AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಡಿಕೆ ಶಿವಕುಮಾರ್​ ಎಪಿಸೋಡ್​​ನೊಂದಿಗೆ ವೀಕೆಂಡ್ ವಿತ್​ ರಮೇಶ್ ಮುಗಿಯಲಿದೆ​; ಖಚಿತಪಡಿಸಿದ ವಾಹಿನಿ

WWR5 Grand Finale: ಈ ಸೀಸನ್​ನಲ್ಲಿ ಅವಿನಾಶ್, ಮಂಡ್ಯ ರಮೇಶ್, ಸಿಹಿ ಕಹಿ ಚಂದ್ರು, ನೆನಪಿರಲಿ ಪ್ರೇಮ್ ಮೊದಲಾದವರು ಬಂದು ಸಾಧಕರ ಚೇರ್ ಮೇಲೆ ಕುಳಿತು ಹೋಗಿದ್ದಾರೆ. ಈಗ ನೂರನೇ ಸಾಧಕರಾಗಿ ಡಿಕೆ ಶಿವಕುಮಾರ್ ಬರುತ್ತಿದ್ದಾರೆ.

DK Shivakumar: ಡಿಕೆ ಶಿವಕುಮಾರ್​ ಎಪಿಸೋಡ್​​ನೊಂದಿಗೆ ವೀಕೆಂಡ್ ವಿತ್​ ರಮೇಶ್ ಮುಗಿಯಲಿದೆ​; ಖಚಿತಪಡಿಸಿದ ವಾಹಿನಿ
ಡಿಕೆಶಿ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Jun 06, 2023 | 1:05 PM

Share

Weekend With Ramesh 5 Grand Finale: ‘ವೀಕೆಂಡ್ ವಿತ್ ರಮೇಶ್​ ಸೀಸನ್ 5’ರಲ್ಲಿ ಹಲವು ಸಾಧಕರು ಬಂದು ಹೋಗಿದ್ದಾರೆ. ಎಲ್ಲರೂ ತಮ್ಮ ಜರ್ನಿ ಬಗ್ಗೆ, ಕಷ್ಟದ ದಿನಗಳ ಬಗ್ಗೆ, ಯಶಸ್ಸು ಕಂಡ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ವಿಕೆಂಡ್ ವಿತ್ ರಮೇಶ್ ಮೊದಲ ಸೀಸನ್​ನಿಂದ ಐದನೇ ಸೀಸನ್​ವರೆಗೆ ಒಟ್ಟೂ 99 ಸಾಧಕರು ಬಂದು ಹೋಗಿದ್ದಾರೆ. 100ನೇ ಸಾಧಕನಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಆಗಮಿಸುತ್ತಿದ್ದಾರೆ. ಇದರ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ.

ಈ ಮೊದಲು ಮಾತನಾಡಿದ್ದ ರಮೇಶ್ ಅರವಿಂದ್ ಅವರು ನೂರನೇ ಅತಿಥಿ ಹೇಗಿರಲಿದ್ದಾರೆ ಎಂಬುದನ್ನು ವಿವರಿಸಿದ್ದರು. ‘ಐದನೇ ಸೀಸನ್​​ನ ಮೊದಲ ಅತಿಥಿಯಾಗಿ ರಮ್ಯಾ ಬರುತ್ತಿದ್ದಾರೆ. ನೂರನೇ ಅತಿಥಿ ತುಂಬಾನೇ ವಿಶೇಷವಾಗಿರಲಿದ್ದಾರೆ’ ಎಂದು ರಮೇಶ್ ಅರವಿಂದ್ ಹೇಳಿದ್ದರು. ಈಗ ನೂರನೇ ಅತಿಥಿಯಾಗಿ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: ವೀಕೆಂಡ್ ವಿತ್ ರಮೇಶ್​ಗೆ ಡಿಕೆ ಶಿವಕುಮಾರ್, ಸಾಧಕರ ಕುರ್ಚಿಯಲ್ಲಿ ಟ್ರಬಲ್ ಶೂಟರ್

‘ರಾಜ್ಯ ಕಂಡ ಪ್ರಚಂಡ ರಾಜಕಾರಣಿ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಬದುಕಿನ ಜರ್ನಿ ಅನಾವರಣ. ವೀಕೆಂಡ್ ವಿತ್ ರಮೇಶ್-5 ಗ್ರ್ಯಾಂಡ್ ಫಿನಾಲೆ. ಶನಿ-ಭಾನು ರಾತ್ರಿ ‌9ಕ್ಕೆ’ ಎಂದು ಹೊಸ ಪ್ರೋಮೋ ಹಂಚಿಕೊಂಡು ಕ್ಯಾಪ್ಶನ್ ನೀಡಲಾಗಿದೆ. ಈ ಮೂಲಕ ‘ವೀಕೆಂಡ್ ವಿತ್ ಎಪಿಸೋಡ್​ ಸೀಸನ್ 5’ ಕೊನೆ ಆಗಲಿದೆ ಎಂದು ವಾಹಿನಿ ಕಡೆಯಿಂದ ಮಾಹಿತಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:46 pm, Tue, 6 June 23

ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ