ ಮಾಡದೇ ಹಲವು ಸಮಯ ಕಳೆದಿದೆ. ಈ ಬಗ್ಗೆ ದೊಡ್ಮನೆಯಲ್ಲಿ ಅವರು ಮಾತನಾಡಿದ್ದಾರೆ. ವಿನಯ್ ಗೌಡಅವರು ಈ ಬಗ್ಗೆ ಮಾತನಾಡಿದ್ದಾರೆ. ಹೊರ ಹೋದ ತಕ್ಷಣ ಅವರನ್ನು ಮೀಟ್ ಮಾಡುವಂತೆ ವಿನಯ್ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

ಪ್ರತಾಪ್ ಆಟ ನೋಡಿ ವಿನಯ್​ಗೆ ಇಷ್ಟವಾಗಿದೆ. ಹೇಗಾದರೂ ಮಾಡಿ ಪ್ರತಾಪ್​ನ ತಮ್ಮ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಪ್ರಯತ್ನ ಮಾಡುತ್ತಲೇ ಇದ್ದಾರೆ. ಇದಕ್ಕಾಗಿ ಪ್ರತಾಪ್​ನ ಹೊಗಳುವ ಕೆಲಸ ಆಗುತ್ತಿದೆ. ಅವರು ಪ್ರತಾಪ್​ ಬಗ್ಗೆ ಪಾಸಿಟಿವ್ ಆಗಿ ಮಾತನಾಡುತ್ತಿದ್ದಾರೆ. ಅವರ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಬಗ್ಗೆ ಪ್ರತಾಪ್​ಗೂ ಅರಿವಿದೆ. ಈಗ ತಂದೆಯ ವಿಚಾರಕ್ಕೆ ವಿನಯ್​ ಅವರು ಪ್ರತಾಪ್​ಗೆ ಕಿವಿಮಾತು ಹೇಳಿದ್ದಾರೆ.

‘ತಂದೆಯನ್ನು ಭೇಟಿ ಮಾಡದೇ ಎಷ್ಟು ಸಮಯ ಆಯಿತು’ ಎಂದು ಪ್ರತಾಪ್​ಗೆ ಕೇಳಲಾಯಿತು. ಇದಕ್ಕೆ ಅವರು ಮೂರು ವರ್ಷ ಎಂದರು. ಮೂರು ವರ್ಷವೇ ಎಂದು ಕೆಲವರು ಉದ್ಘಾರ ತೆಗೆದರು. ‘ನಾನು ತಂದೆ ತಾಯೀನ ಭೇಟಿ ಮಾಡುತ್ತೇನೆ. ಇದನ್ನು ಬಿಗ್ ಬಾಸ್​ಗೆ ಕೇಳಿದ್ದೇನೆ’ ಎಂದರು ಪ್ರತಾಪ್. ಆಗ ವಿನಯ್ ಅವರು ಕಿವಿಮಾತು ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್​ಗಿಲ್ಲ ಧೈರ್ಯ? ಎಲ್ಲರದ್ದೂ ಇದೇ ಅಭಿಪ್ರಾಯ

‘ನಾನು ನನ್ನ ತಂದೆಯನ್ನು 16 ವರ್ಷ ನೋಡಿರಲಿಲ್ಲ. ಆಮೇಲೆ ಅವರು ಸತ್ತು ಹೋದರು. ನೋಡಬೇಕು ಎಂದರೂ ಆಗಲಿಲ್ಲ. ಒಮ್ಮೆ ಕಳೆದುಕೊಂಡರೆ ಆ ಬಳಿಕ ಬೇಕು ಎಂದರೂ ಭೇಟಿ ಮಾಡೋಕೆ ಆಗಲ್ಲ. ಅವರು ಬಿಗ್ ಬಾಸ್​ನ ಖಂಡಿತವಾಗಿಯೂ ನೋಡುತ್ತಾ ಇರುತ್ತಾರೆ. ನಿನಗೆ ಉತ್ತಮ ಸಿಕ್ಕಿದ್ದು ಅವರಿಗೆ ಖುಷಿ ನೀಡಿರುತ್ತದೆ’ ಎಂದರು ವಿನಯ್. ಇದನ್ನು ಕೇಳಿ ಪ್ರತಾಪ್​ ಖುಷಿಪಟ್ಟಿದ್ದಾರೆ. ಕಲರ್ಸ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡೋಕೆ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ