AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Aravind: ‘ವೀಕೆಂಡ್ ವಿತ್ ರಮೇಶ್’​​ಗೆ ಈ ವಾರ ಬರಲಿದ್ದಾರೆ ಇಬ್ಬರು ಸಾಧಕರು

Weekend with Ramesh Season 5: ಮೂರನೇ ಅತಿಥಿಯಾಗಿ ವಿಶೇಷ ವ್ಯಕ್ತಿಯೊಬ್ಬರು ಬರಲಿದ್ದಾರೆ ಎಂದು ಈ ಶೋನ ನಿರೂಪಕ ರಮೇಶ್ ಅರವಿಂದ್ ಅವರು ಈ ಮೊದಲೇ ಘೋಷಣೆ ಮಾಡಿದ್ದರು. ಅವರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

Ramesh Aravind: ‘ವೀಕೆಂಡ್ ವಿತ್ ರಮೇಶ್’​​ಗೆ ಈ ವಾರ ಬರಲಿದ್ದಾರೆ ಇಬ್ಬರು ಸಾಧಕರು
ರಮೇಶ್ ಅರವಿಂದ್
ರಾಜೇಶ್ ದುಗ್ಗುಮನೆ
|

Updated on:Apr 05, 2023 | 10:35 AM

Share

‘ವೀಕೆಂಡ್ ವಿತ್ ರಮೇಶ್ ಸೀಸನ್ 5’ರಲ್ಲಿ ಈಗಾಗಲೇ ಎರಡು ಸಾಧಕರು ಬಂದು ಹೋಗಿದ್ದಾರೆ. ಈ ವಾರ ಮೂರನೇ ಸಾಧಕರ ಆಗಮನ ಆಗಲಿದೆ. ಮೂರನೇ ಅತಿಥಿಯಾಗಿ ವಿಶೇಷ ವ್ಯಕ್ತಿಯೊಬ್ಬರು ಬರಲಿದ್ದಾರೆ ಎಂದು ಈ ಶೋನ ನಿರೂಪಕ ರಮೇಶ್ ಅರವಿಂದ್ (Ramesh Aravind) ಅವರು ಈ ಮೊದಲೇ ಘೋಷಣೆ ಮಾಡಿದ್ದರು. ಅವರು ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಈ ವಾರ ಹಿರಿಯ ನಟ ದತ್ತಣ್ಣ (Dattanna) ಅವರು ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ದತ್ತಣ್ಣ ಚಿತ್ರರಂಗದಲ್ಲಿ ಮಾಡಿದ ಸಾಧನೆ ತುಂಬಾನೇ ದೊಡ್ಡದು. ಅದೇ ರೀತಿ ಡಾ. ಮಂಜುನಾಥ್ ಅವರು ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ಹೃದಯಾಘಾತ ಹೆಚ್ಚುತ್ತಿದೆ. ಡಾ. ಮಂಜುನಾಥ್ ಅವರು ಈ ಬಗ್ಗೆ ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸುವ ಸಾಧ್ಯತೆ ಇದೆ. ಇವರು ಈ ಕುರ್ಚಿಗೆ ಅರ್ಹರು ಎಂದು ಅನೇಕರು ಹೇಳಿದ್ದಾರೆ.

ದತ್ತಣ್ಣ ಅವರ ಬದುಕು ಅನೇಕರಿಗೆ ಮಾದರಿ. ಅವರಿಗೆ ಈಗ ವಯಸ್ಸು 80! ಈ ವಯಸ್ಸಿನಲ್ಲೂ ಸಿನಿಮಾ ಮಾಡುತ್ತಿದ್ದಾರೆ. ಅವರು ಒಪ್ಪಿ ಮಾಡುವ ಪಾತ್ರಗಳು ಈಗಲೂ ಗಮನ ಸೆಳೆಯುತ್ತವೆ. ಒಪ್ಪಿಕೊಂಡ ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ. ಅವರು ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಭಾರತೀಯ ವಾಯುಪಡೆಯಲ್ಲಿ ವಿಂಗ್​ ಕಮಾಂಡರ್ ಆಗಿದ್ದರು. 1965-86ರವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಿದ್ದರು.

1998ರಲ್ಲಿ ದತ್ತಣ್ಣ ಚಿತ್ರರಂಗಕ್ಕೆ ಕಾಲಿಟ್ಟರು. ಹಲವು ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರ ಜೀವನ ಅನೇಕರಿಗೆ ಮಾದರಿ. ಅವರ ಬಗ್ಗೆ ಜನರಿಗೆ ತಿಳಿಯದ ಇನ್ನೂ ಅನೇಕ ವಿಷಯಗಳಿವೆ. ಅದನ್ನು ಜನರ ಮುಂದಿಡುವ ಕಾರ್ಯ ‘ವೀಕೆಂಡ್ ವಿತ್ ರಮೇಶ್ ಮೂಲಕ ಆಗುತ್ತಿದೆ. ದತ್ತಣ್ಣ ಬರುತ್ತಿರುವ ಎಪಿಸೋಡ್ ನೋಡಲು ವೀಕ್ಷಕರು ಕಾದಿದ್ದಾರೆ.

ಇದನ್ನೂ ಓದಿ:  ಶೋನಲ್ಲಿ ಮಗನ ಬಗ್ಗೆ ಮಾತನಾಡಿಲಿಲ್ಲವೇಕೆ ಪ್ರಭುದೇವ? ಅಂಥಹದ್ದೇನಾಗಿತ್ತು?

‘ನಮ್ಮ ಕನ್ನಡ ಚಿತ್ರರಂಗದ ಹೆಮ್ಮೆಯ ಕಿರೀಟ ದತ್ತಣ್ಣ ಅವರು ಬರುತ್ತಿರೋದು ಖುಷಿ ಇದೆ’ ಎಂದು ಅನೇಕರು ಹೇಳಿದ್ದಾರೆ. ನಟಿ ರಮ್ಯಾ ಅವರು ‘ವೀಕೆಂಡ್ ವಿತ್ ರಮೇಶ್​’ ಐದನೇ ಸೀಸನ್​ನ ಮೊದಲ ಅತಿಥಿ ಆಗಿದ್ದರು. ಅವರು ಇಂಗ್ಲಿಷ್​ನಲ್ಲಿ ಮಾತನಾಡಿದ್ದಕ್ಕೆ ಅನೇಕರು ಬೇಸರಗೊಂಡಿದ್ದರು. ಎರಡನೇ ಅತಿಥಿಯಾಗಿ ಪ್ರಭುದೇವ ಬಂದಿದ್ದರು. ತಮಿಳು ಮಾತೃಭಾಷೆ ಆದರೂ ಅವರು ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸಿದ್ದರು. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ದತ್ತಣ್ಣ ಅವರು ಅತಿಥಿಯಾಗಿ ಬರ್ತಿರೋದು ಅನೇಕರಿಗೆ ಖುಷಿ ನೀಡಿದೆ. ಶನಿವಾರ ಹಾಗೂ ಭಾನುವಾರ ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:31 am, Wed, 5 April 23

Follow Us
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?