AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekend With Ramesh: ಈ ವಾರ ಸಾಧಕರ ಕುರ್ಚಿ ಮೇಲೆ ಕವಿರತ್ನ

Weekend With Ramesh: ಈ ವಾರ ವೀಕೆಂಡ್ ವಿತ್ ರಮೇಶ್ ಸಾಧಕರ ಕುರ್ಚಿ ಏರಲಿದ್ದಾರೆ ಪದಗಾರುಡಿಗ ವಿ ನಾಗೇಂದ್ರ ಪ್ರಸಾದ್.

Weekend With Ramesh: ಈ ವಾರ ಸಾಧಕರ ಕುರ್ಚಿ ಮೇಲೆ ಕವಿರತ್ನ
ವಿ ನಾಗೇಂದ್ರ ಪ್ರಸಾದ್
ಮಂಜುನಾಥ ಸಿ.
|

Updated on:May 16, 2023 | 6:14 PM

Share

ವೀಕೆಂಡ್ ವಿತ್ ರಮೇಶ್ (Weekend With Ramesh) ಐದನೇ ಸೀಸನ್ ಈ ವರೆಗೆ ಹಲವು ಸಾಧಕರನ್ನು ಪರಿಚಯಸಿದೆ. ಸಿನಿಮಾ ಕ್ಷೇತ್ರದ ಸಾಧಕರು ಮಾತ್ರವೇ ಅಲ್ಲದೆ ಇತರೆ ಕ್ಷೇತ್ರದ ಸಾಧಕರನ್ನು ಸಹ ಸಾಧಕರ ಕುರ್ಚಿಯ ಮೇಲೆ ಕೂರಿಸಿ ಅವರ ಜೀವನದ ಪುಟಗಳನ್ನು ತಿರುವಿ ಹಾಕಲಾಗುತ್ತಿದೆ. ಕಳೆದ ವಾರ ಡ್ಯಾನ್ಸ್ ಮಾಸ್ಟರ್ ಚಿನ್ನಿ ಪ್ರಕಾಶ್ ಹಾಗೂ ಥಟ್ ಅಂತ ಹೇಳಿ ಕಾರ್ಯಕ್ರಮದ ಖ್ಯಾತಿಯ ನಾ ಸೋಮೇಶ್ವರ್ ಅವರು ಸಾಧಕರ ಕುರ್ಚಿಯ ಮೇಲೆ ಕೂತಿದ್ದರು. ಈ ಬಾರಿ ಮತ್ತೆ ಸಿನಿಮಾ ರಂಗಕ್ಕೆ ಸಂಬಂಧಿಸಿದ ವ್ಯಕ್ತಿ ಸಾಧಕರ ಕುರ್ಚಿ ಏರಿದ್ದಾರೆ ಅವರೇ ಗೀತ ಸಾಹಿತಿ ವಿ.ನಾಗೇಂದ್ರ ಪ್ರಸಾದ್ (V Nagendra Prasad).

ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದಲೂ ಗೀತ ಸಾಹಿತಿಯಾಗಿ ಗುರುತಿಸಿಕೊಂಡಿರುವ ವಿ ನಾಗೇಂದ್ರ ಪ್ರಸಾದ್ ಅವರು ಈ ವಾರ ವೀಕೆಂಡ್ ವಿತ್ ರಮೇಶ್ ವೇದಿಕೆಗೆ ಸಾಧಕರಾಗಿ ಆಗಮಿಸಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಅವರ ಎಪಿಸೋಡ್​ನ ಪ್ರೋಮೋ ಈಗಾಗಲೇ ಪ್ರಸಾರಗೊಂಡಿದ್ದು ‘ನಾನು ಯಾವ ಉದ್ಯೋಗ ಬಯಸಿದ್ದೆನೋ ಅದೇ ಉದ್ಯೋಗ ನನಗೆ ಸಿಕ್ಕಿದ್ದೆ ನನ್ನ ಗೆಲುವು’ ಎಂದಿದ್ದಾರೆ.

ವಿ.ನಾಗೇಂದ್ರ ಪ್ರಸಾದ್ ಅವರ ಎಪಿಸೋಡ್​ಗೆ ಸಂಗೀತ ನಿರ್ದೇಶಕ ಹರಿಕೃಷ್ಣ ಸೇರಿದಂತೆ ಇನ್ನು ಹಲವು ಮಂದಿ ಆಗಮಿಸಿದ್ದಾರೆ. ಎಪಿಸೋಡ್​ನಲ್ಲಿ ವಿ ನಾಗೇಂದ್ರ ಪ್ರಸಾದ್ ರಚಿಸಿರುವ ಹಲವು ಹಾಡುಗಳನ್ನು ಹಾಡಲಾಗಿದೆ ಮಾತ್ರವಲ್ಲ ಸಾಧಕರ ಕುರ್ಚಿ ಮೇಲೆ ಕುಳಿತು ನಾಗೇಂದ್ರ ಪ್ರಸಾದ್ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರದ ಕುರಿತಾಗಿ ಹಾಡೊಂದನ್ನು ಕಟ್ಟಿ ಅಲ್ಲಿಯೇ ಗಾಯಕರ ಕೈಯಲ್ಲಿ ಹಾಡಿಸಿದ್ದಾರೆ.

ಎಪಿಸೋಡ್​ನ ವಿಶೇಷತೆಯೆಂದರೆ ನಾಗೇಂದ್ರ ಪ್ರಸಾದ್ ಎಪಿಸೋಡ್​ನಲ್ಲಿ ಕನ್ನಡದ ಅತ್ಯುತ್ತಮ ಸಂಗೀತಗಾರ, ಗೀತ ಸಾಹಿತಿ ಹಂಸಲೇಖ ಕರೆ ಮಾಡಿದ್ದು, ”ನಾನು ಕುಳಿತುಕೊಳ್ಳಬೇಕಾದ ಸ್ಥಾನದಲ್ಲಿ ನಾಗೇಂದ್ರ ಪ್ರಸಾದ್ ಕುಳಿತುಕೊಳ್ಳಬೇಕು ಎಂಬುದೇ ನನ್ನ ಹಾರೈಕೆ” ಎಂದಿದ್ದಾರೆ. ಗುರುಗಳ ಈ ಮಾತು ನಾಗೇಂದ್ರ ಪ್ರಸಾದ್ ಅವರನ್ನು ಭಾವುಕಗೊಳಿಸಿದೆ. ಅಂದಹಾಗೆ, ವೀಕೆಂಡ್ ವಿತ್ ರಮೇಶ್ ಪ್ರಾರಂಭವಾದಾಗಿನಿಂದಲೂ ಹಂಸಲೇಖ ಅವರನ್ನು ಕರೆಸುವಂತೆ ವೀಕ್ಷಿಕರು ಒತ್ತಾಯಿಸುತ್ತಲೇ ಇದ್ದಾರೆ ಆದರೆ ಈ ವರೆಗೆ ಹಂಸಲೇಖ ವೀಕೆಂಡ್ ವಿತ್ ರಮೇಶ್​ಗೆ ಬಂದಿಲ್ಲ.

ಇದನ್ನೂ ಓದಿ:ಬರಿಗೈಯಲ್ಲಿ ಹೋಗಿ ಮದುವೆ ಆಗಿದ್ದ ಸೋಮೇಶ್ವರ; ‘ವೀಕೆಂಡ್ ವಿತ್ ರಮೇಶ್​’ ವೇದಿಕೆಯಲ್ಲಿ ಹೊರಬಿತ್ತು ಲವ್​ಸ್ಟೋರಿ

ಮಂಡ್ಯ ಜಿಲ್ಲೆಯವರಾದ ನಾಗೇಂದ್ರ ಪ್ರಸಾದ್ ಚಿತ್ರರಂಗಕ್ಕೆ ಬಂದು ಎರಡು ದಶಕಗಳಾಗಿವೆ. 2000 ರಲ್ಲಿ ಮೊದಲ ಬಾರಿಗೆ ಸಿನಿಮಾ ಒಂದಕ್ಕೆ ಗೀತ ರಚನೆ ಮಾಡಿದ್ದರು. ಆ ನಂತರ ಸಾಲು-ಸಾಲಾಗಿ ಕನ್ನಡದ ಅನೇಕ ಹಿಟ್-ಸೂಪರ್ ಸಿನಿಮಾಗಳಿಗೆ ಸೂಪರ್-ಡೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಭಾವುಕ, ಯುಗಳ ಗೀತೆ, ಮಾಸ್ ಹಾಡುಗಳು, ಹೀರೋಗಳಿಗೆ ಇಂಟ್ರೊಡಕ್ಷನ್ ಹಾಡುಗಳು, ಕನ್ನಡದ ಕುರಿತಾದ ಹಾಡುಗಳು ಯಾವುದೇ ಒಂದು ಬಗೆಯ ಹಾಡುಗಳಿಗೆ ಅಂಟಿಕೊಳ್ಳದೆ ಎಲ್ಲ ರೀತಿಯ ಹಾಡುಗಳನ್ನು ಬರೆದ ಖ್ಯಾತಿ ನಾಗೇಂದ್ರ ಪ್ರಸಾದ್ ಅವರದ್ದು.

ಗೀತ ಸಾಹಿತ್ಯ ಮಾತ್ರವೇ ಅಲ್ಲದೆ ಸಂಗೀತ ನಿರ್ದೇಶನ, ಸಂಭಾಷಣೆ ಸೇರಿದಂತೆ ಸಿನಿಮಾದ ಇನ್ನೂ ಕೆಲವು ವಿಭಾಗಗಳಲ್ಲಿ ನಾಗೇಂದ್ರ ಪ್ರಸಾದ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ವಾರ ನಾಗೇಂದ್ರ ಪ್ರಸಾದ್​ರ ಜೀವನದ ಹಲವು ಪುಟುಗಳು ವೀಕೆಂಡ್ ವಿತ್ ರಮೇಶ್​ನಲ್ಲಿ ತೆರೆದುಕೊಳ್ಳಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Tue, 16 May 23

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ