AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ ಯಾವಾಗಿನಿಂದ; ಕೊನೆ ಆಗಲಿರೋ ಧಾರಾವಾಹಿ ಯಾವುದು?

ಕಿರಣ್ ರಾಜ್ ಅವರು ‘ಕನ್ನಡತಿ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡವರು.. ಅವರಿಗೆ ಸಾಕಷ್ಟು ಖ್ಯಾತಿಯನ್ನು ಈ ಧಾರಾವಾಹಿ ತಂದುಕೊಟ್ಟಿತ್ತು. ಆ ಬಳಿಕ ಅವರಿಗೆ ಸಿನಿಮಾ ರಂಗದಿಂದ ಆಫರ್​ಗಳು ಬಂದಿದ್ದು ಗೊತ್ತೇ ಇದೆ. ಅವರು ಈಗ ಮತ್ತೆ ಕಿರುತೆರೆಗೆ ಮರಳಿದ್ದಾರೆ .

ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ ಯಾವಾಗಿನಿಂದ; ಕೊನೆ ಆಗಲಿರೋ ಧಾರಾವಾಹಿ ಯಾವುದು?
ಕಿರಣ್ ರಾಜ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Apr 02, 2025 | 11:00 AM

‘ಕನ್ನಡತಿ’ ಖ್ಯಾತಿಯ ಕಿರಣ್ ರಾಜ್ (Kiran Raj) ಅವರು ಮತ್ತೆ ಕಿರುತೆರೆಗೆ ಮರಳುತ್ತಾರೆ ಎಂದಾಗಲೇ ಎಲ್ಲರಲ್ಲೂ ಕುತೂಹಲ ಮೂಡಿತ್ತು. ಈಗ ಅವರು ‘ಕರ್ಣ’ ಧಾರಾವಾಹಿ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಧಾರಾವಾಹಿ ಪ್ರಸಾರ ಕಾಣುವುದು ಯಾವಾಗ ಎಂಬ ಪ್ರಶ್ನೆ ಮೂಡಿದೆ. ‘ಕರ್ಣ’ ಧಾರಾವಾಹಿ ಯಾವಾಗ ಪ್ರಸಾರ ಕಾಣಲಿದೆ ಎಂಬಿತ್ಯಾದಿ ಪ್ರಶ್ನೆಗಳು ಮೂಡಿವೆ. ಇದಕ್ಕೆ ಜೀ ಕನ್ನಡದ ಕಡೆಯಿಂದ ಅಧಿಕೃತ ಮಾಹಿತಿ ಹೊರ ಬೀಳಲಿ ಎಂದು ಫ್ಯಾನ್ಸ್ ಕಾಯುತ್ತಾ ಇದ್ದಾರೆ. ನಿತ್ಯವೂ ರಾತ್ರಿ 8 ಗಂಟೆಗೆ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಪ್ರೇಕ್ಷಕರ ಸೂರೆಗೊಂಡಿದೆ. ಈ ಕಾರಣಕ್ಕೆ ಪ್ರತಿ ವಾರದ ಟಿಆರ್​ಪಿಯಲ್ಲಿ ಈ ಧಾರಾವಾಹಿಗೆ ಟಾಪ್ 3ನಲ್ಲಿ ಒಂದಲ್ಲ ಒಂದು ಸ್ಥಾನ ಸಿಕ್ಕೇ ಸಿಗುತ್ತದೆ. ಹೀಗಿರುವಾಗ ಧಾರಾವಾಹಿಯನ್ನು ಕೊನೆ ಮಾಡುವ ಸಾಹಸಕ್ಕೆ ಯಾರೂ ಹೋಗುವುದಿಲ್ಲ. ಹೀಗಾಗಿ, ಇದರ ಸಮಯದಲ್ಲಿ ಬದಲಾವಣೆ ಆಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

‘ಲಕ್ಷ್ಮೀ ನಿವಾಸ’ ಧಾರಾವಾಹಿಯು ಈಗ ಒಂದು ಗಂಟೆ ಪ್ರಸಾರ ಕಾಣುತ್ತಿದೆ. ಈಗ ಇದನ್ನು ಅರ್ಧ ಗಂಟೆಗೆ ಇಳಿಸಲು ಪ್ಲ್ಯಾನ್ ನಡೆದಿದೆ ಎನ್ನಲಾಗಿದೆ. ಹೀಗಾಗಿ 8 ಗಂಟೆಗೆ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಪ್ರಸಾರ ಕಂಡರೆ, ಇನ್ನರ್ಧ ಗಂಟೆಗೆ ‘ಕರ್ಣ’ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ. ಕಿರಣ್ ರಾಜ್ ಧಾರಾವಾಹಿಗೆ ನಾಯಕಿ ಯಾರು ಎಂಬುದು ಕೂಡ ಇನ್ನೂ ರಿವೀಲ್ ಆಗಿಲ್ಲ.

ಇದನ್ನೂ ಓದಿ: Kiran Raj: ಜೀ ಕನ್ನಡಕ್ಕೆ ಬಂದ ಕಿರಣ್ ರಾಜ್; ಬರುತ್ತಿದೆ ಹೊಸ ಧಾರಾವಾಹಿ ‘ಕರ್ಣ’

ಇದನ್ನೂ ಓದಿ
Image
52ನೇ ವಯಸ್ಸಿನಲ್ಲೂ ಸಿಂಗಲ್; ಈ ಸ್ಟಾರ್ ನಟಿ ಮದುವೆ ಆಗದಿರಲು ಅಜಯ್ ಕಾರಣ್
Image
ಅಜಯ್ ದೇವಗನ್ ಐಷಾರಾಮಿ ಜೀವನ; 60 ಕೋಟಿ ಮನೆ, ದುಬಾರಿ ಕಾರು, ಬಿಸ್ನೆಸ್
Image
ಪಾತಾಳ ಕಾಣುತ್ತಿದೆ ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಕಲೆಕ್ಷನ್
Image
ನಟನೆ ಮಾತ್ರವಲ್ಲ ಈ ವಿಶೇಷ ವಿದ್ಯೆ ಕಲಿತಿದ್ದಾರೆ ಅಜಯ್ ರಾವ್

ಕಿರಣ್ ರಾಜ್ ಅವರು ಕಲರ್ಸ್ ಕನ್ನಡದ ‘ಕನ್ನಡತಿ’ ಧಾರಾವಾಹಿ ಮೂಲಕ ಫೇಮಸ್ ಆದರು. ಆ ಬಳಿಕ ಅವರು ಹಿರಿತೆರೆಯಲ್ಲಿ ಬ್ಯುಸಿ ಆದರು. ಕೆಲವು ಕನ್ನಡದ ಸಿನಿಮಾಗಳನ್ನು ಮಾಡಿದರು. ಈಗ ಅವರು ಮತ್ತೆ ಕಿರುತೆರೆಯಲ್ಲಿ ಬ್ಯುಸಿ ಆಗುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಅವರು ವೈದ್ಯನ ಪಾತ್ರ ಮಾಡುತ್ತಿದ್ದಾರೆ. ಕಥಾ ನಾಯಕ ಕರ್ಣ ದೊಡ್ಡ ಗೈನಾಕಾಲಜಿಸ್ಟ್ ಆದರೂ, ಕುಟುಂಬಕ್ಕಾಗಿ ಸಾಕಷ್ಟು ಹೋರಾಡುತ್ತಾನೆ.  ಈ ರೀತಿಯಲ್ಲಿ ಕಥೆ ಮೂಡಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:53 am, Wed, 2 April 25

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್