AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಆ ರೀತಿ ಮಾಡದೇ ಇದ್ದಿದ್ದರೆ ಇಷ್ಟೆಲ್ಲ ಆಗುತ್ತಿರಲಿಲ್ಲ; ಎಲ್ಲವೂ ಶುರುವಾಗಿದ್ದು ಎಲ್ಲಿ?

ಕೆಲವು ವರದಿಗಳ ಪ್ರಕಾರ ದೊಡ್ಮನೆಯಲ್ಲಿ ಜಗದೀಶ್ ಹಾಗೂ ರಂಜಿತ್ ಮಧ್ಯೆ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ನಿಯಮಗಳ ಪ್ರಕಾರ ಮನೆಯಲ್ಲಿ ಫೈಟ್ ಆದರೆ ಅದರ ಭಾಗಿದಾರರನ್ನು ನೇರವಾಗಿ ಹೊರಹಾಕಲಾಗುತ್ತದೆ. ಈಗ ಜಗದೀಶ್ ಹಾಗೂ ರಂಜಿತ್ ಬಡಿದಾಡಿಕೊಂಡು ಹೊರ ಹೋದರು ಎನ್ನಲಾಗಿದೆ. ಇದು ಆರಂಭ ಆಗಿದ್ದು ಎಲ್ಲಿಂದ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಮಂಜು ಆ ರೀತಿ ಮಾಡದೇ ಇದ್ದಿದ್ದರೆ ಇಷ್ಟೆಲ್ಲ ಆಗುತ್ತಿರಲಿಲ್ಲ; ಎಲ್ಲವೂ ಶುರುವಾಗಿದ್ದು ಎಲ್ಲಿ?
ಜಗದೀಶ್-ಮಂಜು
ರಾಜೇಶ್ ದುಗ್ಗುಮನೆ
|

Updated on: Oct 17, 2024 | 6:56 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಲಾಯರ್ ಜಗದೀಶ್ ಅವರು ಎಲಿಮಿನೇಟ್ ಆಗಿದ್ದಾರೆ ಎಂದು ವರದಿ ಆಗಿದೆ. ಅವರು ಹಾಗೂ ರಂಜಿತ್ ಮಧ್ಯೆ ಫೈಟ್ ನಡೆದು ಇಬ್ಬರೂ ಹೊರ ಹೋದರು ಎಂದು ಹೇಳಲಾಗುತ್ತಿದೆ. ಅದನ್ನೂ ಇನ್ನೂ ತೋರಿಸಿಲ್ಲ. ಆದರೆ, ಸುಮ್ಮನೆ ಇದ್ದ ಜಗದೀಶ್ ಅವರನ್ನು ಕೆರಳಿಸುವ ಕೆಲಸವನ್ನು ಮಾಡಿದ್ದು ಮಂಜು. ಇದೆಲ್ಲ ದೊಡ್ಡ ರಾಮಾಯಣಕ್ಕೆ ಕಾರಣ ಆಯಿತು.

‘ಬಿಗ್ ಬಾಸ್’ ಮನೆಯಲ್ಲಿ ಜಗದೀಶ್ ಅವರು ಇತಿ-ಮಿತಿ ಕಳೆದುಕೊಂಡು ಕೂಗಾಡುತ್ತಿದ್ದರು. ಈ ಕಾರಣಕ್ಕೆ ಅವರನ್ನು ಕನ್​ಫೆಷನ್ ರೂಂಗೆ ಬರುವಂತೆ ಬಿಗ್ ಬಾಸ್ ಸೂಚನೆ ನೀಡಿದರು. ಈ ಸೂಚನೆಯನ್ನು ಅವರು ಪಾಲಿಸಿದರು. ಆಗ ಎಲ್ಲವೂ ಸೈಲೆಂಟ್ ಆಗಿಯೇ ಇತ್ತು. ಮರುದಿನ ಮತ್ತೆ ಸ್ಪರ್ಧಿಗಳ ಮಧ್ಯೆ ಕಿತ್ತಾಟ ಶುರವಾಯಿತು. ಎಲ್ಲರೂ ಕಿತ್ತಾಡಿಕೊಳ್ಳೋಕೆ ಆರಂಭಿಸಿದರು. ಆಗ ಬಿಗ್ ಬಾಸ್ ಮಧ್ಯೆ ಬರಬೇಕಾಯಿತು.

ಪರಿಸ್ಥಿತಿ ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋದಾಗ ಬಿಗ್ ಬಾಸ್ ಮಧ್ಯೆ ಬಂದು ಎಲ್ಲರನ್ನೂ ಕೂರಿಸಿದರು. ಆಗ ಎಲ್ಲವೂ ಸೈಲೆಂಟ್ ಆಯಿತು. ಇದಾದ ಬಳಿಕ ಮಂಜು ಅವರು ಪದೇ ಪದೇ ಜಗದೀಶ್ ಅವರನ್ನು ಕೆಣಕೋಕೆ ಆರಂಭಿಸಿದರು. ಅವರಿಗೆ ಮನೆಯ ಮತ್ತೊಂದಷ್ಟು ಮಂದಿ ಸಾತ್ ಕೊಟ್ಟರು. ತಾವು ಏಕಾಂಗಿ ಎನ್ನುವ ಫೀಲ್ ಜಗದೀಶ್​ಗೆ ಬಂದಿತ್ತು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ರಂಜಿತ್-ಜಗದೀಶ್ ಮಧ್ಯೆ ಫೈಟ್? ಇಬ್ಬರೂ ಔಟ್

ಮಂಜು ಅವರು ಅಷ್ಟೊಂದು ಕೆಣಕದೇ ಇದ್ದಿದ್ದರೆ ಬಹುಶಃ ಜಗದೀಶ್ ಅವರು ಅಷ್ಟೊಂದು ಉಗ್ರ ಸ್ವರೂಪ ತಾಳುತ್ತಿರಲಿಲ್ಲವೇನೋ. ಮುಂದಾಗುವ ಫೈಟ್​ಗೆ ಇದುವೇ ಬುನಾದಿ ಹಾಕಿತ್ತು. ಇನ್ನು ಮಾನಸಾ ಹಾಗೂ ಜಗದೀಶ್ ಮಧ್ಯೆ ಕಿತ್ತಾಟ ನಡೆಯುವಾಗ ರಂಜಿತ್, ತ್ರಿವಿಕ್ರಂ ಹಾಗೂ ಮಂಜು ಮಧ್ಯ ಪ್ರವೇಶ ಮಾಡಿದ್ದು ಕೂಡ ತಪ್ಪು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಈಗ ಜಗದೀಶ್ ಹಾಗೂ ಮಂಜು ನಿಜಕ್ಕೂ ಹೊರ ಹೋಗಿದ್ದಾರೆ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ