AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ನಟನಿಗೆ ಬಿಗ್ ಬಾಸ್​ನಿಂದ ಕಾರು ಸಿಗೋದು ಯಾವಾಗ? ಕೊನೆಗೂ ಸಿಕ್ತು ಉತ್ತರ

ಬಿಗ್ ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟರಾಜ್‌ಗೆ ಸಿಕ್ಕ ಕಾರ್ ಮತ್ತು 50 ಲಕ್ಷ ಬಹುಮಾನದ ಹಣ ಇಷ್ಟು ಬೇಗ ಕೈ ಸೇರುವುದಿಲ್ಲ. ಸೀಸನ್ 10 ವಿಜೇತ ಕಾರ್ತಿಕ್ ಮಹೇಶ್ ಅವರಿಗೆ ಕಾರು ಸಿಗಲು 7-8 ತಿಂಗಳು ಬೇಕಾಯಿತು. ಗಿಲ್ಲಿಗೆ ಕಾರು ಸಿಗಲು ಎಷ್ಟು ತಿಂಗಳು ಬೇಕು ಎಂಬ ಬಗ್ಗೆ ಇಲ್ಲಿದೆ ವಿವರ.

ಗಿಲ್ಲಿ ನಟನಿಗೆ ಬಿಗ್ ಬಾಸ್​ನಿಂದ ಕಾರು ಸಿಗೋದು ಯಾವಾಗ? ಕೊನೆಗೂ ಸಿಕ್ತು ಉತ್ತರ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Jan 26, 2026 | 7:01 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss) ಗಿಲ್ಲಿ ನಟ ಅವರು ಗೆದ್ದು ಒಂದು ವಾರ ಕಳೆದಿದೆ. ಆದಾಗ್ಯೂ ಅವರ ಬಗ್ಗೆ ನಡೆಯುತ್ತಿರುವ ಚರ್ಚೆಗಳು ನಿಂತಿಲ್ಲ. ಅನೇಕರು ಅವರನ್ನು ಹಾಡಿ ಹೊಗಳುತ್ತಿದ್ದಾರೆ. ವಿವಿಧ ಕಡೆಗಳಲ್ಲಿ ತೆರಳಿ ಗಿಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಅವರಿಗೆ ಈ ಬಾರಿ ಬಿಗ್ ಬಾಸ್ ವಿನ್ ಆಗಿದ್ದಕ್ಕೆ ಕಾರ್ ಕೊಡೋದಾಗಿ ಸುದೀಪ್ ಘೋಷಿಸಿದರು. ಆದರೆ, ಅದು ಗಿಲ್ಲಿಗೆ ಇಷ್ಟು ಬೇಗ ಕೈ ಸೇರೋದಿಲ್ಲ.

ಈ ಬಾರಿಯ ಬಿಗ್ ಬಾಸ್ ಅಲ್ಲಿ ಗಿಲ್ಲಿ ನಟ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಯಿತು. ಈ ಬಳಗವನ್ನು ಅವರು ಹೇಗೆ ನಿಭಾಯಿಸಿಕೊಂಡು ಹೋಗುತ್ತಾರೆ ಎಂಬ ಕುತೂಹಲ ಮೂಡಿದೆ. ದೊಡ್ಡ ವೋಟ್ ಅಂತರದಲ್ಲಿ ಗಿಲ್ಲಿ ಗೆದ್ದಿದ್ದಾರೆ ಎನ್ನಲಾಗುತ್ತಿದೆ. ಈ ಬಾರಿ ಮಾರುತಿ ಸುಜುಕಿ ಕಡೆಯಿಂದ ಗಿಲ್ಲಿಗೆ ವಿಕ್ಟೋರಿಸ್ ಕಾರು ಸಿಕ್ಕಿದೆ. ಆದರೆ, ಅದು ಸದ್ಯಕ್ಕೆ ಅವರ ಕೈ ಸೇರೋದಿಲ್ಲ.

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ವಿನ್ನರ್ ಕಾರ್ತಿಕ್ ಮಹೇಶ್​​ಗೂ ಮಾರುತಿ ಸುಜುಕಿ ಕಡೆಯಿಂದ ಬ್ರೇಜಾ ಕಾರು ಸಿಕ್ಕಿತ್ತು. ವೇದಿಕೆ ಮೇಲೆ ಅವರಿಗೆ ಕೀ ಮಾದರಿಯನ್ನು ಕೊಡಲಾಗಿತ್ತು. 2024ರ ಅಂತ್ಯಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಕೊನೆಗೊಂಡಿತು. ಅವರಿಗೆ ಕಾರು ಸಿಕ್ಕಿದ್ದು ಅದೇ ವರ್ಷ ಆಗಸ್ಟ್​ ತಿಂಗಳಲ್ಲಿ. ಆ ಸಂದರ್ಭದಲ್ಲಿ ಕಾರ್ತಿಕ್ ಅವರು ವಿಡಿಯೋ ಹಂಚಿಕೊಂಡಿದ್ದರು. ಅಂದರೆ ಕಾರು ಸಿಗಲು ಅವರಿಗೆ ಸುಮಾರು 7-8 ತಿಂಗಳು ಬೇಕಾಯಿತು.

ಕಾರ್ತಿಕ್ ಮಹೇಶ್ ಅವರು ವಿವರಿಸಿದಂತೆ ‘ಬಿಗ್ ಬಾಸ್​’ ಕಾರು ಉಡುಗೊರೆ ಪ್ರಕ್ರಿಯೆ ತುಂಬಾನೇ ಸುದೀರ್ಘವಾದುದ್ದು. ಹೀಗಾಗಿ, ಕಾರು ಸಿಗೋದು ತಡವಾಗುತ್ತದೆ. ಗಿಲ್ಲಿಗೂ ಜುಲೈ ಅಥವಾ ಆಗಸ್ಟ್​ ತಿಂಗಳಲ್ಲಿ ಕಾರು ಸಿಗಬಹುದು ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಮುಗಿದ ಏಳು ತಿಂಗಳ ಬಳಿಕ ಕಾರ್ತಿಕ್ ಮಹೇಶ್​ಗೆ ಸಿಕ್ತು ಕಾರು; ಇದರ ವಿಶೇಷತೆಗಳೇನು? ಗಿಲ್ಲಿಗೆ ಸಿಗೋ 50 ಲಕ್ಷ ರೂಪಾಯಿ ಕೂಡ ತಕ್ಷಣಕ್ಕೆ ಸಿಗೋದಲ್ಲ. ಅದು ಕೂಡ ಖಾತೆಗೆ ಬೀಳಲು ಸ್ವಲ್ಪ ಸಮಯ ಬೇಕು. 50 ಲಕ್ಷದಲ್ಲಿ ತೆರಿಗೆ ಕಟ್ ಆಗಿ ಅವರಿಗೆ ಸಿಗೋದು ಕೇವಲ 35 ಲಕ್ಷ ರೂಪಾಯಿ ಮಾತ್ರ. ಸುದೀಪ್ ಕಡೆಯಿಂದ ಅವರಿಗೆ 10 ಲಕ್ಷ ರೂಪಾಯಿ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?