Weekend With Ramesh: ವೀಕೆಂಡ್ ವಿತ್ ರಮೇಶ್ ಅತಿಥಿಗಳ ಪಟ್ಟಿ ಬಹಿರಂಗಪಡಿಸಿದ ರಮೇಶ್

ವೀಕೆಂಡ್ ವಿತ್ ರಮೇಶ್ ಹೊಸ ಸೀಸನ್ ಮಾರ್ಚ್ 25 ರಿಂದ ಪ್ರಸಾರವಾಗಲಿದೆ. ಈ ಸೀಸನ್​ನಲ್ಲಿ ಸಾಧಕರ ಕುರ್ಚಿ ಮೇಲೆ ಕೂರಲಿರುವ ಅತಿಥಿಗಳ ಪಟ್ಟಿಯನ್ನು ನಿರೂಪಕ ರಮೇಶ್ ಅರವಿಂದ್ ಬಹಿರಂಗಗೊಳಿಸಿದ್ದಾರೆ. ಇಲ್ಲಿದೆ ನೋಡಿ ಪಟ್ಟಿ.

Weekend With Ramesh: ವೀಕೆಂಡ್ ವಿತ್ ರಮೇಶ್ ಅತಿಥಿಗಳ ಪಟ್ಟಿ ಬಹಿರಂಗಪಡಿಸಿದ ರಮೇಶ್
ವೀಕೆಂಡ್ ವಿತ್ ರಮೇಶ್
Follow us
|

Updated on: Mar 20, 2023 | 6:27 PM

ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ (Reality Show) ಒಂದಾಗಿದ ‘ವೀಕೆಂಡ್ ವಿತ್ ರಮೇಶ್‘ (Weekend With Ramesh) ಹೊಸ ಸೀಸನ್ ಪ್ರಾರಂಭವಾಗಲಿದೆ. ಶೋನ ಪ್ರೋಮೋಗಳು ಈಗಾಗಲೇ ಬಿಡುಗಡೆ ಆಗಿದ್ದು, ಮೊದಲ ಸಂಚಿಕೆ ಮಾರ್ಚ್ 25 ರಂದು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಐದನೇ ಸೀಸನ್ ಇದಾಗಿರಲಿದ್ದು ಸೀಸನ್ ಪ್ರಾರಂಭಕ್ಕೂ ಮುನ್ನ ನಿರೂಪಕ ರಮೇಶ್ ಅರವಿಂದ್ ಹಾಗೂ ಜೀ ವಾಹಿನಿಯ ಚೀಫ್ ಕಂಟೆಂಟ್ ಆಫೀಸರ್ ರಾಘವೇಂದ್ರ ಹುಣಸೂರು ಅವರು ಪತ್ರಿಕಾಗೋಷ್ಠಿಯಲ್ಲಿ ಶೋ ಕುರಿತಾಗಿ ಮಾಹಿತಿ ನೀಡಿದ್ದು, ಮೊದಲ ಎಪಿಸೋಡ್​ನ ಅತಿಥಿ ಯಾರಾಗಲಿದ್ದಾರೆ ಎಂಬುದರ ಜೊತೆಗೆ ಈ ಸೀಸನ್​ನಲ್ಲಿ ಕಾಣಿಸಿಕೊಳ್ಳುವ ಇತರೆ ಕೆಲವು ಅತಿಥಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಇಷ್ಟು ದಿನ ಹರಿದಾಡಿದ್ದ ಸುದ್ದಿಯ ಪ್ರಕಾರ ಮೊದಲ ಎಪಿಸೋಡ್​ನಲ್ಲಿ ರಿಷಬ್ ಶೆಟ್ಟಿ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ಅದು ಸುಳ್ಳಾಗಿದ್ದು ಮೊದಲ ಎಪಿಸೋಡ್​ಗೆ ಸ್ಯಾಂಡಲ್​ವುಡ್ ಕ್ವೀನ್ ನಟಿ ರಮ್ಯಾ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ರಮ್ಯಾ ಜೊತೆಗಿನ ಎಪಿಸೋಡ್​ನ ಚಿತ್ರೀಕರಣ ಮಾರ್ಚ್ 21 ರಿಂದ ಪ್ರಾರಂಭವಾಗಲಿದೆ. ಎರಡನೇ ಎಪಿಸೋಡ್ ನಲ್ಲಿ ಡ್ಯಾನ್ಸ್ ಲಿಜೆಂಡ್ ಪ್ರಭುದೇವ ಸಾಧಕರ ಕುರ್ಚಿಯ ಮೇಲೆ ಕೂರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಸೀಸನ್​ನಲ್ಲಿ ನಟ ಧ್ರುವ ಸರ್ಜಾ, ನಟಿ ರಚಿತಾ ರಾಮ್, ನಟಿ ಮಾಲಾಶ್ರೀ, ಇಶಾ ಫೌಂಡೇಶನ್​ನ ಜಗ್ಗಿ ವಾಸುದೇವ್ , ಖ್ಯಾತ ಹೃದ್ರೋಗ ತಜ್ಞ ಮಂಜುನಾಥ್ ಸೇರಿದಂತೆ ಇನ್ನೂ ಹಲವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷವೆಂದರೆ ಇನ್ನು 16 ಸಾಧಕರ ಬಳಿಕ ನೂರನೇ ಸಾಧಕರು ಬರಲಿದ್ದು, ಆ ಎಪಿಸೋಡ್​ಗೆ ಬಹಳ ವಿಶೇಷ ಅತಿಥಿಯೊಬ್ಬರು ಸಾಧಕರ ಕುರ್ಚಿ ಏರಲಿದ್ದಾರೆ. ನೂರನೇ ಎಪಿಸೋಡ್​ಗೆ ಬರುವ ಅತಿಥಿ ಆ ಚೇರ್​ಗೆ ನ್ಯಾಯ ಕೊಡಲಿದ್ದಾರೆ ಎಂದಿದ್ದಾರೆ ನಟ ರಮೇಶ್.

ಇಲ್ಲಿಯವರೆಗೂ 84 ಸಾಧಕರು ಕುರ್ಚಿಯ ಮೇಲೆ ಕೂತಿದ್ದು 110 ಸಂಚಿಕೆಗಳು ಪ್ರಸಾರವಾಗಿವೆ. ಇನ್ನು 16 ಸಾಧಕರು ಅದ ಬಳಿಕ ಸೆಂಚೂರಿ ಭಾರಿಸುತ್ತೇವೆ. ಸಿನಿಮಾದಲ್ಲಿಯೂ ಸೆಂಚುರಿ ಹೋಡಿದಿದ್ದೇನೆ. ಈಗ ಇದರಲ್ಲೂ ಹೋಡೆದರೆ ಖುಷಿ ಆಗುತ್ತ್ತದೆ. ಇದನ್ನೆಲ್ಲ ನೋಡಿದಾಗ ನನಗೆ ಅನಿಸುತ್ತಿರುವುದು, ಎಲ್ಲಾ ಸೇಮ್, ಎಲ್ಲಾ ಸಾಧಕರು ಸಾಧನೆಗೆ ಹೋರಾಟವನ್ನು ಮಾಡಿದ್ದಾರೆ. ಕರ್ನಾಟಕದಲ್ಲಿ ಸಾಧಕರಿಗೆ ಕೊರತೆ ಇಲ್ಲ. ಕೇವಲ ನಟ, ರಾಜಕಾರಣಿ ಅಲ್ಲ ವೈದ್ಯರು, ರೈತರು, ನರ್ಸ್, ಹೀಗೆ ಹಲವರನ್ನು ಕರೆಸಬಹುದು. ಸ್ಪೂರ್ತಿ ತುಂಬುವಂತಹ ಕೆಲಸ ಮಾಡಬೇಕು. ಅದರಿಂದ, ಕರ್ನಾಟಕದಲ್ಲಿರೋ ಎಲ್ಲರಿಗೂ ತಮ್ಮ ನಿಜವಾದ ಶಕ್ತಿಯ ಅರಿವಾಗಿ, ಎಲ್ಲರೂ ತಮ್ಮ ಅತ್ಯುತ್ತಮ ವ್ಯಕ್ತಿತ್ವನ್ನು ಹೊರಗೆ ತೋರಬೇಕು ಅನ್ನುವುದೇ ವೀಕೆಂಡ್ ವಿತ್ ರಮೇಶ್ ಅನ್ನೋದೆ ಉದ್ದೇಶ ಎಂದರು ರಮೇಶ್ ಅರವಿಂದ್. ಇದೇ ಮಾರ್ಚ್ 25 ರಿಂದ ಸೀಸನ್ 5 ಪ್ರಸಾರವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ