AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಹಾಗೂ ಧಾರಾವಾಹಿಗಳ​ ಟಿಆರ್​ಪಿ ಔಟ್; ಇಲ್ಲಿದೆ ಸಂಪೂರ್ಣ ವಿವರ

43ನೇ ವಾರದ ಟಿಆರ್​ಪಿ ವರದಿ ಬಿಡುಗಡೆಯಾಗಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಅಗ್ರಸ್ಥಾನದಲ್ಲಿದೆ. ಬಿಗ್ ಬಾಸ್ ಕೂಡಾ ಉತ್ತಮ ಟಿಆರ್​ಪಿ ಪಡೆದಿದೆ. ‘ಅಮೃತಧಾರೆ’ ಮತ್ತು ‘ಲಕ್ಷ್ಮೀ ನಿವಾಸ’ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನದಲ್ಲಿವೆ.

ಬಿಗ್ ಬಾಸ್ ಹಾಗೂ ಧಾರಾವಾಹಿಗಳ​ ಟಿಆರ್​ಪಿ ಔಟ್; ಇಲ್ಲಿದೆ ಸಂಪೂರ್ಣ ವಿವರ
ಬಿಗ್ ಬಾಸ್ ಹಾಗೂ ಧಾರಾವಾಹಿಗಳ​ ಟಿಆರ್​ಪಿ ಔಟ್
ರಾಜೇಶ್ ದುಗ್ಗುಮನೆ
|

Updated on: Nov 04, 2024 | 3:14 PM

Share

ದೀಪಾವಳಿ ಪ್ರಯುಕ್ತ ಕಳೆದ ವಾರ ಸಾಲು ಸಾಲು ರಜೆಗಳು ಇದ್ದವು. ಹೀಗಾಗಿ, 43ನೇ ವಾರದ ಟಿಆರ್​ಪಿ ಬಂದಿರಲಿಲ್ಲ. ಇಂದು (ನವೆಂಬರ್ 4) ಟಿಆರ್​ಪಿ ವಿವರ ಹೊರ ಬಿದ್ದಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನ ಪಡೆದಿದೆ. ಯಾರೂ ಊಹಿಸದ ಟ್ವಿಸ್ಟ್ ನೀಡಿದ ನಿರ್ದೇಶಕರನ್ನು ಶಪಿಸುತ್ತಲೇ ಧಾರಾವಾಹಿ ನೋಡಲಾಗಿದೆ. ಬಿಗ್ ಬಾಸ್ ಕೂಡ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ.

43ನೇ ವಾರ ಎಂದರೆ ಜಗದೀಶ್ ಅವರು ಎಲಿಮಿನೇಟ್ ಆದ ವಾರ. ಅವರು ಅರ್ಧಕ್ಕೆ ಬಿಗ್ ಬಾಸ್​ನಿಂದ ಹೊರ ನಡೆದಿದ್ದರು. ಈ ವೇಳೆ ಕಿಚ್ಚ ಸುದೀಪ್ ಅವರು ಮನೆ ಮಂದಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಆ ವಾರ ಬಿಗ್ ಬಾಸ್​ಗೆ ವಾರದ ದಿನಗಳಲ್ಲಿ 7 ಟಿವಿಆರ್​ ಸಿಕ್ಕಿದೆ. ಶನಿವಾರ 7.9 ಟಿವಿಆರ್ ಹಾಗೂ ಭಾನುವಾರ 9.4 ಟಿಆರ್​ಪಿ ಸಿಕ್ಕಿದೆ.

ಧಾರಾವಾಹಿ ವಿಚಾರಕ್ಕೆ ಬರೋದಾದರೆ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಎಲ್ಲಾ ಧಾರಾವಾಹಿಗಳನ್ನು ಹಿಂದಿಕ್ಕಿದೆ. ಸದ್ಯ ಸಂಜನಾ ಬುರ್ಲಿ ನಿರ್ವಹಿಸುತ್ತಿದ್ದ ಪಾತ್ರ ಕೊನೆ ಆಗಿದೆ. ಮುಂದಿನ ದಿನಗಳಲ್ಲಿ ಧಾರಾವಾಹಿಯ ಟಿಆರ್​ಪಿ ಕುಗ್ಗುವ ಸಾಧ್ಯತೆ ಇದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ.

ಮೂರನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆಯುತ್ತಿತ್ತು. ಆದರೆ, ಈಗ ಧಾರಾವಾಹಿಯ ಟಿಆರ್​ಪಿ ಸ್ವಲ್ಪ ಕುಗ್ಗಿದೆ. ನಾಲ್ಕನೇ ಸ್ಥಾನದಲ್ಲಿ ಇತ್ತೀಚೆಗೆ ಪ್ರಸಾರ ಆರಂಭಿಸಿರೋ ‘ಅಣ್ಣಯ್ಯ’ ಧಾರಾವಾಹಿ ಇದೆ. ಅಕ್ಕ-ತಂಗಿ ಧಾರಾವಾಹಿ ಎಂದೇ ಫೇಮಸ್ ಆಗಿರೋ ‘ಲಕ್ಷ್ಮೀ ಬಾರಮ್ಮ’ ಹಾಗೂ ‘ಭಾಗ್ಯ ಲಕ್ಷ್ಮೀ’ ಧಾರಾವಾಹಿಗಳು ಐದನೇ ಸ್ಥಾನದಲ್ಲಿ ಇವೆ.

ಇದನ್ನೂ ಓದಿ: ಗುರುಪ್ರಸಾದ್ ಸಾವಿನ ಬಳಿಕ ಟೀಕೆ ಮಾಡಿದ ಜಗ್ಗೇಶ್​ಗೆ ಜಗದೀಶ್ ಕ್ಲಾಸ್

‘ಸೀತಾ ರಾಮ’ ಧಾರಾವಾಹಿಯಲ್ಲಿ ಸಾಕಷ್ಟು ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಆದರೆ, ಇದೇ ಸಂದರ್ಭದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿರುವುದರಿಂದ ಈ ಧಾರಾವಾಹಿ ನೋಡುವವರ ಸಂಖ್ಯೆ ಸ್ವಲ್ಪ ಕಡಿಮೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ