AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಹಾಗೂ ಧಾರಾವಾಹಿಗಳ​ ಟಿಆರ್​ಪಿ ಔಟ್; ಇಲ್ಲಿದೆ ಸಂಪೂರ್ಣ ವಿವರ

43ನೇ ವಾರದ ಟಿಆರ್​ಪಿ ವರದಿ ಬಿಡುಗಡೆಯಾಗಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಅಗ್ರಸ್ಥಾನದಲ್ಲಿದೆ. ಬಿಗ್ ಬಾಸ್ ಕೂಡಾ ಉತ್ತಮ ಟಿಆರ್​ಪಿ ಪಡೆದಿದೆ. ‘ಅಮೃತಧಾರೆ’ ಮತ್ತು ‘ಲಕ್ಷ್ಮೀ ನಿವಾಸ’ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಬಿಗ್ ಬಾಸ್ ಹಾಗೂ ಧಾರಾವಾಹಿಗಳ​ ಟಿಆರ್​ಪಿ ಔಟ್; ಇಲ್ಲಿದೆ ಸಂಪೂರ್ಣ ವಿವರ
ಬಿಗ್ ಬಾಸ್ ಹಾಗೂ ಧಾರಾವಾಹಿಗಳ​ ಟಿಆರ್​ಪಿ ಔಟ್
ರಾಜೇಶ್ ದುಗ್ಗುಮನೆ
|

Updated on: Nov 04, 2024 | 3:14 PM

Share

ದೀಪಾವಳಿ ಪ್ರಯುಕ್ತ ಕಳೆದ ವಾರ ಸಾಲು ಸಾಲು ರಜೆಗಳು ಇದ್ದವು. ಹೀಗಾಗಿ, 43ನೇ ವಾರದ ಟಿಆರ್​ಪಿ ಬಂದಿರಲಿಲ್ಲ. ಇಂದು (ನವೆಂಬರ್ 4) ಟಿಆರ್​ಪಿ ವಿವರ ಹೊರ ಬಿದ್ದಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನ ಪಡೆದಿದೆ. ಯಾರೂ ಊಹಿಸದ ಟ್ವಿಸ್ಟ್ ನೀಡಿದ ನಿರ್ದೇಶಕರನ್ನು ಶಪಿಸುತ್ತಲೇ ಧಾರಾವಾಹಿ ನೋಡಲಾಗಿದೆ. ಬಿಗ್ ಬಾಸ್ ಕೂಡ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ.

43ನೇ ವಾರ ಎಂದರೆ ಜಗದೀಶ್ ಅವರು ಎಲಿಮಿನೇಟ್ ಆದ ವಾರ. ಅವರು ಅರ್ಧಕ್ಕೆ ಬಿಗ್ ಬಾಸ್​ನಿಂದ ಹೊರ ನಡೆದಿದ್ದರು. ಈ ವೇಳೆ ಕಿಚ್ಚ ಸುದೀಪ್ ಅವರು ಮನೆ ಮಂದಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಆ ವಾರ ಬಿಗ್ ಬಾಸ್​ಗೆ ವಾರದ ದಿನಗಳಲ್ಲಿ 7 ಟಿವಿಆರ್​ ಸಿಕ್ಕಿದೆ. ಶನಿವಾರ 7.9 ಟಿವಿಆರ್ ಹಾಗೂ ಭಾನುವಾರ 9.4 ಟಿಆರ್​ಪಿ ಸಿಕ್ಕಿದೆ.

ಧಾರಾವಾಹಿ ವಿಚಾರಕ್ಕೆ ಬರೋದಾದರೆ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಎಲ್ಲಾ ಧಾರಾವಾಹಿಗಳನ್ನು ಹಿಂದಿಕ್ಕಿದೆ. ಸದ್ಯ ಸಂಜನಾ ಬುರ್ಲಿ ನಿರ್ವಹಿಸುತ್ತಿದ್ದ ಪಾತ್ರ ಕೊನೆ ಆಗಿದೆ. ಮುಂದಿನ ದಿನಗಳಲ್ಲಿ ಧಾರಾವಾಹಿಯ ಟಿಆರ್​ಪಿ ಕುಗ್ಗುವ ಸಾಧ್ಯತೆ ಇದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ.

ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆಯುತ್ತಿತ್ತು. ಆದರೆ, ಈಗ ಧಾರಾವಾಹಿಯ ಟಿಆರ್​ಪಿ ಸ್ವಲ್ಪ ಕುಗ್ಗಿದೆ. ನಾಲ್ಕನೇ ಸ್ಥಾನದಲ್ಲಿ ಇತ್ತೀಚೆಗೆ ಪ್ರಸಾರ ಆರಂಭಿಸಿರೋ ‘ಅಣ್ಣಯ್ಯ’ ಧಾರಾವಾಹಿ ಇದೆ. ಅಕ್ಕ-ತಂಗಿ ಧಾರಾವಾಹಿ ಎಂದೇ ಫೇಮಸ್ ಆಗಿರೋ ‘ಲಕ್ಷ್ಮೀ ಬಾರಮ್ಮ’ ಹಾಗೂ ‘ಭಾಗ್ಯ ಲಕ್ಷ್ಮೀ’ ಧಾರಾವಾಹಿಗಳು ಐದನೇ ಸ್ಥಾನದಲ್ಲಿ ಇವೆ.

ಇದನ್ನೂ ಓದಿ: ಗುರುಪ್ರಸಾದ್ ಸಾವಿನ ಬಳಿಕ ಟೀಕೆ ಮಾಡಿದ ಜಗ್ಗೇಶ್​ಗೆ ಜಗದೀಶ್ ಕ್ಲಾಸ್

‘ಸೀತಾ ರಾಮ’ ಧಾರಾವಾಹಿಯಲ್ಲಿ ಸಾಕಷ್ಟು ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಆದರೆ, ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿರುವುದರಿಂದ ಈ ಧಾರಾವಾಹಿ ನೋಡುವವರ ಸಂಖ್ಯೆ ಸ್ವಲ್ಪ ಕಡಿಮೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!