AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಿಂದ ವಿನೋದ್ ಗೊಬ್ಬರಗಾಲ ಔಟ್ ಆದ ಬೆನ್ನಲ್ಲೇ ಶುರುವಾಯ್ತು ಹೊಸ ಅಭಿಯಾನ

ವಿನೋದ್ ಗೊಬ್ಬರಗಾಲ ಅವರು ಈ ಮೊದಲ ವಾರಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಕೊಂಚ ಡಲ್ ಆಗಿದ್ದರು. ಅವರ ಆಟ ಅಷ್ಟು ಉತ್ತಮವಾಗಿರಲಿಲ್ಲ. ಇದು ಅವರಿಗೆ ಹಿನ್ನಡೆ ಆಯಿತು.

ಬಿಗ್ ಬಾಸ್​​ನಿಂದ ವಿನೋದ್ ಗೊಬ್ಬರಗಾಲ ಔಟ್ ಆದ ಬೆನ್ನಲ್ಲೇ ಶುರುವಾಯ್ತು ಹೊಸ ಅಭಿಯಾನ
ವಿನೋದ್ ಗೊಬ್ಬರಗಾಲ
TV9 Web
| Edited By: |

Updated on:Nov 28, 2022 | 8:21 AM

Share

ಬಿಗ್ ಬಾಸ್​ನಿಂದ (Bigg Boss) ಹಾಸ್ಯ ಕಲಾವಿದ ವಿನೋದ್​ ಗೊಬ್ಬರಗಾಲ ಅವರು ಔಟ್ ಆಗಿದ್ದಾರೆ. 9ನೇ ವಾರಕ್ಕೆ ಅವರು ತಮ್ಮ ಆಟ ಮುಗಿಸಿ ತಮ್ಮ ಮನೆಗೆ ತೆರಳಿದ್ದಾರೆ. ಬಿಗ್ ಬಾಸ್​ಗೆ ಕಾಲಿಟ್ಟಾಗಿನಿಂದಲೂ ಅವರು ನಗಿಸುವ ಕೆಲಸ ಮಾಡುತ್ತಲೇ ಬರುತ್ತಿದ್ದರು. ಆದರೆ, ಈಗ ಅವರು ದೊಡ್ಮನೆಯಿಂದ ಹೊರಹೋಗಿರುವುದು ಸಹ ಸ್ಪರ್ಧಿಗಳಿಗೆ ಹಾಗೂ ವಿನೋದ್ (Vinod Gobbaragala) ಫ್ಯಾನ್ಸ್​​ಗೆ ಬೇಸರ ಮೂಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್​ ಅಭಿಯಾನ ಶುರು ಮಾಡಿದ್ದಾರೆ.

ದೀಪಿಕಾ ದಾಸ್ ಅವರು ಈ ಮೊದಲು ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದರು. ಬಳಿಕ ಅವರು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಿಗ್ ಬಾಸ್ ಮನೆಗೆ ಕಾಲಿಟ್ಟರು. ಅವರು ಮರಳಿರುವುದು ಅನೇಕರಿಗೆ ಖುಷಿ ನೀಡಿದೆ. ವಿನೋದ್ ಅವರನ್ನೂ ಈ ರೀತಿ ಮತ್ತೆ ಕರೆಸಬೇಕು ಎಂದು ಅವರ ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ. ವಿನೋದ್ ಎಲಿಮಿನೇಟ್ ಆದ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ಆ ಪೋಸ್ಟ್​ಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ವಿನೋದ್ ಗೊಬ್ಬರಗಾಲ ಅವರು ಈ ಮೊದಲ ವಾರಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಕೊಂಚ ಡಲ್ ಆಗಿದ್ದರು. ಅವರ ಆಟ ಅಷ್ಟು ಉತ್ತಮವಾಗಿರಲಿಲ್ಲ. ಇದು ಅವರಿಗೆ ಹಿನ್ನಡೆ ಆಯಿತು. ಅವರು ಫಿನಾಲೆವರೆಗೆ ಇರಬೇಕಿತ್ತು ಎಂಬುದು ಅನೇಕರ ಕೋರಿಕೆ. ಇನ್ನೂ ಕೆಲವರು ‘ಬಡವರ ಮಕ್ಕಳು ಬೆಳಿಬೇಕ್ ಕಣ್ರಯ್ಯ’ ಎಂಬ ಡೈಲಾಗ್​ನ ಕಮೆಂಟ್ ಬಾಕ್ಸ್​​ನಲ್ಲಿ ಹಾಕುತ್ತಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

‘ಬಿಗ್ ಬಾಸ್​’ನಲ್ಲಿ ಕಳೆದ ವಾರ ಎಲ್ಲರೂ ನಾಮಿನೇಟ್ ಆಗಿದ್ದರು. ಆ ವಾರ ಮನೆಗೆ ಯಾರೂ ಕ್ಯಾಪ್ಟನ್ ಇಲ್ಲದ ಕಾರಣ ಯಾರಿಗೂ ಇಮ್ಯೂನಿಟಿ ಸಿಕ್ಕಿರಲಿಲ್ಲ. ಅತೀ ಕಡಿಮೆ ವೋಟ್ ಪಡೆದು ವಿನೋದ್ ಹೊರ ನಡೆದಿದ್ದಾರೆ. ಮನೆಯಿಂದ ಹೊರ ನಡೆವಾಗ ಅವರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ತಾನು ಮಾಡಿದ ತಪ್ಪನ್ನು ಬೇರೆಯವರ ಮೇಲೆ ಹೊರಿಸಿದ ವಿನೋದ್​ ಗೊಬ್ಬರಗಾಲ: ಪಾಠ ಹೇಳಿದ ಕಿಚ್ಚ ಸುದೀಪ್​​ 

ಸದ್ಯ ಬಿಗ್ ಬಾಸ್ ಮನೆಯಲ್ಲಿ 11 ಜನ ಇದ್ದಾರೆ. ಇನ್ನು ಒಂದು ತಿಂಗಳಲ್ಲಿ ಬಿಗ್ ಬಾಸ್ ಪೂರ್ಣಗೊಳ್ಳಲಿದೆ. ಇಲ್ಲಿಯವರೆಗೆ ಮನೆಯಲ್ಲಿ ಡಬಲ್ ಎಲಿಮಿನೇಷನ್ ನಡೆದಿಲ್ಲ. ಅದು ಕೂಡ ಶೀಘ್ರವೇ ನಡೆಯಲಿದೆ ಎನ್ನಲಾಗುತ್ತಿದೆ. ಅದು ಯಾವಾಗ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

Published On - 8:21 am, Mon, 28 November 22

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ