AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ; ದಿನಕ್ಕೆ 50 ಲಕ್ಷ ಸಂಭಾವನೆ ಕೇಳಿದ ಸ್ಪರ್ಧಿ

ನಿತ್ಯ ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ ಮಾಡಬೆಕು ಎಂದು ವಾಹಿನಿಯವರು ವಿವೇಕ್​ಗೆ ಕೇಳಿದ್ದರಂತೆ. ಇದಕ್ಕೆ ವಿವೇಕ್​ ಒಪ್ಪಿದ್ದಾರೆ. ಪ್ರತಿಯಾಗಿ 50 ಲಕ್ಷ ರೂಪಾಯಿ ಸಂಭಾವನೆ ಕೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ; ದಿನಕ್ಕೆ 50 ಲಕ್ಷ ಸಂಭಾವನೆ ಕೇಳಿದ ಸ್ಪರ್ಧಿ
ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ; ದಿನಕ್ಕೆ 50 ಲಕ್ಷ ಸಂಭಾವನೆ ಕೇಳಿದ ಸ್ಪರ್ಧಿ
TV9 Web
| Edited By: |

Updated on:Jul 31, 2021 | 4:56 PM

Share

ಹಿಂದಿಯವರು ಬಿಗ್​ ಬಾಸ್​ ಒಟಿಟಿಯನ್ನು ಪರಿಚಯಿಸುತ್ತಿದ್ದಾರೆ. ಯಾರ್ಯಾರು ಬಿಗ್​ ಬಾಸ್​ ಮನೆ ಪ್ರವೇಶಿಸಲಿದ್ದಾರೆ ಅನ್ನೋದು ಸದ್ಯದ ಕುತೂಹಲ. ಆರು ವಾರಗಳ ಕಾಲ ಒಟಿಟಿಯಲ್ಲಿ ಮಾತ್ರ ಪ್ರಸಾರವಾಗಲಿದೆ. ಈ ಮಧ್ಯೆ ಯೋಗ ಗುರುಗಳೊಬ್ಬರಿಗೆ ಬಿಗ್​ ಬಾಸ್ ಮನೆ ಪ್ರವೇಶಿಸಲು ಆಫರ್​ ನೀಡಲಾಗಿತ್ತು. ಒಂದು ದಿನಕ್ಕೆ ಅವರು ಕೇಳಿರುವ ಸಂಭಾವನೆ ಬರೋಬ್ಬರಿ 50 ಲಕ್ಷ ರೂಪಾಯಿ!

ಮಾಜಿ ಬಿಗ್​ ಬಾಸ್​ ಸ್ಪರ್ಧಿ ಹಾಗೂ ಬೆತ್ತಲೆ ಯೋಗ ಗುರು ವಿವೇಕ್​ ಮಿಶ್ರಾಗೆ ಈ ಬಾರಿ ಬಿಗ್​ ಬಾಸ್ ಪ್ರವೇಶ ಮಾಡಲು ಆಫರ್ ನೀಡಲಾಗಿತ್ತು. ನಿತ್ಯ ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ ಮಾಡಬೇಕು ಎಂದು ವಾಹಿನಿಯವರು ವಿವೇಕ್​ಗೆ ಕೇಳಿದ್ದರಂತೆ. ಇದಕ್ಕೆ ವಿವೇಕ್​ ಒಪ್ಪಿದ್ದಾರೆ. ಪ್ರತಿಯಾಗಿ 50 ಲಕ್ಷ ರೂಪಾಯಿ ಸಂಭಾವನೆ ಕೇಳಿದ್ದಾರೆ.

ಟಿವಿಯಲ್ಲಿ ಪ್ರಸಾರ ಮಾಡುವಾಗ ಕೆಲ ಕಟ್ಟುಪಾಡುಗಳು ಇರುತ್ತವೆ. ಆದರೆ, ಒಟಿಟಿಯಲ್ಲಿ ಈ ಕಟ್ಟುಪಾಡುಗಳು ಇರುವುದಿಲ್ಲ. ಈ ಕಾರಣಕ್ಕೆ ವಿವೇಕ್​ ಅವರನ್ನು ಅಪ್ರೋಚ್​ ಮಾಡಲಾಗಿತ್ತು ಎನ್ನಲಾಗಿದೆ.  ‘ಬಿಗ್​ ಬಾಸ್​ಗೆ ಅರ್ಥವೇ ಇಲ್ಲ. ನಾನೇಕೆ ರಿಯಾಲಿಟಿ ಶೋನಲ್ಲಿ ಯೋಗ ಮಾಡಬೇಕು? ಬೆತ್ತಲೆ ಯೋಗ ತುಂಬಾನೇ ದುಬಾರಿ. ಈ ಕಾರಣಕ್ಕೆ ನಾನು 50 ಲಕ್ಷ ರೂಪಾಯಿ ಕೇಳಿದೆ. ಇದರಲ್ಲಿ ತಪ್ಪೇನಿದೆ’ ಎಂದು ವಿವೇಕ್​ ಪ್ರಶ್ನೆ ಮಾಡಿದ್ದಾರೆ. ಇದು ತುಂಬಾ ದುಬಾರಿ ಆಯಿತು ಎನ್ನುವ ಕಾರಣಕ್ಕೆ ವಾಹಿನಿಯವರು ವಿವೇಕ್​ ಅವರನ್ನು ಸೇರ್ಪಡೆ ಮಾಡಿಕೊಂಡಿಲ್ಲ.

‘ಹಿಂದಿ ಬಿಗ್​ ಬಾಸ್​ ಸೀಸನ್​ 15’ ಆಗಸ್ಟ್​ 8ರಿಂದ ಆರಂಭಗೊಳ್ಳುತ್ತಿದೆ. ವೂಟ್​ ಆ್ಯಪ್​ಗೆ ಈ ಬಾರಿ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ಹೀಗಾಗಿ, ಬಿಗ್​ ಬಾಸ್​ ಒಟಿಟಿಯನ್ನು ವೂಟ್​ ಪರಿಚಯಿಸಿದೆ. ಮೊದಲು ಆರು ವಾರದ ಎಪಿಸೋಡ್​ಗಳು ವೂಟ್​ನಲ್ಲಿ ಮಾತ್ರ ಪ್ರಸಾರವಾಗಲಿದ್ದು ನಂತರ ಟಿವಿಗೆ ಶಿಫ್ಟ್​ ಆಗಲಿದೆ. ಒಟಿಟಿ ಶೋಅನ್ನು ನಡೆಸಿಕೊಡೋಕೆ ಖ್ಯಾತ ಬಾಲಿವುಡ್​ ನಿರ್ಮಾಪಕ ಕರಣ್​ ಜೋಹರ್ ಆಗಮಿಸಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುವ ಶೋ ಅನ್ನು ಸಲ್ಮಾನ್ ಖಾನ್​ ನಡೆಸಿಕೊಡಲಿದ್ದಾರೆ. ಸ್ಪರ್ಧಿಗಳು ಯಾರ್ಯಾರು ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?

ದೊಡ್ಮನೆಯಲ್ಲಿ ಅರವಿಂದ್ ಮಧ್ಯ ಬೆರಳು ತೋರಿಸಿದ ವಿಡಿಯೋ ವೈರಲ್​; ಬಿಗ್​ ಬಾಸ್ ತಂಡದಿಂದ ಸ್ಪಷ್ಟನೆ

Published On - 4:45 pm, Sat, 31 July 21

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!