AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಸ್ಪರ್ಧಿಗಳು, ಒಂದೇ ಸಿಂಹಾಸನ: ಫಿನಾಲೆ ತಲುಪುವ ಆ ಮೊದಲ ಸ್ಪರ್ಧಿ ಯಾರು?

‘ಸರಿಗಮಪ’ ರಿಯಾಲಿಟಿ ಶೋ ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ವೀಕ್ಷಕರ ಕುತೂಹಲ ಮತ್ತು ಕಾತರ ಹೆಚ್ಚಾಗಿದೆ. ಅದರ ಜೊತೆಗೆ ಸ್ಪರ್ಧಿಗಳ ನಡುವಿನ ಪೈಪೋಟಿ ಕೂಡ ಕಠಿಣ ಆಗುತ್ತಿದೆ. ಹಾಗಾದರೆ ಯಾರಿಗೆ ಸಿಗಲಿದೆ 'ಟಿಕೆಟ್ ಟು ಫಿನಾಲೆ'? ಈ ಕುತೂಹಲಕ್ಕೆ ಉತ್ತರ ಸಿಗಬೇಕಿದ್ದರೆ ವೀಕೆಂಡ್ ಸಂಚಿಕೆಗಳನ್ನು ನೋಡಬೇಕು.

13 ಸ್ಪರ್ಧಿಗಳು, ಒಂದೇ ಸಿಂಹಾಸನ: ಫಿನಾಲೆ ತಲುಪುವ ಆ ಮೊದಲ ಸ್ಪರ್ಧಿ ಯಾರು?
Saregamapa
ಮದನ್​ ಕುಮಾರ್​
|

Updated on: May 15, 2025 | 6:03 PM

Share

ಕನ್ನಡದ ಕಿರುತೆರೆಯಲ್ಲಿ ‘ಸರಿಗಮಪ’ (SaReGaMaPa) ಸಿಂಗಿಂಗ್ ರಿಯಾಲಿಟಿ ಶೋ ವಿಶೇಷವಾಗಿ ಗಮನ ಸೆಳೆದಿದೆ. 6 ವರ್ಷದಿಂದ 60 ವರುಷದ ತನಕ ಎಲ್ಲ ವಯೋಮಿತಿಯ ಸ್ಪರ್ಧಿಗಳು ಭಾಗವಹಿಸುತ್ತಿರುವ ಈ ಸೀಸನ್ ವಿಭಿನ್ನ ಕಾನ್ಸೆಪ್ಟ್​ನಿಂದ ಮತ್ತಷ್ಟು ಇಂಟೆರೆಸ್ಟಿಂಗ್ ಆಗಿ ಮೂಡಿ ಬರುತ್ತಿದೆ. ಅಷ್ಟೇ ಅಲ್ಲದೇ, ತೀರ್ಪುಗಾರರಾದ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್, ಮಾಜಿಕಲ್ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ (Arjun Janya), ಕಂಚಿನ ಕಂಠದ ಗಾಯಕ ವಿಜಯ ಪ್ರಕಾಶ್ ಮತ್ತು ಜನಪ್ರಿಯ ನಿರೂಪಕಿ ಅನುಶ್ರೀ ಅವರು ಈ ಆವೃತ್ತಿಯ ಹೈಲೈಟ್ ಆಗಿದ್ದಾರೆ.

ಇನ್ನೇನು ‘ಸರಿಗಮಪ’ ಶೋ ಫಿನಾಲೆ ಹತ್ತಿರ ಬರುತ್ತಿದ್ದಂತೆಯೇ ಜನರ ಕುತೂಹಲ, ಕಾತರ ಹೆಚ್ಚಾಗಿದೆ. ಅದರ ಜೊತೆಗೆ ಸ್ಪರ್ಧೆಯೂ ಮತ್ತಷ್ಟು ಕಠಿಣ ಆಗುತ್ತಿದೆ. ಈ ವಾರ ನಡೆಯಲಿರುವ ‘ಟಿಕೆಟ್ ಟು ಫಿನಾಲೆ’ಯಲ್ಲಿ 13 ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಾಳು ಬೆಳಗುಂದಿ, ದ್ಯಾಮೇಶ, ಭೂಮಿಕಾ, ಲಹರಿ, ಕಾರ್ತಿಕ್, ಮನೋಜ್, ರಶ್ಮಿ ಡಿ, ಅಮೋಘ ವರ್ಷ, ಸುಧೀಕ್ಷಾ, ಆಗಮ ಶಾಸ್ತ್ರೀ, ದೀಪಕ್, ಶಿವಾನಿ ಮತ್ತು ಆರಾಧ್ಯ ರಾವ್ ನಡುವೆ ಹಣಾಹಣಿ ನಡೆಯಲಿದೆ.

ಇವರೆಲ್ಲರ ಪೈಕಿ ಡೈರೆಕ್ಟ್ ಆಗಿ ಫಿನಾಲೆಗೆ ಟಿಕೆಟ್ ಪಡೆಯಲಿರುವ ಆ ಒಬ್ಬ ಲಕ್ಕಿ ಸ್ಪರ್ಧಿ ಯಾರು ಎಂದು ಕಾದು ನೋಡಬೇಕಾಗಿದೆ. ಅಷ್ಟೇ ಅಲ್ಲದೇ, ಈ ವಾರ ನಡೆಯಲಿರುವ ಟಿಕೆಟ್ ಟು ಫಿನಾಲೆ ಸಂಚಿಕೆಗೆ ಮತ್ತಷ್ಟು ರಂಗು ನೀಡಲು ಕನ್ನಡ ಚಿತ್ರರಂಗದ ಖ್ಯಾತ ನಟ ಶರಣ್ ಮತ್ತು ನಟಿ ಅದಿತಿ ಪ್ರಭುದೇವ ಅವರು ಬರುತ್ತಿದ್ದಾರೆ. ಅವರಿಂದಾಗಿ ಸಂಚಿಕೆಯ ಮೆರುಗು ಹೆಚ್ಚಲಿದೆ.

ಇದನ್ನೂ ಓದಿ
Image
ಸೀರಿಯಲ್ ಟಿಆರ್​ಪಿಯಲ್ಲಿ ಈ ಧಾರಾವಾಹಿಯೇ ನಂಬರ್ 1; ದಾಖಲೆಗಳೆಲ್ಲ ಉಡೀಸ್
Image
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ನಿಲ್ಲಿಸಲು ಬೇಡಿಕೆ ಇಟ್ಟ ವೀಕ್ಷಕರು; ಕಾರಣ?
Image
ಸಿಹಿಯ ಆತ್ಮ ಹಿಡಿದುಕೊಂಡ ಅಘೋರಿ; ಪ್ರಯಾಗ್​ರಾಜ್​​ನಲ್ಲಿ ‘ಸೀತಾ ರಾಮ’ ತಂಡ
Image
ತ್ರಿವಿಕ್ರಂ ಪಾಲಿಗೆ ಒಲಿದ ಅದೃಷ್ಟ; ಹೊಸ ಸೀರಿಯಲ್​ಗೆ ಹೀರೋ ಆದ ನಟ

ಇದನ್ನೂ ಓದಿ: ಟಿಆರ್​ಪಿಯಲ್ಲಿ ಮೊದಲ ಸ್ಥಾನದಲ್ಲಿ ಎರಡು ಜನಪ್ರಿಯ ಧಾರಾವಾಹಿಗಳು; ಟಾಪ್ 5 ಸೀರಿಯಲ್ ಲಿಸ್ಟ್ ಇಲ್ಲಿದೆ

ಶರಣ್ ಅವರ ಕಾಮಿಡಿ, ಅದಿತಿ ಪ್ರಭುದೇವ ಅವರ ಚಾರ್ಮ್ ‘ಟಿಕೆಟ್ ಟು ಫಿನಾಲೆ’ ಎಪಿಸೋಡ್​ನ ಕಲರ್​ಫುಲ್ ಮಾಡೋದು ಅಲ್ಲದೇ ಸ್ಪರ್ಧಿಗಳ ಹುಮ್ಮಸ್ಸನ್ನು ಹೆಚ್ಚಿಸಲಿದೆ. ಕಠಿಣ ಸ್ಪರ್ಧೆಯ ನಡುವೆಯೂ ಯಾರಿಗೆ ಸಿಗಲಿದೆ ‘ಟಿಕೆಟ್ ಟು ಫಿನಾಲೆ’? ಇದನ್ನು ತಿಳಿದುಕೊಳ್ಳಲು ಶನಿವಾರ ಮತ್ತು ಭಾನುವಾರ ಸಂಜೆ 7.30 ಕ್ಕೆ ‘ಸರಿಗಮಪ ಟಿಕೆಟ್ ಟು ಫಿನಾಲೆ’ ಸಂಚಿಕೆ ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ