AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Aravind: ‘ವೀಕೆಂಡ್ ವಿತ್ ರಮೇಶ್’​​ಗೆ ಈ ವಾರ ಬರಲಿದ್ದಾರೆ ಇಬ್ಬರು ಸಾಧಕರು

Weekend with Ramesh Season 5: ಮೂರನೇ ಅತಿಥಿಯಾಗಿ ವಿಶೇಷ ವ್ಯಕ್ತಿಯೊಬ್ಬರು ಬರಲಿದ್ದಾರೆ ಎಂದು ಈ ಶೋನ ನಿರೂಪಕ ರಮೇಶ್ ಅರವಿಂದ್ ಅವರು ಈ ಮೊದಲೇ ಘೋಷಣೆ ಮಾಡಿದ್ದರು. ಅವರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

Ramesh Aravind: ‘ವೀಕೆಂಡ್ ವಿತ್ ರಮೇಶ್’​​ಗೆ ಈ ವಾರ ಬರಲಿದ್ದಾರೆ ಇಬ್ಬರು ಸಾಧಕರು
ರಮೇಶ್ ಅರವಿಂದ್
ರಾಜೇಶ್ ದುಗ್ಗುಮನೆ
|

Updated on:Apr 05, 2023 | 10:35 AM

Share

‘ವೀಕೆಂಡ್ ವಿತ್ ರಮೇಶ್ ಸೀಸನ್ 5’ರಲ್ಲಿ ಈಗಾಗಲೇ ಎರಡು ಸಾಧಕರು ಬಂದು ಹೋಗಿದ್ದಾರೆ. ಈ ವಾರ ಮೂರನೇ ಸಾಧಕರ ಆಗಮನ ಆಗಲಿದೆ. ಮೂರನೇ ಅತಿಥಿಯಾಗಿ ವಿಶೇಷ ವ್ಯಕ್ತಿಯೊಬ್ಬರು ಬರಲಿದ್ದಾರೆ ಎಂದು ಈ ಶೋನ ನಿರೂಪಕ ರಮೇಶ್ ಅರವಿಂದ್ (Ramesh Aravind) ಅವರು ಈ ಮೊದಲೇ ಘೋಷಣೆ ಮಾಡಿದ್ದರು. ಅವರು ಯಾರು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಈ ವಾರ ಹಿರಿಯ ನಟ ದತ್ತಣ್ಣ (Dattanna) ಅವರು ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ದತ್ತಣ್ಣ ಚಿತ್ರರಂಗದಲ್ಲಿ ಮಾಡಿದ ಸಾಧನೆ ತುಂಬಾನೇ ದೊಡ್ಡದು. ಅದೇ ರೀತಿ ಡಾ. ಮಂಜುನಾಥ್ ಅವರು ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ಹೃದಯಾಘಾತ ಹೆಚ್ಚುತ್ತಿದೆ. ಡಾ. ಮಂಜುನಾಥ್ ಅವರು ಈ ಬಗ್ಗೆ ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸುವ ಸಾಧ್ಯತೆ ಇದೆ. ಇವರು ಈ ಕುರ್ಚಿಗೆ ಅರ್ಹರು ಎಂದು ಅನೇಕರು ಹೇಳಿದ್ದಾರೆ.

ದತ್ತಣ್ಣ ಅವರ ಬದುಕು ಅನೇಕರಿಗೆ ಮಾದರಿ. ಅವರಿಗೆ ಈಗ ವಯಸ್ಸು 80! ಈ ವಯಸ್ಸಿನಲ್ಲೂ ಸಿನಿಮಾ ಮಾಡುತ್ತಿದ್ದಾರೆ. ಅವರು ಒಪ್ಪಿ ಮಾಡುವ ಪಾತ್ರಗಳು ಈಗಲೂ ಗಮನ ಸೆಳೆಯುತ್ತವೆ. ಒಪ್ಪಿಕೊಂಡ ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ. ಅವರು ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಭಾರತೀಯ ವಾಯುಪಡೆಯಲ್ಲಿ ವಿಂಗ್​ ಕಮಾಂಡರ್ ಆಗಿದ್ದರು. 1965-86ರವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಿದ್ದರು.

1998ರಲ್ಲಿ ದತ್ತಣ್ಣ ಚಿತ್ರರಂಗಕ್ಕೆ ಕಾಲಿಟ್ಟರು. ಹಲವು ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರ ಜೀವನ ಅನೇಕರಿಗೆ ಮಾದರಿ. ಅವರ ಬಗ್ಗೆ ಜನರಿಗೆ ತಿಳಿಯದ ಇನ್ನೂ ಅನೇಕ ವಿಷಯಗಳಿವೆ. ಅದನ್ನು ಜನರ ಮುಂದಿಡುವ ಕಾರ್ಯ ‘ವೀಕೆಂಡ್ ವಿತ್ ರಮೇಶ್ ಮೂಲಕ ಆಗುತ್ತಿದೆ. ದತ್ತಣ್ಣ ಬರುತ್ತಿರುವ ಎಪಿಸೋಡ್ ನೋಡಲು ವೀಕ್ಷಕರು ಕಾದಿದ್ದಾರೆ.

ಇದನ್ನೂ ಓದಿ:  ಶೋನಲ್ಲಿ ಮಗನ ಬಗ್ಗೆ ಮಾತನಾಡಿಲಿಲ್ಲವೇಕೆ ಪ್ರಭುದೇವ? ಅಂಥಹದ್ದೇನಾಗಿತ್ತು?

‘ನಮ್ಮ ಕನ್ನಡ ಚಿತ್ರರಂಗದ ಹೆಮ್ಮೆಯ ಕಿರೀಟ ದತ್ತಣ್ಣ ಅವರು ಬರುತ್ತಿರೋದು ಖುಷಿ ಇದೆ’ ಎಂದು ಅನೇಕರು ಹೇಳಿದ್ದಾರೆ. ನಟಿ ರಮ್ಯಾ ಅವರು ‘ವೀಕೆಂಡ್ ವಿತ್ ರಮೇಶ್​’ ಐದನೇ ಸೀಸನ್​ನ ಮೊದಲ ಅತಿಥಿ ಆಗಿದ್ದರು. ಅವರು ಇಂಗ್ಲಿಷ್​ನಲ್ಲಿ ಮಾತನಾಡಿದ್ದಕ್ಕೆ ಅನೇಕರು ಬೇಸರಗೊಂಡಿದ್ದರು. ಎರಡನೇ ಅತಿಥಿಯಾಗಿ ಪ್ರಭುದೇವ ಬಂದಿದ್ದರು. ತಮಿಳು ಮಾತೃಭಾಷೆ ಆದರೂ ಅವರು ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸಿದ್ದರು. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ದತ್ತಣ್ಣ ಅವರು ಅತಿಥಿಯಾಗಿ ಬರ್ತಿರೋದು ಅನೇಕರಿಗೆ ಖುಷಿ ನೀಡಿದೆ. ಶನಿವಾರ ಹಾಗೂ ಭಾನುವಾರ ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:31 am, Wed, 5 April 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!