AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ ಯಾವಾಗಿನಿಂದ; ಕೊನೆ ಆಗಲಿರೋ ಧಾರಾವಾಹಿ ಯಾವುದು?

ಕಿರಣ್ ರಾಜ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡವರು.. ಅವರಿಗೆ ಸಾಕಷ್ಟು ಖ್ಯಾತಿಯನ್ನು ಈ ಧಾರಾವಾಹಿ ತಂದುಕೊಟ್ಟಿತ್ತು. ಆ ಬಳಿಕ ಅವರಿಗೆ ಸಿನಿಮಾ ರಂಗದಿಂದ ಆಫರ್​ಗಳು ಬಂದಿದ್ದು ಗೊತ್ತೇ ಇದೆ. ಅವರು ಈಗ ಮತ್ತೆ ಕಿರುತೆರೆಗೆ ಮರಳಿದ್ದಾರೆ .

ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ ಯಾವಾಗಿನಿಂದ; ಕೊನೆ ಆಗಲಿರೋ ಧಾರಾವಾಹಿ ಯಾವುದು?
ಕಿರಣ್ ರಾಜ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Apr 02, 2025 | 11:00 AM

Share

‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್ (Kiran Raj) ಅವರು ಮತ್ತೆ ಕಿರುತೆರೆಗೆ ಮರಳುತ್ತಾರೆ ಎಂದಾಗಲೇ ಎಲ್ಲರಲ್ಲೂ ಕುತೂಹಲ ಮೂಡಿತ್ತು. ಈಗ ಅವರು ‘ಕರ್ಣ’ ಧಾರಾವಾಹಿ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರ ಕಾಣುವುದು ಯಾವಾಗ ಎಂಬ ಪ್ರಶ್ನೆ ಮೂಡಿದೆ. ‘ಕರ್ಣ’ ಧಾರಾವಾಹಿ ಯಾವಾಗ ಪ್ರಸಾರ ಕಾಣಲಿದೆ ಎಂಬಿತ್ಯಾದಿ ಪ್ರಶ್ನೆಗಳು ಮೂಡಿವೆ. ಇದಕ್ಕೆ ಜೀ ಕನ್ನಡದ ಕಡೆಯಿಂದ ಅಧಿಕೃತ ಮಾಹಿತಿ ಹೊರ ಬೀಳಲಿ ಎಂದು ಫ್ಯಾನ್ಸ್ ಕಾಯುತ್ತಾ ಇದ್ದಾರೆ. ನಿತ್ಯವೂ ರಾತ್ರಿ 8 ಗಂಟೆಗೆ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಪ್ರೇಕ್ಷಕರ ಸೂರೆಗೊಂಡಿದೆ. ಈ ಕಾರಣಕ್ಕೆ ಪ್ರತಿ ವಾರದ ಟಿಆರ್​ಪಿಯಲ್ಲಿ ಈ ಧಾರಾವಾಹಿಗೆ ಟಾಪ್ 3ನಲ್ಲಿ ಒಂದಲ್ಲ ಒಂದು ಸ್ಥಾನ ಸಿಕ್ಕೇ ಸಿಗುತ್ತದೆ. ಹೀಗಿರುವಾಗ ಧಾರಾವಾಹಿಯನ್ನು ಕೊನೆ ಮಾಡುವ ಸಾಹಸಕ್ಕೆ ಯಾರೂ ಹೋಗುವುದಿಲ್ಲ. ಹೀಗಾಗಿ, ಇದರ ಸಮಯದಲ್ಲಿ ಬದಲಾವಣೆ ಆಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ಲಕ್ಷ್ಮೀ ನಿವಾಸ’ ಧಾರಾವಾಹಿಯು ಈಗ ಒಂದು ಗಂಟೆ ಪ್ರಸಾರ ಕಾಣುತ್ತಿದೆ. ಈಗ ಇದನ್ನು ಅರ್ಧ ಗಂಟೆಗೆ ಇಳಿಸಲು ಪ್ಲ್ಯಾನ್ ನಡೆದಿದೆ ಎನ್ನಲಾಗಿದೆ. ಹೀಗಾಗಿ 8 ಗಂಟೆಗೆ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಪ್ರಸಾರ ಕಂಡರೆ, ಇನ್ನರ್ಧ ಗಂಟೆಗೆ ‘ಕರ್ಣ’ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ಕಿರಣ್ ರಾಜ್ ಧಾರಾವಾಹಿಗೆ ನಾಯಕಿ ಯಾರು ಎಂಬುದು ಕೂಡ ಇನ್ನೂ ರಿವೀಲ್ ಆಗಿಲ್ಲ.

ಇದನ್ನೂ ಓದಿ: Kiran Raj: ಜೀ ಕನ್ನಡಕ್ಕೆ ಬಂದ ಕಿರಣ್ ರಾಜ್; ಬರುತ್ತಿದೆ ಹೊಸ ಧಾರಾವಾಹಿ ‘ಕರ್ಣ’

ಇದನ್ನೂ ಓದಿ
Image
52ನೇ ವಯಸ್ಸಿನಲ್ಲೂ ಸಿಂಗಲ್; ಈ ಸ್ಟಾರ್ ನಟಿ ಮದುವೆ ಆಗದಿರಲು ಅಜಯ್ ಕಾರಣ್
Image
ಅಜಯ್ ದೇವಗನ್ ಐಷಾರಾಮಿ ಜೀವನ; 60 ಕೋಟಿ ಮನೆ, ದುಬಾರಿ ಕಾರು, ಬಿಸ್ನೆಸ್
Image
ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್
Image
ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್

ಕಿರಣ್ ರಾಜ್ ಅವರು ಕಲರ್ಸ್ ಕನ್ನಡದ ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದರು. ಆ ಬಳಿಕ ಅವರು ಹಿರಿತೆರೆಯಲ್ಲಿ ಬ್ಯುಸಿ ಆದರು. ಕೆಲವು ಕನ್ನಡದ ಸಿನಿಮಾಗಳನ್ನು ಮಾಡಿದರು. ಈಗ ಅವರು ಮತ್ತೆ ಕಿರುತೆರೆಯಲ್ಲಿ ಬ್ಯುಸಿ ಆಗುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅವರು ವೈದ್ಯನ ಪಾತ್ರ ಮಾಡುತ್ತಿದ್ದಾರೆ. ಕಥಾ ನಾಯಕ ಕರ್ಣ ದೊಡ್ಡ ಗೈನಾಕಾಲಜಿಸ್ಟ್ ಆದರೂ, ಕುಟುಂಬಕ್ಕಾಗಿ ಸಾಕಷ್ಟು ಹೋರಾಡುತ್ತಾನೆ.  ಈ ರೀತಿಯಲ್ಲಿ ಕಥೆ ಮೂಡಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:53 am, Wed, 2 April 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು