AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಬಂದ ಮಾತಿನ ಮಲ್ಲಿ ಮಲ್ಲಮ್ಮ ಯಾರು?

Mathina malli Mallamma: ಕಳೆದ ಬಾರಿ ಉತ್ತರ ಕರ್ನಾಟಕ ಪ್ರತಿಭೆ ಹನುಮಂತ ಅವರಿಗೆ ಬಿಗ್ ಬಾಸ್​ನಲ್ಲಿ ಅವಕಾಶ ನೀಡಲಾಗಿತ್ತು. ದೊಡ್ಮನೆಗೆ ಬಂದಿದ್ದೂ ಅಲ್ಲದೆ, ಗೆಲುವನ್ನು ಕಂಡರು. ಈ ಬಾರಿ ಮಲ್ಲಮ್ಮ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ. ಮಲ್ಲಮ್ಮ ಅವರು ಉತ್ತರ ಕರ್ನಾಟಕದ ಪ್ರತಿಭೆ.

ಬಿಗ್ ಬಾಸ್ ಮನೆಗೆ ಬಂದ ಮಾತಿನ ಮಲ್ಲಿ ಮಲ್ಲಮ್ಮ ಯಾರು?
ಮಲ್ಲಮ್ಮ
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 27, 2025 | 11:05 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 28ರಂದು ನಡೆಯಲಿದೆ. ಅದಕ್ಕೂ ಮೊದಲು ಅಂದರೆ ಸೆಪ್ಟೆಂಬರ್ 27ರಂದು ಕ್ವಾಟ್ಲೆ ಕಿಚನ್​ ಫಿನಾಲೆಯಲ್ಲಿ ಮೂವರ ಹೆಸರನ್ನು ರಿವೀಲ್ ಮಾಡಲಾಗಿದೆ. ಮಂಜು ಭಾಷಿಣಿ, ಕಾಕ್ರೋಚ್ ಸುಧಿ ಹಾಗೂ ಮಲ್ಲಮ್ಮ ಹೆಸರು ರಿವೀಲ್ ಆಗಿದೆ.  ಇದರಲ್ಲಿ ಸಾಕಷ್ಟು ಗಮನ ಸೆಳೆದಿದ್ದು ಮಲ್ಲಮ್ಮ. ಇವರು ಮಾತಿನ ಮಲ್ಲಿ ಮಲ್ಲಮ್ಮ ಎಂದೇ ಫೇಮಸ್ ಆದವರು. ಅವರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಕಳೆದ ಬಾರಿ ಉತ್ತರ ಕರ್ನಾಟಕ ಪ್ರತಿಭೆ ಹನುಮಂತ ಅವರಿಗೆ ಬಿಗ್ ಬಾಸ್​ನಲ್ಲಿ ಅವಕಾಶ ನೀಡಲಾಗಿತ್ತು. ದೊಡ್ಮನೆಗೆ ಬಂದಿದ್ದೂ ಅಲ್ಲದೆ, ಗೆಲುವನ್ನು ಕಂಡರು. ಈ ಬಾರಿ ಮಲ್ಲಮ್ಮ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ. ಮಲ್ಲಮ್ಮ ಅವರು ಉತ್ತರ ಕರ್ನಾಟಕದ ಪ್ರತಿಭೆ. ಯಾದಗಿರಿ ಜಿಲ್ಲೆಯ, ಸುರಪುರ ತಾಲೂಕಿನ ಸಣ್ಣ ಹಳ್ಳಿಯವರು. ಕೆಲಸಕ್ಕೆಂದು ಬೆಂಗಳೂರಿಗೆ ಬಂದರು. ಅವರು ತಮ್ಮ ಮಾತಿನ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದರು. ಇಳಿ ವಯಸ್ಸಿನಲ್ಲಿ ಅವರು ಉಳಿದ ಸ್ಪರ್ಧಿಗಳ ಜೊತೆ ಹೇಗೆ ಸ್ಪರ್ಧಿಸುತ್ತಾರೆ ಎಂಬುದನ್ನು ಕಾದು ನೋಡುವ ಕುತೂಹಲ ಮೂಡಿದೆ.

ಮಲ್ಲಮ್ಮ ಅವರು ತಮ್ಮದೇ ಆದ ಇನ್​ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ 1.69 ಲಕ್ಷ ಹಿಂಬಾಲಕರು ಅವರಿಗೆ ಇದ್ದಾರೆ. ಯೂಟ್ಯೂಬ್ ಚಾನೆಲ್​ಗೆ 16 ಸಾವಿರ ಹಿಂಬಾಲಕರು ಇದ್ದಾರೆ. ಮಲ್ಲಮ್ಮ ಟಾಕ್ಸ್ ಅನ್ನೋದು ಅವರ ಯೂಟ್ಯೂಬ್ ಚಾನೆಲ್ ಹೆಸರು.

ಇದನ್ನೂ ಓದಿ: ಕ್ವಾಟ್ಲೆ ಕಿಚನ್ ಫೈನಲ್​​ನಲ್ಲಿ ‘ಬಿಗ್ ಬಾಸ್ ಕನ್ನಡ 12’ರ 3 ಸ್ಪರ್ಧಿಗಳ ಹೆಸರು ರಿವೀಲ್

ಮಲ್ಲಮ್ಮ ಅವರು ನವ ಯುವಕ-ಯವತಿಯರಂತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ದೊಡ್ಮನೆಯಲ್ಲಿ ಅವರು ಉಳಿದ ಸ್ಪರ್ಧಿಗಳ ಜೊತೆ ಯಾವ ರೀತಿ ಹೊಂದಿಕೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ. ಬಿಗ್ ಬಾಸ್​ನಲ್ಲಿ ಮಾತೇ ಬಂಡವಾಳ.  ತಮ್ಮ ಮಾತಿನ ಚಾಕಚಕ್ಯತೆಯನ್ನು ಅವರು ಬಿಗ್ ಬಾಸ್​ನಲ್ಲಿ ಹೇಗೆ ಬಳಕೆ ಮಾಡಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:00 pm, Sat, 27 September 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ