AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೇ ತಗಡು ಎದೆಮೇಲೆ ಕಾಲಿಟ್ಟೇ ನಿನ್ನ ತುಳಿಯೋದು’; ಕಾರ್ತಿಕ್​ಗೆ ವಿನಯ್ ಎಚ್ಚರಿಕೆ

ಕಾರ್ತಿಕ್​ ಅವರನ್ನು ವಿನಯ್ ಕೆಣಕಿದರು. ಈ ವೇಳೆ ಕಾರ್ತಿಕ್ ಬೀಸಿ ಎಸೆದ ಚಪ್ಪಲ್ಲಿ ನೆಲಕ್ಕೆ ಬಡಿದು ವಿನಯ್​ಗೆ ತಾಗಿತು. ಇದರಿಂದ ಮನೆ ರಣರಂಗ ಆಯಿತು.

‘ಲೇ ತಗಡು ಎದೆಮೇಲೆ ಕಾಲಿಟ್ಟೇ ನಿನ್ನ ತುಳಿಯೋದು’; ಕಾರ್ತಿಕ್​ಗೆ ವಿನಯ್ ಎಚ್ಚರಿಕೆ
ವಿನಯ್-ಕಾರ್ತಿಕ್​,ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Dec 08, 2023 | 8:16 AM

Share

ರಾಕ್ಷಸರು ಹಾಗೂ ಗಂಧರ್ವರು ಗೇಮ್​ನಲ್ಲಿ ಇಡೀ ಮನೆ ರಣರಂಗ ಆಗಿದೆ. ರಾಕ್ಷಸರು ರಾಕ್ಷಸರಂತೆ ವರ್ತಿಸಿದ್ದಾರೆ. ಗಂಧರ್ವರು ಕೂಡ ರಾಕ್ಷಸರಂತೆ ನಡೆದುಕೊಂಡಿದ್ದಾರೆ. ಹೀಗಾಗಿ, ಇಡೀ ಮನೆ ಹೊತ್ತಿ ಉರಿದಿದೆ. ಯಾರನ್ನೂ ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದರಿಂದ ಘನಘೋರ ಜಗಳ ನಡೆದಿದೆ. ಕಾರ್ತಿಕ್ (Karthik Gowda) ಚಪ್ಪಲಿಯಲ್ಲಿ ಹೊಡೆದ ಎಂದು ವಿನಯ್ ಆರೋಪಿಸಿದ್ದಾರೆ. ಕಾರ್ತಿಕ್​ಗೆ ಹೊಡೆಯಲು ವಿನಯ್ ಮುಂದಾಗಿದ್ದಾರೆ. ಈ ಎಲ್ಲಾ ಹೈಡ್ರಾಮಾಗಳನ್ನು ಯಾರಿಂದಲೂ ಕಂಟ್ರೋಲ್ ಮಾಡೋಕೆ ಸಾಧ್ಯವಾಗಿಲ್ಲ.

ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ನೀಡಲಾಗಿತ್ತು. ಸಂಗೀತಾ ಟೀಂನವರು ಮೊದಲು ರಾಕ್ಷಸರಾದರು. ವರ್ತೂರು ಸಂತೋಷ್ ತಂಡದವರು ಗಂಧರ್ವರಾಗಿದ್ದರು. ರಾಕ್ಷಸರು ಹೇಳಿದಂತೆ ಗಂಧರ್ವರು ನಡೆದುಕೊಳ್ಳಬೇಕು. ಆ ಬಳಿಕ ಸಂಗೀತಾ ತಂಡದವರು ಗಂಧರ್ವರಾದರು, ವರ್ತೂರು ಸಂತೋಷ್ ತಂಡದವರು ರಾಕ್ಷಸರಾದರು. ‘ಅವರು ಹೇಳಿದಂತೆ ನಡೆದುಕೊಳ್ಳೋದು ಬೇಡ’ ಎಂದು ತಂಡದ ಸದಸ್ಯರಿಗೆ ಸಂಗೀತಾ ಸೂಚನೆ ಬಂತು. ಎಲ್ಲರೂ ಅದರಂತೆ ಮಾಡಿದರು. ಇದರಿಂದ ಆಟ ಹಳ್ಳ ಹಿಡಿಯಿತು.

ಕಾರ್ತಿಕ್​ ಅವರನ್ನು ವಿನಯ್ ಕೆಣಕಿದರು. ಈ ವೇಳೆ ಕಾರ್ತಿಕ್ ಬೀಸಿ ಎಸೆದ ಚಪ್ಪಲ್ಲಿ ನೆಲಕ್ಕೆ ಬಡಿದು ವಿನಯ್​ಗೆ ತಾಗಿತು. ಇದರಿಂದ ಮನೆ ರಣರಂಗ ಆಯಿತು. ‘ನಿನ್ನ ಬಳಿ ಚಪ್ಪಲಿ ಏಟು ತಿನ್ನೋಕೆ ಬಂದಿಲ್ಲ. ನಿನಗೆ ಹೊಡೆದು ನಾನು ಹೊರಗೆ ಹೋಗೋದು’ ಎಂದು ವಿನಯ್ ಕೂಗಾಡಿದರು. ಆದರೆ, ಕಾರ್ತಿಕ್ ಇದಕ್ಕೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಇದನ್ನೂ ಓದಿ: ‘ಪ್ಲೀಸ್ ಶಟ್​ಅಪ್​’; ಸಂಗೀತಾ ಹಾಗೂ ವಿನಯ್ ಗೌಡ ಮಧ್ಯೆ ಮತ್ತೆ ದ್ವೇಷದ ಕಿಡಿ

‘ಲೇ ತಗಡು ಎದೆಮೇಲೆ ಕಾಲಿಟ್ಟು ನಿನ್ನ ತುಳಿಯೋದು’ ಎಂದು ಕಾರ್ತಿಕ್​ಗೆ ವಿನಯ್ ಎಚ್ಚರಿಸಿದರು. ಆಗಲೂ ಕಾರ್ತಿಕ್ ಕೂಲ್​ ಆಗಿ ವರ್ತಿಸಿದರು. ‘ನಾನು ಇಂಥ ಕುರಿಗಳನ್ನು ಸಾಕಷ್ಟು ನೋಡಿದ್ದೇನೆ’ ಎಂದರು ಕಾರ್ತಿಕ್. ‘ಹೊರಗೆ ಬಾ ನಿನಗೆ ಇಡೀ ಸಿನಿಮಾ ತೋರಿಸ್ತೀನಿ’ ಎಂದೂ ವಿನಯ್​ ಅವರು ಕಾರ್ತಿಕ್​ಗೆ ಎಚ್ಚರಿಕೆ ನೀಡಿದರು. ‘ಇವರನ್ನೆಲ್ಲ ತಿಂದು, ತೇಗಿ, ಕಕ್ಕ ಮಾಡಿಯೇ ಹೋಗೋದು’ ಎಂದು ವಿನಯ್ ಕೂಗಾಡಿದ್ದಾರೆ. ಜಿಯೋ ಸಿನಿಮಾ ಹಾಗೂ ಕಲರ್ಸ್​ ಕನ್ನಡದಲ್ಲಿ ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್​ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Fri, 8 December 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ