AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರೂಪದಲ್ಲಿ ಬರಲಿದೆ ‘ವೀಕೆಂಡ್​ ವಿತ್​ ರಮೇಶ್’​; ಪ್ರಸಾರ ಯಾವಾಗ?

Weekend with Ramesh: ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಒಟಿಟಿ ವ್ಯಾಪ್ತಿ ಹೆಚ್ಚಿದೆ. ಸಾಕಷ್ಟು ಜನರು ಒಟಿಟಿಯತ್ತ ಮುಖ ಮಾಡುತ್ತಿದ್ದಾರೆ. ಅಲ್ಲದೆ, ಹಿಂದಿಯಲ್ಲಿ ಬಿಗ್​ ಬಾಸ್​ ಶೋಅನ್ನು ಸಂಪೂರ್ಣವಾಗಿ ಒಟಿಟಿಯಲ್ಲೇ ಪ್ರಸಾರ ಮಾಡಲಾಗಿತ್ತು.

ಹೊಸ ರೂಪದಲ್ಲಿ ಬರಲಿದೆ ‘ವೀಕೆಂಡ್​ ವಿತ್​ ರಮೇಶ್’​; ಪ್ರಸಾರ ಯಾವಾಗ?
TV9 Web
| Edited By: |

Updated on:Oct 18, 2021 | 7:03 PM

Share

‘ವೀಕೆಂಡ್​ ವಿತ್​ ರಮೇಶ್​’ ಶೋ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿದೆ. ಈ ಶೋ ಯಶಸ್ವಿಯಾಗಿ ನಾಲ್ಕು ಸೀಸನ್​ಗಳನ್ನು ಪೂರ್ಣಗೊಳಿಸಿದೆ. ಈಗ ಐದನೇ ಸೀಸನ್​ ಪ್ರಸಾರಕ್ಕೆ ಸಿದ್ಧತೆ ನಡೆದಿದೆ. ಆದರೆ, ಈ ಬಾರಿ ಈ ಶೋನ ರೂಪುರೇಷೆ ಸಂಪೂರ್ಣವಾಗಿ ಬದಲಾಗಲಿದೆ. ಈ ವಿಚಾರ ವೀಕ್ಷಕರಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ.

‘ವೀಕೆಂಡ್​ ವಿತ್​ ರಮೇಶ್’​ ಪ್ರತಿ ಸೀಸನ್​ನಲ್ಲಿ ಸಾಧಕರನ್ನು ಕರೆತಂದು ಅವರು ಮಾಡಿದ ಸಾಧನೆ ಬಗ್ಗೆ ಹೇಳಲಾಗುತ್ತದೆ. ಅವರು ಅನುಭವಿಸಿದ ಕಷ್ಟ, ಅವರಿಗೆ ಯಶಸ್ಸು ಸಿಕ್ಕಿದ್ದು ಹೇಗೆ ಎಂಬಿತ್ಯಾದಿ ವಿವರಗಳನ್ನು ಇಲ್ಲಿ ಅದ್ಭುತವಾಗಿ ಕಟ್ಟಿಕೊಡಲಾಗುತ್ತದೆ. ಇನ್ನು, ಸಾಧಕರ ಕಷ್ಟದ ಹಾದಿಯಲ್ಲಿ ಅವರಿಗೆ ಬೆನ್ನೆಲುಬಾಗಿ ನಿಂತ ಅನೇಕರನ್ನು ವೇದಿಕೆ ಮೇಲೆ ಕರೆತರಲಾಗುತ್ತದೆ. ರಮೇಶ್​ ಅರವಿಂದ್ ಅವರ ನಿರೂಪಣೆ ಪ್ರತಿಬಾರಿ ಹೆಚ್ಚು ಗಮನ ಸೆಳೆಯುತ್ತದೆ. ಈ ಎಲ್ಲಾ ಕಾರಣಕ್ಕೆ ‘ವೀಕೆಂಡ್​ ವಿತ್​ ರಮೇಶ್’ ಕಾರ್ಯಕ್ರಮ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಈಗ ಹೊಸ ಸೀಸನ್​ ಆರಂಭವಾಗುವ ಸೂಚನೆ ಸಿಕ್ಕಿದೆ.

ಇತ್ತೀಚೆಗೆ ಜೀ ಕನ್ನಡ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಬ್ಯುಸಿನೆಸ್​ ಹೆಡ್​ ರಾಘವೇಂದ್ರ ಹುಣಸೂರು ಅವರು ಈ ಬಗ್ಗೆ ಮಾತನಾಡಿದ್ದರು. 2022ರ ಆರಂಭದಲ್ಲಿ ಶೋ ಪ್ರಸಾರವಾಗಲಿದೆ ಎಂದು ಹೇಳಿದ್ದರು. ಜೀ ಕನ್ನಡ ವಾಹಿನಿಯಲ್ಲಿ ಪ್ರತಿ ಬಾರಿ ಶೋ ಪ್ರಸಾರವಾಗುತ್ತಿತ್ತು. ಈಗ ಕೇಳಿ ಬರುತ್ತಿರುವ ಹೊಸ ವಿಚಾರ ಎಂದರೆ, ಒಟಿಟಿ ಪ್ಲಾಟ್​ಫಾರ್ಮ್ ಜೀ5​ನಲ್ಲಿ ಮಾತ್ರ ಈ ಶೋ ಪ್ರಸಾರವಾಗಲಿದೆ.

ಕೊವಿಡ್ ಕಾಣಿಸಿಕೊಂಡ ನಂತರದಲ್ಲಿ ಒಟಿಟಿ ವ್ಯಾಪ್ತಿ ಹೆಚ್ಚಿದೆ. ಸಾಕಷ್ಟು ಜನರು ಒಟಿಟಿಯತ್ತ ಮುಖ ಮಾಡುತ್ತಿದ್ದಾರೆ. ಅಲ್ಲದೆ, ಹಿಂದಿಯಲ್ಲಿ ಬಿಗ್​ ಬಾಸ್​ ಶೋಅನ್ನು ಸಂಪೂರ್ಣವಾಗಿ ಒಟಿಟಿಯಲ್ಲೇ ಪ್ರಸಾರ ಮಾಡಲಾಗಿತ್ತು. ಈಗ ಅದೇ ರೀತಿಯಲ್ಲಿ ‘ವೀಕೆಂಡ್​ ವಿತ್​ ರಮೇಶ್​’ ಒಟಿಟಿ ಹಾದಿ ಹಿಡಿದಿದೆ.

ಹಾಗಾದರೆ, ಇದನ್ನು ಈ ಬಾರಿ ನಿರೂಪಣೆ ಮಾಡುವವರು ಯಾರು? ಅದಕ್ಕೂ ಉತ್ತರವಿದೆ. ಪ್ರತಿಬಾರಿಯಂತೆ ಈ ಬಾರಿಯೂ ರಮೇಶ್​ ಅರವಿಂದ್ ಅವರು ಈ ಶೋ ನಡೆಸಿಕೊಡುತ್ತಿದ್ದಾರೆ. ಸಾಕಷ್ಟು ಭಿನ್ನ ವಿಚಾರಗಳನ್ನು ಇಟ್ಟುಕೊಂಡು ಈ ಶೋ ಪ್ರಸಾರ ಮಾಡುವ ಆಲೋಚನೆ ವಾಹಿನಿಗೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜನ ಮೆಚ್ಚಿಕೊಂಡ ‘ಕನ್ನಡತಿ’ ಜೋಡಿಗೆ ಸಿಕ್ತು ಅವಾರ್ಡ್​; ಸಂಭ್ರಮಿಸಿದ ಕಿರಣ್​ ರಾಜ್​, ರಂಜನಿ ರಾಘವನ್​

ರಮೋಲಾರನ್ನು ರಂಬೋಲಾ ಎಂದು ಕರೆದ ಮಂಜು ಪಾವಗಡ; ಹೊಟ್ಟೆ ಹುಣ್ಣಾಗುವಂತೆ ನಕ್ಕ ಸೃಜನ್​ ಲೋಕೇಶ್​

Published On - 7:02 pm, Mon, 18 October 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ