AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಬಂದ ಮಾತಿನ ಮಲ್ಲಿ ಮಲ್ಲಮ್ಮ ಯಾರು?

Mathina malli Mallamma: ಕಳೆದ ಬಾರಿ ಉತ್ತರ ಕರ್ನಾಟಕ ಪ್ರತಿಭೆ ಹನುಮಂತ ಅವರಿಗೆ ಬಿಗ್ ಬಾಸ್​ನಲ್ಲಿ ಅವಕಾಶ ನೀಡಲಾಗಿತ್ತು. ದೊಡ್ಮನೆಗೆ ಬಂದಿದ್ದೂ ಅಲ್ಲದೆ, ಗೆಲುವನ್ನು ಕಂಡರು. ಈ ಬಾರಿ ಮಲ್ಲಮ್ಮ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ. ಮಲ್ಲಮ್ಮ ಅವರು ಉತ್ತರ ಕರ್ನಾಟಕದ ಪ್ರತಿಭೆ.

ಬಿಗ್ ಬಾಸ್ ಮನೆಗೆ ಬಂದ ಮಾತಿನ ಮಲ್ಲಿ ಮಲ್ಲಮ್ಮ ಯಾರು?
ಮಲ್ಲಮ್ಮ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 27, 2025 | 11:05 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 28ರಂದು ನಡೆಯಲಿದೆ. ಅದಕ್ಕೂ ಮೊದಲು ಅಂದರೆ ಸೆಪ್ಟೆಂಬರ್ 27ರಂದು ಕ್ವಾಟ್ಲೆ ಕಿಚನ್​ ಫಿನಾಲೆಯಲ್ಲಿ ಮೂವರ ಹೆಸರನ್ನು ರಿವೀಲ್ ಮಾಡಲಾಗಿದೆ. ಮಂಜು ಭಾಷಿಣಿ, ಕಾಕ್ರೋಚ್ ಸುಧಿ ಹಾಗೂ ಮಲ್ಲಮ್ಮ ಹೆಸರು ರಿವೀಲ್ ಆಗಿದೆ.  ಇದರಲ್ಲಿ ಸಾಕಷ್ಟು ಗಮನ ಸೆಳೆದಿದ್ದು ಮಲ್ಲಮ್ಮ. ಇವರು ಮಾತಿನ ಮಲ್ಲಿ ಮಲ್ಲಮ್ಮ ಎಂದೇ ಫೇಮಸ್ ಆದವರು. ಅವರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಕಳೆದ ಬಾರಿ ಉತ್ತರ ಕರ್ನಾಟಕ ಪ್ರತಿಭೆ ಹನುಮಂತ ಅವರಿಗೆ ಬಿಗ್ ಬಾಸ್​ನಲ್ಲಿ ಅವಕಾಶ ನೀಡಲಾಗಿತ್ತು. ದೊಡ್ಮನೆಗೆ ಬಂದಿದ್ದೂ ಅಲ್ಲದೆ, ಗೆಲುವನ್ನು ಕಂಡರು. ಈ ಬಾರಿ ಮಲ್ಲಮ್ಮ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ. ಮಲ್ಲಮ್ಮ ಅವರು ಉತ್ತರ ಕರ್ನಾಟಕದ ಪ್ರತಿಭೆ. ಯಾದಗಿರಿ ಜಿಲ್ಲೆಯ, ಸುರಪುರ ತಾಲೂಕಿನ ಸಣ್ಣ ಹಳ್ಳಿಯವರು. ಕೆಲಸಕ್ಕೆಂದು ಬೆಂಗಳೂರಿಗೆ ಬಂದರು. ಅವರು ತಮ್ಮ ಮಾತಿನ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದರು. ಇಳಿ ವಯಸ್ಸಿನಲ್ಲಿ ಅವರು ಉಳಿದ ಸ್ಪರ್ಧಿಗಳ ಜೊತೆ ಹೇಗೆ ಸ್ಪರ್ಧಿಸುತ್ತಾರೆ ಎಂಬುದನ್ನು ಕಾದು ನೋಡುವ ಕುತೂಹಲ ಮೂಡಿದೆ.

ಮಲ್ಲಮ್ಮ ಅವರು ತಮ್ಮದೇ ಆದ ಇನ್​ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ 1.69 ಲಕ್ಷ ಹಿಂಬಾಲಕರು ಅವರಿಗೆ ಇದ್ದಾರೆ. ಯೂಟ್ಯೂಬ್ ಚಾನೆಲ್​ಗೆ 16 ಸಾವಿರ ಹಿಂಬಾಲಕರು ಇದ್ದಾರೆ. ಮಲ್ಲಮ್ಮ ಟಾಕ್ಸ್ ಅನ್ನೋದು ಅವರ ಯೂಟ್ಯೂಬ್ ಚಾನೆಲ್ ಹೆಸರು.

ಇದನ್ನೂ ಓದಿ: ಕ್ವಾಟ್ಲೆ ಕಿಚನ್ ಫೈನಲ್​​ನಲ್ಲಿ ‘ಬಿಗ್ ಬಾಸ್ ಕನ್ನಡ 12’ರ 3 ಸ್ಪರ್ಧಿಗಳ ಹೆಸರು ರಿವೀಲ್

ಮಲ್ಲಮ್ಮ ಅವರು ನವ ಯುವಕ-ಯವತಿಯರಂತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ದೊಡ್ಮನೆಯಲ್ಲಿ ಅವರು ಉಳಿದ ಸ್ಪರ್ಧಿಗಳ ಜೊತೆ ಯಾವ ರೀತಿ ಹೊಂದಿಕೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ. ಬಿಗ್ ಬಾಸ್​ನಲ್ಲಿ ಮಾತೇ ಬಂಡವಾಳ.  ತಮ್ಮ ಮಾತಿನ ಚಾಕಚಕ್ಯತೆಯನ್ನು ಅವರು ಬಿಗ್ ಬಾಸ್​ನಲ್ಲಿ ಹೇಗೆ ಬಳಕೆ ಮಾಡಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:00 pm, Sat, 27 September 25

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ