AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ವಿಥ್ ರಮೇಶ್ ಮೊದಲ ಎಪಿಸೋಡ್​ಗೆ ರಿಷಬ್ ಬದಲು ಬೇರೆ ಅತಿಥಿ? ಲಿಸ್ಟ್​ನಲ್ಲಿ ಯಾರ್ಯಾರಿದ್ದಾರೆ?

ವೀಕೆಂಡ್ ವಿತ್ ರಮೇಶ್ ಹೊಸ ಸೀಸನ್​ನ ಮೊದಲ ಎಪಿಸೋಡ್​ಗೆ ಕಾಂತಾರ ನಾಯಕ ರಿಷಬ್ ಶೆಟ್ಟಿ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಈಗ ಮತ್ತೊಬ್ಬ ಸಾಧಕರ ಹೆಸರು ಮುನ್ನೆಲೆಗೆ ಬಂದಿದೆ.

ವೀಕೆಂಡ್ ವಿಥ್ ರಮೇಶ್ ಮೊದಲ ಎಪಿಸೋಡ್​ಗೆ ರಿಷಬ್ ಬದಲು ಬೇರೆ ಅತಿಥಿ? ಲಿಸ್ಟ್​ನಲ್ಲಿ ಯಾರ್ಯಾರಿದ್ದಾರೆ?
ವೀಕೆಂಡ್ ವಿತ್ ರಮೇಶ್
ಮಂಜುನಾಥ ಸಿ.
|

Updated on: Mar 11, 2023 | 11:02 PM

Share

ಭಾರಿ ಜನಪ್ರಿಯತೆ ಗಳಿಸಿದ್ದ ಟಿವಿ ಶೋ ವೀಕೆಂಡ್ ವಿತ್ ರಮೇಶ್​ನ (Weekend With Ramesh) ಹೊಸ ಸೀಸನ್ ಶೀಘ್ರವೇ ಆರಂಭವಾಗಲಿದೆ. ಶೋನ ಪ್ರೋಮೋ ಇದಾಗಲೇ ಬಿಡುಗಡೆ ಆಗಿದ್ದು, ಕೆಲವೇ ದಿನಗಳಲ್ಲಿ ಎಪಿಸೋಡ್ ಪ್ರಸಾರ ಆರಂಭವಾಗಲಿದೆ. ಈ ಸೀಸನ್​ನ ಮೊದಲ ಎಪಿಸೋಡ್​ಗೆ ಕಾಂತಾರ ನಾಯಕ ರಿಷಬ್ ಶೆಟ್ಟಿ (Rishab Shetty) ಅತಿಥಿಯಾಗಿ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಈಗ ಮತ್ತೊಬ್ಬ ಸಾಧಕರ ಹೆಸರು ಮುನ್ನೆಲೆಗೆ ಬಂದಿದೆ.

ಈ ಸೀಸನ್​ನ ಮೊದಲ ಎಪಿಸೋಡ್​ಗೆ ರಿಷಬ್ ಶೆಟ್ಟಿ ಅತಿಥಿಯಾಗಿ ಭಾಗವಹಿಸಲಿದ್ದಾರೆ ಸಾಧಕರ ಕುರ್ಚಿಯನ್ನು ಅಲಂಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಕೆಲವು ಸುದ್ದಿಗಳ ಪ್ರಕಾರ ಮೊದಲ ಎಪಿಸೋಡ್​ಗೆ ರಿಷಬ್ ಶೆಟ್ಟಿಯ ಬದಲಾಗಿ ಕರ್ನಾಟಕದವರೇ ಆದರೂ ಭಾರತದಾದ್ಯಂತ ಹೆಸರು ಮಾಡಿರುವ ಪ್ರಭುದೇವ ಅತಿಥಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಪ್ರಭುದೇವ ಪಾಲ್ಗೊಂಡಿದ್ದರು ಎನ್ನಲಾಗುತ್ತಿದೆ.

ರಿಷಬ್ ಶೆಟ್ಟಿ ಸಹ ಈ ಬಾರಿ ಸಾಧಕರ ಕುರ್ಚಿಯಲ್ಲಿ ಕೂರುವುದು ಪಕ್ಕಾ ಆಗಿದೆ. ರಿಷಬ್ ಶೆಟ್ಟಿ ಮಾತ್ರವೇ ಅಲ್ಲದೆ ಹಿಂದಿನ ಸೀಸನ್​ನಲ್ಲಿ ಸಾಧಕರ ಕುರ್ಚಿ ಏರದೇ ಇದ್ದ ಹಲವು ಸಾಧಕರು ಈ ಬಾರಿ ಕುರ್ಚಿ ಏರಲಿದ್ದಾರೆ. ಈ ಬಾರಿ ಸಿನಿಮಾ, ರಾಜಕೀಯ ಮಾತ್ರವೇ ಅಲ್ಲದೆ ಸಾಮಾನ್ಯರಾಗಿದ್ದು ಜನಸೇವೆ ಮಾಡಿದವರು ಸಹ ಅತಿಥಿಗಳಾಗಿ ಆಗಮಿಸಲಿದ್ದಾರೆ.

ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ನಟ ಡಾಲಿ ಧನಂಜಯ್, ನಟಿ ರಮ್ಯಾ, ಮಾಲಾಶ್ರೀ, ವಿಜಯ್ ಕಿರಗಂದೂರು, ರಕ್ಷಿತ್ ಶೆಟ್ಟಿ, ರಚಿತಾ ರಾಮ್, ನೀನಾಸಂ ಸತೀಶ್, ಆರ್ ಚಂದ್ರು ಇನ್ನೂ ಕೆಲವರನ್ನು ಈ ಬಾರಿ ವೀಕೆಂಡ್ ವಿತ್ ರಮೇಶ್​ಗೆ ಕರೆತರಬೇಕೆಂಬ ಒತ್ತಾಯ ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿದೆ. ಇವರಲ್ಲಿ ಎಷ್ಟು ಮಂದಿ ಸಾಧಕರ ಕುರ್ಚಿ ಏರುತ್ತಾರೆ ಕಾದು ನೋಡಬೇಕಿದೆ.

ಜೀ ಕನ್ನಡ ಚಾನೆಲ್​ನವರು ವೀಕೆಂಡ್ ವಿತ್ ರಮೇಶ್ ಹೊಸ ಸೀಸನ್​ನ ಚಿತ್ರೀಕರಣ ಈಗಾಗಲೇ ಪ್ರಾರಂಭಿಸಿದ್ದು, ಕೆಲವು ಎಪಿಸೋಡ್​ಗಳ ಚಿತ್ರೀಕರಣ ಮುಗಿಸಿದೆ ಎನ್ನಲಾಗುತ್ತಿದೆ. ಕೆಲವೇ ದಿನಗಳಲ್ಲಿ ಕಾರ್ಯಕ್ರಮದ ಹೊಸ ಪ್ರೋಮೋ ಬಿಡುಗಡೆ ಆಗಲಿದ್ದು, ಹೊಸ ಸೀಸನ್​ನ ಮೊದಲ ಎಪಿಸೋಡ್​ನ ಪ್ರಸಾರದ ದಿನಾಂಕ ಹಾಗೂ ಅತಿಥಿಗಳ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ