AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬಿಗ್ ಬಾಸ್ ತೊರೆದರೆ ಯಾರಿಗೆ ನಷ್ಟ? ಆಗುವ ಪರಿಣಾಮಗಳೇನು?

‘ಹಿಂದಿ ಬಿಗ್ ಬಾಸ್ ಒಟಿಟಿ ಸೀಸನ್ಯ 3’ ರಿಯಾಲಿಟಿ ಶೋನ ಸಲ್ಮಾನ್ ಖಾನ್ ನಡೆಸಿಡಿಕೊಡಬೇಕಿತ್ತು. ಆದರೆ, ಅನಿಲ್ ಕಪೂರ್ ಅವರನ್ನು ಕರೆತರಲಾಗಿದೆ. ತಮಿಳಿನ ಬಿಗ್ ಬಾಸ್​ಗೆ ನಟ ಕಮಲ್ ಹಾಸನ್ ಅವರು ಗುಡ್​ಬೈ ಹೇಳಿದ್ದಾರೆ. ಅದೇ ರೀತಿ ಕನ್ನಡದಲ್ಲೂ ನಿರೂಪಕರನ್ನು ಬದಲಿಸುವ ಆಲೋಚನೆ ವಾಹಿನಿಯವರಿಗೆ ಬಂದಿದೆ ಎಂದು ವರದಿ ಆಗಿದೆ.

ಸುದೀಪ್ ಬಿಗ್ ಬಾಸ್ ತೊರೆದರೆ ಯಾರಿಗೆ ನಷ್ಟ? ಆಗುವ ಪರಿಣಾಮಗಳೇನು?
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Aug 09, 2024 | 12:53 PM

Share

ನಟ ಕಿಚ್ಚ ಸುದೀಪ್ ಅವರು ಯಶಸ್ವಿ ನಿರೂಪಕರಲ್ಲಿ ಒಬ್ಬರು. ಅವರು ‘ಬಿಗ್ ಬಾಸ್’ನ ನಡೆಸಿಕೊಡೋ ರೀತಿ ಅನೇಕರಿಗೆ ಇಷ್ಟ. ಸುದೀಪ್ ಇದ್ದಾರೆ ಎನ್ನುವ ಕಾರಣಕ್ಕೆ ಬಿಗ್ ಬಾಸ್ ವೀಕ್ಷಣೆ ಮಾಡುವ ಅನೇಕರು ಇದ್ದಾರೆ. ಈ ಮಧ್ಯೆ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್’ ತೊರೆಯಲಿದ್ದಾರೆ ಎಂದು ವರದಿ ಆಗಿದೆ. ಒಂದೊಮ್ಮೆ ಇದು ನಿಜವೇ ಆದಲ್ಲಿ ಬಿಗ್ ಬಾಸ್​ಗೆ ಈ ಮೊದಲು ಇದ್ದ ಬೇಡಿಕೆ ಕುಸಿಯೋ ಸಾಧ್ಯತೆ ಇದೆ ಎಂಬ ಮಾತು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬಂದಿದೆ.

ಹಿಂದಿ ಬಿಗ್ ಬಾಸ್ ಒಟಿಟಿಯನ್ನು ಸಲ್ಮಾನ್ ಖಾನ್ ಬದಲು ಅನಿಲ್ ಕಪೂರ್ ನಡೆಸಿಕೊಟ್ಟಿದ್ದಾರೆ. ತಮಿಳಿನ ಬಿಗ್ ಬಾಸ್​ಗೆ ನಟ ಕಮಲ್ ಹಾಸನ್ ಅವರು ಗುಡ್​ಬೈ ಹೇಳಿದ್ದಾರೆ. ಅದೇ ರೀತಿ ಕನ್ನಡದಲ್ಲೂ ನಿರೂಪಕರನ್ನು ಬದಲಿಸುವ ಆಲೋಚನೆ ವಾಹಿನಿಯವರಿಗೆ ಬಂದಿದೆ ಎಂದು ವರದಿ ಆಗಿದೆ. ಇದರ ಜೊತೆಗೆ, ಬೇರೆ ನಿರೂಪಕರ ಹುಡುಕಾಟದಲ್ಲಿ ವಾಹಿನಿ ಬ್ಯುಸಿ ಆಗಿದೆ ಎಂದು ಹೇಳಲಾಗುತ್ತಿದೆ. ಇದು ನಿಜವೇ ಆದಲ್ಲಿ ಟಿಆರ್​ಪಿ ವಿಚಾರದಲ್ಲಿ ವಾಹಿನಿಗೆ ನಷ್ಟ ಉಂಟಾಗಬಹುದು ಎಂಬ ಮಾತುಗಳು ಕೇಳಿ ಬಂದಿವೆ.

ಸುದೀಪ್​ ಇಷ್ಟಪಡೋ ಶೋ

‘ಬಿಗ್ ಬಾಸ್’ ಶೋನ ಸುದೀಪ್ ಕೇವಲ ಹಣಕ್ಕಾಗಿ ಮಾಡುತ್ತಿಲ್ಲ. ಅವರಿಗೆ ಈ ರಿಯಾಲಿಟಿ ಶೋ ಮೇಲೆ ವಿಶೇಷ ಪ್ರೀತಿ ಇದೆ. ಅವರು ಸ್ಪರ್ಧಿಗಳನ್ನು ಕುಟುಂಬದವರಂತೆ ನೋಡುತ್ತಾರೆ. ಸ್ಪರ್ಧಿಗಳ ಹೆಸರು ಹಾಳು ಮಾಡುವ ಪ್ರಯತ್ನ ನಡೆದರೆ ಅದನ್ನು ತಡೆಯುತ್ತಾರೆ. ಸ್ಪರ್ಧಿಗಳು ಹಾದಿ ತಪ್ಪಿದಾಗ ಅಣ್ಣನ ರೀತಿಯಲ್ಲಿ ಅವರ ಪರವಾಗಿ ನಿಲ್ಲುತ್ತಾರೆ, ಬುದ್ಧಿ ಹೇಳುತ್ತಾರೆ. ಸುದೀಪ್ ಅವರಿಗೆ ಈ ಶೋ ಬಗ್ಗೆ ವಿಶೇಷ ಪ್ರೀತಿ ಇದೆ.

ರಿಯಾಲಿಟಿ ಶೋನ ಮುಖವಾಗಿದ್ದಾರೆ ಸುದೀಪ್

ಸುದೀಪ್ ಅವರು ‘ಕನ್ನಡ ಬಿಗ್ ಬಾಸ್’ ಶೋನ 10 ಸೀಸನ್, ಒಂದು ಒಟಿಟಿ ಸೀಸನ್ ಹಾಗೂ ಒಂದು ಮಿನಿ ಸೀಸನ್​ ನಡೆಸಿಕೊಟ್ಟಿದ್ದಾರೆ. ಈ ಕಾರಣಕ್ಕೆ ಬಿಗ್ ಬಾಸ್ ಎಂದರೆ ಅದು ಸುದೀಪ್ ಎನ್ನುವ ಭಾವನೆ ಅನೇಕರಲ್ಲಿ ಮೂಡಿದೆ. ‘ಬಿಗ್ ಬಾಸ್’ ಫೇಮಸ್ ಆಗಲು ಸುದೀಪ್ ಅವರ ನಿರೂಪಣೆಯ ಕೊಡುಗೆ ಕೂಡ ಸಾಕಷ್ಟಿದೆ.

ಖಡಕ್ ಮಾತು

ಕನ್ನಡದ ಬಿಗ್ ಬಾಸ್​ನಲ್ಲಿ ಸುದೀಪ್ ಅವರ ಚಾಕಚಕ್ಯತೆಯೇ ಹೈಲೈಟ್. ಅವರು ಪರಿಸ್ಥಿತಿಗಳನ್ನು ನಿರ್ವಹಣೆ ಮಾಡೋದು ಅನೇಕರಿಗೆ ಇಷ್ಟ ಆಗುತ್ತದೆ. ತಪ್ಪು ಮಾಡಿದವರಿಗೆ ಅವರು ಕ್ಲಾಸ್ ತೆಗೆದುಕೊಳ್ಳೋದನ್ನು ನೋಡೋದೇ ಖುಷಿ. ಈಗ ಅವರ ಜಾಗದಲ್ಲಿ ಬೇರೆಯವರನ್ನು ಕಲ್ಪಿಸಿಕೊಳ್ಳಬೇಕು ಎಂದರೆ ವೀಕ್ಷಕರಿಗೆ ಸ್ವಲ್ಪ ಕಷ್ಟವೇ ಆಗಲಿದೆ.

ಇದನ್ನೂ ಓದಿ: 

ಏನಾಗಬಹುದು?

ಒಂದೊಮ್ಮೆ ಸುದೀಪ್ ಅವರು ನಿರೂಪಣೆಯಿಂದ ಹಿಂದೆ ಸರಿದರೆ ಅಥವಾ ವಾಹಿನಿಯವರೇ ಸುದೀಪ್ ಅವರನ್ನು ಕೈಬಿಟ್ಟರೆ ಟಿಆರ್​ಪಿ ವಿಚಾರದಲ್ಲಿ ಹಿನ್ನಡೆ ಆಗಬಹುದು. ಬಿಗ್ ಬಾಸ್​ಗೆ ವಾರ ದಿನಗಳಲ್ಲಿ ಇರುವ ಟಿಆರ್​ಪಿಗೂ ವೀಕೆಂಡ್​ನಲ್ಲಿ ಇರುವ ಟಿಆರ್​ಪಿಗೂ ಸಾಕಷ್ಟು ವ್ಯತ್ಯಾಸ ಇದೆ. ಸುದೀಪ್ ಕಾರಣದಿಂದ ವೀಕೆಂಡ್​ನಲ್ಲಿ ಒಳ್ಳೆಯ ಟಿಆರ್​ಪಿ ಬರುತ್ತದೆ. ಸುದೀಪ್ ಇಲ್ಲ ಎಂದಾದಾಗ ಸಹಜವಾಗಿ ಅವರ ಒಂದಷ್ಟು ಅಭಿಮಾನಿಗಳು ಬಿಗ್ ಬಾಸ್​ ವೀಕ್ಷಣೆ ತೊರೆಯಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್