AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಿಂದ ವಿನೋದ್ ಗೊಬ್ಬರಗಾಲ ಔಟ್ ಆದ ಬೆನ್ನಲ್ಲೇ ಶುರುವಾಯ್ತು ಹೊಸ ಅಭಿಯಾನ

ವಿನೋದ್ ಗೊಬ್ಬರಗಾಲ ಅವರು ಈ ಮೊದಲ ವಾರಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಕೊಂಚ ಡಲ್ ಆಗಿದ್ದರು. ಅವರ ಆಟ ಅಷ್ಟು ಉತ್ತಮವಾಗಿರಲಿಲ್ಲ. ಇದು ಅವರಿಗೆ ಹಿನ್ನಡೆ ಆಯಿತು.

ಬಿಗ್ ಬಾಸ್​​ನಿಂದ ವಿನೋದ್ ಗೊಬ್ಬರಗಾಲ ಔಟ್ ಆದ ಬೆನ್ನಲ್ಲೇ ಶುರುವಾಯ್ತು ಹೊಸ ಅಭಿಯಾನ
ವಿನೋದ್ ಗೊಬ್ಬರಗಾಲ
TV9 Web
| Edited By: |

Updated on:Nov 28, 2022 | 8:21 AM

Share

ಬಿಗ್ ಬಾಸ್​ನಿಂದ (Bigg Boss) ಹಾಸ್ಯ ಕಲಾವಿದ ವಿನೋದ್​ ಗೊಬ್ಬರಗಾಲ ಅವರು ಔಟ್ ಆಗಿದ್ದಾರೆ. 9ನೇ ವಾರಕ್ಕೆ ಅವರು ತಮ್ಮ ಆಟ ಮುಗಿಸಿ ತಮ್ಮ ಮನೆಗೆ ತೆರಳಿದ್ದಾರೆ. ಬಿಗ್ ಬಾಸ್​ಗೆ ಕಾಲಿಟ್ಟಾಗಿನಿಂದಲೂ ಅವರು ನಗಿಸುವ ಕೆಲಸ ಮಾಡುತ್ತಲೇ ಬರುತ್ತಿದ್ದರು. ಆದರೆ, ಈಗ ಅವರು ದೊಡ್ಮನೆಯಿಂದ ಹೊರಹೋಗಿರುವುದು ಸಹ ಸ್ಪರ್ಧಿಗಳಿಗೆ ಹಾಗೂ ವಿನೋದ್ (Vinod Gobbaragala) ಫ್ಯಾನ್ಸ್​​ಗೆ ಬೇಸರ ಮೂಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್​ ಅಭಿಯಾನ ಶುರು ಮಾಡಿದ್ದಾರೆ.

ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದರು. ಬಳಿಕ ಅವರು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಿಗ್ ಬಾಸ್ ಮನೆಗೆ ಕಾಲಿಟ್ಟರು. ಅವರು ಮರಳಿರುವುದು ಅನೇಕರಿಗೆ ಖುಷಿ ನೀಡಿದೆ. ವಿನೋದ್ ಅವರನ್ನೂ ಈ ರೀತಿ ಮತ್ತೆ ಕರೆಸಬೇಕು ಎಂದು ಅವರ ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ. ವಿನೋದ್ ಎಲಿಮಿನೇಟ್ ಆದ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ಆ ಪೋಸ್ಟ್​ಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ವಿನೋದ್ ಗೊಬ್ಬರಗಾಲ ಅವರು ಈ ಮೊದಲ ವಾರಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಕೊಂಚ ಡಲ್ ಆಗಿದ್ದರು. ಅವರ ಆಟ ಅಷ್ಟು ಉತ್ತಮವಾಗಿರಲಿಲ್ಲ. ಇದು ಅವರಿಗೆ ಹಿನ್ನಡೆ ಆಯಿತು. ಅವರು ಫಿನಾಲೆವರೆಗೆ ಇರಬೇಕಿತ್ತು ಎಂಬುದು ಅನೇಕರ ಕೋರಿಕೆ. ಇನ್ನೂ ಕೆಲವರು ‘ಬಡವರ ಮಕ್ಕಳು ಬೆಳಿಬೇಕ್ ಕಣ್ರಯ್ಯ’ ಎಂಬ ಡೈಲಾಗ್​ನ ಕಮೆಂಟ್ ಬಾಕ್ಸ್​​ನಲ್ಲಿ ಹಾಕುತ್ತಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

‘ಬಿಗ್ ಬಾಸ್​’ನಲ್ಲಿ ಕಳೆದ ವಾರ ಎಲ್ಲರೂ ನಾಮಿನೇಟ್ ಆಗಿದ್ದರು. ಆ ವಾರ ಮನೆಗೆ ಯಾರೂ ಕ್ಯಾಪ್ಟನ್ ಇಲ್ಲದ ಕಾರಣ ಯಾರಿಗೂ ಇಮ್ಯೂನಿಟಿ ಸಿಕ್ಕಿರಲಿಲ್ಲ. ಅತೀ ಕಡಿಮೆ ವೋಟ್ ಪಡೆದು ವಿನೋದ್ ಹೊರ ನಡೆದಿದ್ದಾರೆ. ಮನೆಯಿಂದ ಹೊರ ನಡೆವಾಗ ಅವರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ತಾನು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹೊರಿಸಿದ ವಿನೋದ್​ ಗೊಬ್ಬರಗಾಲ: ಪಾಠ ಹೇಳಿದ ಕಿಚ್ಚ ಸುದೀಪ್​​ 

ಸದ್ಯ ಬಿಗ್ ಬಾಸ್ ಮನೆಯಲ್ಲಿ 11 ಜನ ಇದ್ದಾರೆ. ಇನ್ನು ಒಂದು ತಿಂಗಳಲ್ಲಿ ಬಿಗ್ ಬಾಸ್ ಪೂರ್ಣಗೊಳ್ಳಲಿದೆ. ಇಲ್ಲಿಯವರೆಗೆ ಮನೆಯಲ್ಲಿ ಡಬಲ್ ಎಲಿಮಿನೇಷನ್ ನಡೆದಿಲ್ಲ. ಅದು ಕೂಡ ಶೀಘ್ರವೇ ನಡೆಯಲಿದೆ ಎನ್ನಲಾಗುತ್ತಿದೆ. ಅದು ಯಾವಾಗ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

Published On - 8:21 am, Mon, 28 November 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ