ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ; ದಿನಕ್ಕೆ 50 ಲಕ್ಷ ಸಂಭಾವನೆ ಕೇಳಿದ ಸ್ಪರ್ಧಿ

ನಿತ್ಯ ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ ಮಾಡಬೆಕು ಎಂದು ವಾಹಿನಿಯವರು ವಿವೇಕ್​ಗೆ ಕೇಳಿದ್ದರಂತೆ. ಇದಕ್ಕೆ ವಿವೇಕ್​ ಒಪ್ಪಿದ್ದಾರೆ. ಪ್ರತಿಯಾಗಿ 50 ಲಕ್ಷ ರೂಪಾಯಿ ಸಂಭಾವನೆ ಕೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ; ದಿನಕ್ಕೆ 50 ಲಕ್ಷ ಸಂಭಾವನೆ ಕೇಳಿದ ಸ್ಪರ್ಧಿ
ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ; ದಿನಕ್ಕೆ 50 ಲಕ್ಷ ಸಂಭಾವನೆ ಕೇಳಿದ ಸ್ಪರ್ಧಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 31, 2021 | 4:56 PM

ಹಿಂದಿಯವರು ಬಿಗ್​ ಬಾಸ್​ ಒಟಿಟಿಯನ್ನು ಪರಿಚಯಿಸುತ್ತಿದ್ದಾರೆ. ಯಾರ್ಯಾರು ಬಿಗ್​ ಬಾಸ್​ ಮನೆ ಪ್ರವೇಶಿಸಲಿದ್ದಾರೆ ಅನ್ನೋದು ಸದ್ಯದ ಕುತೂಹಲ. ಆರು ವಾರಗಳ ಕಾಲ ಒಟಿಟಿಯಲ್ಲಿ ಮಾತ್ರ ಪ್ರಸಾರವಾಗಲಿದೆ. ಈ ಮಧ್ಯೆ ಯೋಗ ಗುರುಗಳೊಬ್ಬರಿಗೆ ಬಿಗ್​ ಬಾಸ್ ಮನೆ ಪ್ರವೇಶಿಸಲು ಆಫರ್​ ನೀಡಲಾಗಿತ್ತು. ಒಂದು ದಿನಕ್ಕೆ ಅವರು ಕೇಳಿರುವ ಸಂಭಾವನೆ ಬರೋಬ್ಬರಿ 50 ಲಕ್ಷ ರೂಪಾಯಿ!

ಮಾಜಿ ಬಿಗ್​ ಬಾಸ್​ ಸ್ಪರ್ಧಿ ಹಾಗೂ ಬೆತ್ತಲೆ ಯೋಗ ಗುರು ವಿವೇಕ್​ ಮಿಶ್ರಾಗೆ ಈ ಬಾರಿ ಬಿಗ್​ ಬಾಸ್ ಪ್ರವೇಶ ಮಾಡಲು ಆಫರ್ ನೀಡಲಾಗಿತ್ತು. ನಿತ್ಯ ಬಿಗ್​ ಬಾಸ್​ ಮನೆಯಲ್ಲಿ ಬೆತ್ತಲೆ ಯೋಗ ಮಾಡಬೇಕು ಎಂದು ವಾಹಿನಿಯವರು ವಿವೇಕ್​ಗೆ ಕೇಳಿದ್ದರಂತೆ. ಇದಕ್ಕೆ ವಿವೇಕ್​ ಒಪ್ಪಿದ್ದಾರೆ. ಪ್ರತಿಯಾಗಿ 50 ಲಕ್ಷ ರೂಪಾಯಿ ಸಂಭಾವನೆ ಕೇಳಿದ್ದಾರೆ.

ಟಿವಿಯಲ್ಲಿ ಪ್ರಸಾರ ಮಾಡುವಾಗ ಕೆಲ ಕಟ್ಟುಪಾಡುಗಳು ಇರುತ್ತವೆ. ಆದರೆ, ಒಟಿಟಿಯಲ್ಲಿ ಈ ಕಟ್ಟುಪಾಡುಗಳು ಇರುವುದಿಲ್ಲ. ಈ ಕಾರಣಕ್ಕೆ ವಿವೇಕ್​ ಅವರನ್ನು ಅಪ್ರೋಚ್​ ಮಾಡಲಾಗಿತ್ತು ಎನ್ನಲಾಗಿದೆ.  ‘ಬಿಗ್​ ಬಾಸ್​ಗೆ ಅರ್ಥವೇ ಇಲ್ಲ. ನಾನೇಕೆ ರಿಯಾಲಿಟಿ ಶೋನಲ್ಲಿ ಯೋಗ ಮಾಡಬೇಕು? ಬೆತ್ತಲೆ ಯೋಗ ತುಂಬಾನೇ ದುಬಾರಿ. ಈ ಕಾರಣಕ್ಕೆ ನಾನು 50 ಲಕ್ಷ ರೂಪಾಯಿ ಕೇಳಿದೆ. ಇದರಲ್ಲಿ ತಪ್ಪೇನಿದೆ’ ಎಂದು ವಿವೇಕ್​ ಪ್ರಶ್ನೆ ಮಾಡಿದ್ದಾರೆ. ಇದು ತುಂಬಾ ದುಬಾರಿ ಆಯಿತು ಎನ್ನುವ ಕಾರಣಕ್ಕೆ ವಾಹಿನಿಯವರು ವಿವೇಕ್​ ಅವರನ್ನು ಸೇರ್ಪಡೆ ಮಾಡಿಕೊಂಡಿಲ್ಲ.

‘ಹಿಂದಿ ಬಿಗ್​ ಬಾಸ್​ ಸೀಸನ್​ 15’ ಆಗಸ್ಟ್​ 8ರಿಂದ ಆರಂಭಗೊಳ್ಳುತ್ತಿದೆ. ವೂಟ್​ ಆ್ಯಪ್​ಗೆ ಈ ಬಾರಿ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ಹೀಗಾಗಿ, ಬಿಗ್​ ಬಾಸ್​ ಒಟಿಟಿಯನ್ನು ವೂಟ್​ ಪರಿಚಯಿಸಿದೆ. ಮೊದಲು ಆರು ವಾರದ ಎಪಿಸೋಡ್​ಗಳು ವೂಟ್​ನಲ್ಲಿ ಮಾತ್ರ ಪ್ರಸಾರವಾಗಲಿದ್ದು ನಂತರ ಟಿವಿಗೆ ಶಿಫ್ಟ್​ ಆಗಲಿದೆ. ಒಟಿಟಿ ಶೋಅನ್ನು ನಡೆಸಿಕೊಡೋಕೆ ಖ್ಯಾತ ಬಾಲಿವುಡ್​ ನಿರ್ಮಾಪಕ ಕರಣ್​ ಜೋಹರ್ ಆಗಮಿಸಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುವ ಶೋ ಅನ್ನು ಸಲ್ಮಾನ್ ಖಾನ್​ ನಡೆಸಿಕೊಡಲಿದ್ದಾರೆ. ಸ್ಪರ್ಧಿಗಳು ಯಾರ್ಯಾರು ಅನ್ನೋದು ಸದ್ಯದ ಕುತೂಹಲ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?

ದೊಡ್ಮನೆಯಲ್ಲಿ ಅರವಿಂದ್ ಮಧ್ಯ ಬೆರಳು ತೋರಿಸಿದ ವಿಡಿಯೋ ವೈರಲ್​; ಬಿಗ್​ ಬಾಸ್ ತಂಡದಿಂದ ಸ್ಪಷ್ಟನೆ

Published On - 4:45 pm, Sat, 31 July 21

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ