AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾ ಅಥವಾ ವಿನಯ್, ಮನೆಯ ದುರಹಂಕಾರಿ ಯಾರು?

Bigg Boss: ಸಂಗೀತಾ ಹಾಗೂ ವಿನಯ್ ಬಿಗ್​ಬಾಸ್ ಕನ್ನಡ ಸೀಸನ್​ನ ಪ್ರಮುಖ ಸ್ಪರ್ಧಿಗಳಲ್ಲಿ ಪ್ರಮುಖರು. ಈ ಇಬ್ಬರಲ್ಲಿ ಹೆಚ್ಚು ದುರಹಂಕಾರಿಗಳು ಯಾರು ಎಂಬುದು ಭಾನುವಾರದ ಎಪಿಸೋಡ್​ನಲ್ಲಿ ಪ್ರೇಕ್ಷಕರಿಗೆ ತಿಳಿಯಿತು.

ಸಂಗೀತಾ ಅಥವಾ ವಿನಯ್, ಮನೆಯ ದುರಹಂಕಾರಿ ಯಾರು?
ಮಂಜುನಾಥ ಸಿ.
|

Updated on:Dec 03, 2023 | 11:57 PM

Share

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ಕೆಲವು ಸ್ಪರ್ಧಿಗಳು ಸಖತ್ ಕುತೂಹಲ ಕೆರಳಿಸಿದ್ದಾರೆ. ಮನೆಯ ಒಳಗಿರುವ ಕೆಲವು ಸ್ಪರ್ಧಿಗಳನ್ನು ಪ್ರೇಕ್ಷಕರು ಬಹಳ ಇಷ್ಟಪಟ್ಟರೆ, ಕೆಲವರನ್ನು ಸಖತ್ ದ್ವೇಷಿಸುತ್ತಿದ್ದಾರೆ. ಎರಡೂ ರೀತಿಯ ಪ್ರೇಕ್ಷಕರನ್ನು ಹೊಂದಿರುವ ಸ್ಪರ್ಧಿಗಳೆಂದರೆ ಅದು ಸಂಗೀತಾ ಹಾಗೂ ವಿನಯ್. ಮನೆಯಲ್ಲಿ ಇವರಿಬ್ಬರ ವರ್ತನೆಯೂ ಸಖತ್ ಭಿನ್ನ. ಆರಂಭದಿಂದಲೂ ಪರಸ್ಪರ ದ್ವೇಷಿಸಿಕೊಂಡು, ಪರಸ್ಪರ ವೈರತ್ವ ತೋರಿಸಿದ್ದ ಸಂಗೀತಾ ಹಾಗೂ ವಿನಯ್, ಕಳೆದೆರಡು ವಾರ ಸ್ನೇಹಿತರಂತೆ ಇದ್ದರು, ಈಗ ಮತ್ತೆ ಇಬ್ಬರೂ ವೈರಿಗಳಾಗಿದ್ದಾರೆ. ಭಾನುವಾರದ ಎಪಿಸೋಡ್​ನಲ್ಲಿ ಕಿಚ್ಚ ಟಾಸ್ಕ್ ಒಂದನ್ನು ಮಾಡಿಸಿದರು. ಆ ಟಾಸ್ಕ್​ನಲ್ಲಿ ಮನೆಯ ಅತ್ಯಂತ ಹೆಚ್ಚು ದುರಹಂಕಾರಿ ಎಂಬುದು ಪ್ರೇಕ್ಷಕರಿಗೆ ಗೊತ್ತಾಯ್ತು.

ದುರಂಹಕಾರಕ್ಕೆ ಔಷಧ, ನಾಲಗೆ ಬಿಗಿ ಹಿಡಿಯಲು ಔಷಧ, ನಂಬಿಕೆ ದ್ರೋಹ ಮಾಡದಿರಲು ಔಷಧ, ನಾಲಿಗೆಗೆ ಲಗಾಮು ಹಾಕುವ ಔಷಧ ಹೆಸರಿನಲ್ಲಿ ಕಹಿಯಾದ ಔಷಧಗಳನ್ನು ತರಿಸಲಾಯ್ತು. ಮನೆಯ ಪ್ರತಿಯೊಬ್ಬ ಸದಸ್ಯನೂ ಎರಡು ಟಾನಿಕ್ ಅನ್ನು ಯಾರಾದರೂ ಇಬ್ಬರಿಗೆ ಕೊಡಬೇಕಿತ್ತು. ಈ ಟಾಸ್ಕ್​ನಲ್ಲಿ ಅತಿ ಹೆಚ್ಚು ಟಾನಿಕ್ ಬಂದಿದ್ದು ಸಂಗೀತಾಗೆ, ಎರಡನೇ ಸ್ಥಾನ ವಿನಯ್ ಗೌಡಗೆ.

ಸಂಗೀತಾಗೆ ಬರೋಬ್ಬರಿ ಏಳು ಟಾನಿಕ್​ ದೊರಕಿತು. ಇದರಲ್ಲಿ ಐದು ಟಾಕಿನ್ ದುರಹಂಕಾರವನ್ನು ನಿಯಂತ್ರಿಸಿಕೊಳ್ಳಬೇಕು ಎಂಬುದೇ ಆಗಿತ್ತು. ನಂಬಿಕೆ ದ್ರೋಹ ಹಾಗೂ ನಾಲಿಗೆಗೆ ಲಗಾಮು ಔಷಧ ತಲಾ ಒಂದೊಂದು ಬಂತು. ವಿನಯ್ ಅಂತೂ ಸಂಗೀತಾಗೆ ಎರಡು ಟಾನಿಕ್ ನೀಡಿದ್ದರಿಂದ ಸಂಖ್ಯೆ ತುಸು ಹೆಚ್ಚಾಯ್ತು ಎಂಬುದನ್ನೂ ಗಮನಿಸಬೇಕು. ಎರಡನೇ ಸ್ಥಾನ ಪಡೆದ ವಿನಯ್​ಗೆ ಬರೋಬ್ಬರಿ ಐದು ಟಾನಿಕ್​ಗಳು ಬಂದವು. ಅದರಲ್ಲಿ ಎರಡು ದುರಹಂಕಾರ, ಇನ್ನುಳಿದವೆಲ್ಲ ನಾಲಿಗೆ ಬಿಗಿ ಹಿಡಿದುಕೊಳ್ಳಬೇಕು ಎಂಬ ಟಾನಿಕ್ ಆಗಿತ್ತು.

ಇದನ್ನೂ ಓದಿ: ಈ ವಾರ ಬಿಗ್​ಬಾಸ್ ಮನೆಯಲ್ಲಿ ಅತಿ ಹೆಚ್ಚು ಮತ ಗಳಿಸಿರುವುದು ಯಾರು? ಡ್ರೋನ್ ಪ್ರತಾಪ್​ಗೆ ಎಷ್ಟನೆ ಸ್ಥಾನ?

ಇನ್ನು ತುಕಾಲಿಗೆ ಸಹ ನಾಲಿಗೆ ಬಿಗಿ ಹಿಡಿದುಕೊಳ್ಳಬೇಕು ಎಂಬ ಕೆಲವು ಟಾನಿಕ್​ಗಳು ಬಂದವು, ಸಿರಿ ಅವರಿಗೆ ಹೇಡಿತನ ನಿವಾರಣೆ ಟಾನಿಕ್ ಅನ್ನು ತುಕಾಲಿ ನೀಡಿದರು. ಡ್ರೋನ್ ಪ್ರತಾಪ್​ಗೆ ನಂಬಿಕೆ ದ್ರೋಹ ಟಾನಿಕ್ ಅನ್ನು ನಮ್ರತಾ ನೀಡಿದರು. ಸ್ನೇಹಿತ್​ಗೂ ಕೆಲವು ನಾಲಿಗೆ ಬಿಗಿ ಹಿಡಿತದ ಟಾನಿಕ್ ಸಿಕ್ಕವು, ಮೈಖಲ್​ಗೆ ದುರಹಂಕಾರದ ಟಾನಿಕ್, ಅವಿ, ಕಾರ್ತಿಕ್​ಗೆ ತಲಾ ಒಂದು ನಾಲಿಗೆ ಬಿಗಿ ಹಿಡಿತದ ಟಾನಿಕ್ ಗಳು ಸಹ ದೊರೆತವು. ವರ್ತೂರು ಸಂತೋಷ್​ಗೆ, ತನಿಷಾಗೆ ಹಾಗೂ ನಮ್ರತಾಗೆ ಯಾವುದೇ ಟಾನಿಕ್​ ಸಿಗಲಿಲ್ಲ.

ಈ ಟಾನಿಕ್ ನೀಡುವ ಟಾಸ್ಕ್ ನಡೆವಾಗ ಕಿಚ್ಚನ ಎದುರೇ ಸಂಗೀತಾ ಹಾಗೂ ವಿನಯ್ ನಡುವೆ ಸಣ್ಣ ಮಟ್ಟಿಗಿನ ಮಾತಿನ ವಾರ್ ಸಹ ನಡೆಯಿತು. ಪರಸ್ಪರರನ್ನು ಇವರು ಮೂದಲಿಸಿದ್ದು ಸಹ ನಡೆಯಿತು. ಎಲಿಬಿಲ್ಲದ ನಾಲಗೆ, ಯಾರ ಬಗ್ಗೆ ಏನಾದರೂ ಮಾತನಾಡುತ್ತಾನೆ ಎಂದು ವಿನಯ್ ಬಗ್ಗೆ ಸಂಗೀತಾ ಹೇಳಿದರೆ, ಸಂಗೀತಾ ಜೊತೆ ಫ್ರೆಂಡ್​ಶಿಫ್ ಮಾಡಿದರೆ ನನಗಾಗಿ ಎಲ್ಲವನ್ನೂ ತ್ಯಾಗ ಮಾಡಬೇಕು ಎಂದು ಆಕೆ ನಿರೀಕ್ಷೆ ಮಾಡುತ್ತಾಳೆ, ತಾನು ಸ್ವತಃ ಇತರರ ಬಗ್ಗೆ ಮಾತನಾಡಿ, ನನ್ನ ವಿರುದ್ಧ ಹೇಳುತ್ತಾಳೆ ಎಂದರು ವಿನಯ್. ಇವರಿಬ್ಬರ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತದೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:50 pm, Sun, 3 December 23

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ