ರಮ್ಯಾ ಮಾಡಿದ ಸಹಾಯ ಸ್ಮರಿಸಿದ ನಾಗಶೇಖರ್, ಹಂಚಿಕೊಂಡರು ‘ಸಂಜು ವೆಡ್ಸ್ ಗೀತಾ’ ಸಿನಿಮಾದ ಅಪರೂಪದ ವಿಷಯ

ಶ್ರೀನಗರ ಕಿಟ್ಟಿ-ರಮ್ಯಾ ನಟಿಸಿರುವ ಸಂಜು ವೆಡ್ಸ್ ಗೀತಾ ಸಿನಿಮಾದ ಬಗ್ಗೆ ಕೆಲವು ಅಪರೂಪದ ಸಂಗತಿಗಳನ್ನು ಸಿನಿಮಾದ ನಿರ್ದೇಶಕ ನಿರ್ದೇಶಕ ನಾಗಶೇಖರ್ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದಾರೆ.

ರಮ್ಯಾ ಮಾಡಿದ ಸಹಾಯ ಸ್ಮರಿಸಿದ ನಾಗಶೇಖರ್, ಹಂಚಿಕೊಂಡರು 'ಸಂಜು ವೆಡ್ಸ್ ಗೀತಾ' ಸಿನಿಮಾದ ಅಪರೂಪದ ವಿಷಯ
ಸಂಜು ವೆಡ್ಸ್ ಗೀತಾ
Follow us
|

Updated on: Mar 26, 2023 | 7:00 AM

ವೀಕೆಂಡ್ ವಿತ್ ರಮೇಶ್ (Weekend With Ramesh) ಸೀಸನ್ 5 ರ ಮೊದಲ ಎಪಿಸೋಡ್​ಗೆ ರಮ್ಯಾ (Ramya) ಅತಿಥಿಯಾಗಿ ಆಗಮಿಸಿ ಸಾಧಕರ ಕುರ್ಚಿ ಅಲಂಕರಿಸಿದ್ದಾರೆ. ಮೊದಲ ಎಪಿಸೋಡ್​ನಲ್ಲಿ ರಮ್ಯಾರ ಬಾಲ್ಯ, ಶಾಲೆ, ಗೆಳೆಯರ ಬಗ್ಗೆ ಹಲವು ವಿಷಯಗಳನ್ನು ಶೋ ತೆರೆದಿಟ್ಟಿದೆ. ಇದರ ಜೊತೆಗೆ ರಮ್ಯಾರ ಸಿನಿ ಜರ್ನಿಯ ಬಗ್ಗೆಯೂ ಶೋನಲ್ಲಿ ಬೆಳಕು ಚೆಲ್ಲಲಾಗಿದ್ದು, ರಮ್ಯಾರ ವೃತ್ತಿ ಬದುಕಿನ ಸೂಪರ್ ಹಿಟ್ ಸಿನಿಮಾ ಸಂಜು ವೆಡ್ಸ್ ಗೀತಾ ಬಗೆಗಿನ ಕೆಲವು ಅಪರೂಪದ ಮಾಹಿತಿಗಳು ಮೊದಲ ಎಪಿಸೋಡ್​​ನಲ್ಲಿ ಬಹಿರಂಗಗೊಂಡಿವೆ.

ಶೋನಲ್ಲಿ ರಮ್ಯಾರ ಮೊದಲ ಸಿನಿಮಾ ಅಭಿ, ಎರಡನೇ ಹಿಟ್ ಸಿನಿಮಾ ಎಕ್ಸ್​ಕ್ಯೂಸ್​ಮಿ ಬಳಿಕ ಮಾತು ಸಂಜು ವೆಡ್ಸ್ ಗೀತಾ ಸಿನಿಮಾದ ಕಡೆಗೆ ಹೊರಳಿತು. ಮೊದಲಿಗೆ ಸಂಜು ವೆಡ್ಸ್ ಗೀತಾ ಸಿನಿಮಾದ ನಿರ್ದೇಶಕ ನಾಗಶೇಖರ್ ಅವರ ವಿಡಿಯೋ ಪ್ರಸಾರ ಮಾಡಲಾಯಿತು. ಅದು ಮುಗಿದಂತೆಯೇ ನಾಗಶೇಖರ್ ಹಾಗೂ ಸಂಜು ವೆಡ್ಸ್ ಗೀತಾ ಸಿನಿಮಾದ ನಾಯಕ ಶ್ರೀನಗರ ಕಿಟ್ಟಿ ವೀಕೆಂಡ್ ವೇದಿಕೆಗೆ ಆಗಮಿಸಿ ರಮ್ಯಾಗೆ ಶಾಕ್ ನೀಡಿದರು.

ಆಗ ಮಾತನಾಡಿದ ನಾಗಶೇಖರ್, ”ಹಣ ಖಾಲಿಯಾಗಿ ಸಂಜು ವೆಡ್ಸ್ ಗೀತಾ ಸಿನಿಮಾ ನಿಂತು ಹೋಗಿತ್ತು. ಆಗ ರಮ್ಯಾ ತಮ್ಮ ಹಣ ಹಾಕಿ ಸಿನಿಮಾದ ಚಿತ್ರೀಕರಣ ಮುಗಿಯುವಂತೆ ಮಾಡಿದರು. ಆ ಸಿನಿಮಾ ಸೂಪರ್ ಹಿಟ್ ಆಗಿ ನನಗೆ ಒಂದು ನೆಲೆ ಕೊಟ್ಟಿತು. ನನ್ನ ಮನೆಯಲ್ಲಿ ನಾನು ದೇವರ ಜೊತೆಗೆ ವಸ್ತುವೊಂದನ್ನಿಟ್ಟು ಪೂಜಿಸುತ್ತೇನೆ ಅದನ್ನು ರಮ್ಯಾಗೆ ಉಡುಗೊರೆಯಾಗಿ ತಂದಿದ್ದೇನೆ ಎಂದು ರಮ್ಯಾಗೆ ಉಡುಗೊರೆ ಕೊಟ್ಟರು. ಉಡುಗೊರೆಯನ್ನು ಬಿಚ್ಚಿ ನೋಡಿದ ರಮ್ಯಾಗೆ ಶಾಕ್. ಅದು ಸಂಜು ವೆಡ್ಸ್ ಗೀತಾ ಸಿನಿಮಾದ ಕ್ಲಾಪ್ ಆಗಿತ್ತು. ಅದನ್ನು ತಾನೇ ಇಟ್ಟುಕೊಳ್ಳುವುದಾಗಿ ರಮ್ಯಾ ಹೇಳಿದರು.

ಊಟಿಯಲ್ಲಿ ಮಳೆಯಲ್ಲಿ ಶೂಟಿಂಗ್ ಮಾಡಿದ್ದು, ಯಾರ ಬಳಿಯೂ ಜಾಕೆಟ್, ಬೂಟ್ ಇಲ್ಲದ್ದನ್ನು ಕಂಡು ರಮ್ಯಾ ಹೋಗಿ ಎಲ್ಲರಿಗೂ ಜಾಕೆಟ್, ಬೂಟ್​ಗಳನ್ನು ತಂದಿದ್ದನ್ನು ಸಹ ಇದೇ ಸಮಯದಲ್ಲಿ ನೆನಪಿಸಿಕೊಂಡರು. ಅಲ್ಲದೆ, ಸಂಜು ವೆಡ್ಸ್ ಸಿನಿಮಾದ ಕತೆಯನ್ನು ರಮ್ಯಾರ ತಂದೆ ಮೊದಲು ಕೇಳಿ ಶುಭ ಹಾರೈಸಿದ್ದಲ್ಲದೆ, ಸಿನಿಮಾವನ್ನು ಮೊದಲು ನೋಡಿದ್ದು ಸಹ ಅವರೇ ಎಂಬುದನ್ನು ನಾಗಶೇಖರ್ ಹೇಳಿದರು. ನಟ ಕಿಟ್ಟಿ ಸಹ ರಮ್ಯಾರ ಸ್ನೇಹವನ್ನು ನೆನಪಿಸಿಕೊಂಡರು. ರಮ್ಯಾ ಹಾಗೂ ಕಿಟ್ಟಿ ಸೇರಿ ಸಂಜು ವೆಡ್ಸ್ ಗೀತಾ ಸಿನಿಮಾದ ದೃಶ್ಯವೊಂದನ್ನು ವೇದಿಕೆ ಮೇಲೆ ನಟಿಸಿದರು.

ನಟಿ ರಮ್ಯಾ ಸಹ ಸಂಜು ವೆಡ್ಸ್ ಗೀತಾ ಸಿನಿಮಾ ಚಿತ್ರೀಕರಣದ ನೆನಪುಗಳಿಗೆ ಜಾರಿದರು. ಶರಣ್ ನಗಿಸುತ್ತಿದ್ದ ರೀತಿ, ಅರುಣ್ ಸಾಗರ್ ಎಲ್ಲವನ್ನೂ ನೆನಪು ಮಾಡಿಕೊಂಡರು. ಅದೊಂದು ಬಹಳ ಫನ್ ಆದ ಚಿತ್ರೀಕರಣವಾಗಿತ್ತು ಎಂದರು ನಟಿ ರಮ್ಯಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು