AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೋನ್ ಪ್ರತಾಪ್​ಗೆ ಫಿನಾಲೆ ಟಿಕೆಟ್ ಕೊಟ್ಟಿಲ್ಲವೇಕೆ? ಸುದೀಪ್ ಕೊಟ್ಟರು ಅಭಿಪ್ರಾಯ

Bigg Boss Kannada: ಟಾಸ್ಕ್​ಗಳಲ್ಲಿ ಹೆಚ್ಚು ಅಂಕ ಗಳಿಸಿದ ಡ್ರೋನ್ ಪ್ರತಾಪ್​ಗೆ ಏಕೆ ನೇರ ಫಿನಾಲೆ ಟಿಕೆಟ್ ನೀಡಲಿಲ್ಲ, ಮತಚಲಾವಣೆ ನಡೆಸಿ ಸಂಗೀತಾಗೆ ಕೊಟ್ಟಿದ್ದೇಕೆ? ಸುದೀಪ್ ಕೊಟ್ಟರು ಸ್ಪಷ್ಟನೆ.

ಡ್ರೋನ್ ಪ್ರತಾಪ್​ಗೆ ಫಿನಾಲೆ ಟಿಕೆಟ್ ಕೊಟ್ಟಿಲ್ಲವೇಕೆ? ಸುದೀಪ್ ಕೊಟ್ಟರು ಅಭಿಪ್ರಾಯ
ಬಿಗ್​ಬಾಸ್
ಮಂಜುನಾಥ ಸಿ.
|

Updated on:Jan 13, 2024 | 11:55 PM

Share

ಬಿಗ್​ಬಾಸ್ (BiggBoss)​ ಕನ್ನಡ ಸೀಸನ್ 10ರಲ್ಲಿ ಈ ವಾರ ಆಟಗಾರರ ನಡುವೆ ಸ್ಪರ್ಧೆ ಜೋರಾಗಿತ್ತು ಅದಕ್ಕೆ ಕಾರಣ ಫಿನಾಲೆ ಟಿಕೆಟ್. ಈ ವಾರ ಹೆಚ್ಚು ಟಾಸ್ಕ್​ಗಳಲ್ಲಿ ಗೆದ್ದು ಮುಂಚೂಣಿಯಲ್ಲಿರುವವರು ಫಿನಾಲೆಗೆ ನೇರ ಟಿಕೆಟ್ ಪಡೆಯುತ್ತಾರೆಂಬ ಕಾರಣಕ್ಕೆ ಎಲ್ಲರೂ ಸಹ ಶಕ್ತಿ ಮೀರಿ ಆಟ ಆಡಿದರು. ಅಂತಿಮವಾಗಿ ಡ್ರೋನ್ ಪ್ರತಾಪ್ ಅತಿ ಹೆಚ್ಚು ಅಂಕ ಗಳಿಸಿದರು. ಡ್ರೋನ್ ಪ್ರತಾಪ್​ ನೇರವಾಗಿ ಫಿನಾಲೆಗೆ ಹೋದರು ಎಂದು ಮನೆಯ ಸದಸ್ಯರು ಅಂದುಕೊಂಡಿದ್ದರು. ಆದರೆ ಕೊನೆಯಲ್ಲಿ ಟ್ವಿಸ್ಟ್ ಕೊಟ್ಟ ಬಿಗ್​ಬಾಸ್ ಮನೆಯವರಿಂದ ಮತದಾನ ನಡೆಸಿ ಅದರಲ್ಲಿ ಗೆದ್ದ ಸಂಗೀತಾಗೆ ಫಿನಾಲೆ ಟಿಕೆಟ್ ನೀಡಿದರು.

ಈ ಬಗ್ಗೆ ಹೊರಗಡೆ ಹಲವರು ಪ್ರಶ್ನೆ ಮಾಡಿದರು. ವೋಟಿಂಗ್ ಮೂಲಕ ಟಿಕೆಟ್ ನೀಡುವುದಾದರೆ ಟಾಸ್ಕ್ ನಡೆಸಿದ್ದು ಏಕೆ? ಹೆಚ್ಚು ಮತ ಗಳಿಸಿದ ಡ್ರೋನ್ ಪ್ರತಾಪ್​ಗೆ ನೇರವಾಗಿ ಟಿಕೆಟ್ ನೀಡಲಿಲ್ಲ ಏಕೆ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಶನಿವಾರದ ಎಪಿಸೋಡ್​ಗೆ ಬಂದ ಸುದೀಪ್, ಇದೇ ಪ್ರಶ್ನೆಯನ್ನಿಟ್ಟುಕೊಂಡೇ ಎಪಿಸೋಡ್ ಪ್ರಾರಂಭ ಮಾಡಿದರು.

ಇದನ್ನೂ ಓದಿ:ಆಪ್ತ ಗೆಳೆಯ ವರ್ತೂರು ಸಂತು ಬೆನ್ನಿಗೆ ಚೂರಿ ಹಾಕಿದರೇ ತುಕಾಲಿ ಸಂತೋಷ್?

ಮೊದಲಿಗೆ ಮನೆಯ ಸದಸ್ಯರ ಅಭಿಪ್ರಾಯಗಳನ್ನು ಕೇಳಿದರು. ಆಗ ಡ್ರೋನ್ ಪ್ರತಾಪ್ ಸೇರಿದಂತೆ ಎಲ್ಲರೂ ಬಿಗ್​ಬಾಸ್ ನಿರ್ಣಯ ಸರಿಯಾಗಿಯೇ ಇತ್ತು ಎಂದರು. ಬಹುತೇಕರು, ಪ್ರತಾಪ್ ಇಷ್ಟು ದಿನ ಸರಿಯಾಗಿ ಆಡಲಿಲ್ಲ, ಆದರೆ ಈ ವಾರ ಮಾತ್ರವೇ ಚೆನ್ನಾಗಿ ಆಡಿದರು. ಅವರಿಗೆ ಟಿಕೆಟ್ ಕೊಟ್ಟಿದ್ದರೆ ಮೊದಲಿನಿಂದಲೂ ಚೆನ್ನಾಗಿ ಆಡಿಕೊಂಡು ಬಂದವರಿಗೆ ಅನ್ಯಾಯವಾಗುತ್ತದೆ ಎಂಬ ಅಭಿಪ್ರಾಯ ಮೂಡಿಬಂತು. ಕೇವಲ ಒಂದು ವಾರದ ಪ್ರದರ್ಶನದಿಂದ ಫಿನಾಲೆಗೆ ಹೋಗುವುದು ನ್ಯಾಯವಲ್ಲ ಎನಿಸಿತು ಎಂದು ಹಲವರು ಅಭಿಪ್ರಾಯಪಟ್ಟರು.

ಸುದೀಪ್ ಸಹ ಮಾತನಾಡುತ್ತಾ, ಬಿಗ್​ಬಾಸ್ ಎಂಬುದು ಒಂದು ವಾರದ ಆಟವಷ್ಟೆ ಅಲ್ಲ, ಅಲ್ಲದೇ ಕೇವಲ ಆಟ ಮಾತ್ರವೇ ಅಲ್ಲ ಮನೆಯಲ್ಲಿ ಇಷ್ಟು ದಿನಗಳ ಆಟಗಾರರ ವ್ಯಕ್ತಿತ್ವವೂ ಅದಕ್ಕೆ ಸೇರಿರುತ್ತದೆ. ವೀಕ್ಷಕರ ಅಭಿಪ್ರಾಯದ ಜೊತೆಗೆ, ಮನೆಯ ಒಳಗಿರುವವರ ಅಭಿಪ್ರಾಯವೂ ಮುಖ್ಯವಾಗುತ್ತದೆ. ಅದೆಲ್ಲದಕ್ಕಿಂತಲೂ ಮುಖ್ಯವಾಗಿ, ಬಿಗ್​ಬಾಸ್ ಘೋಷಣೆ ಮಾಡಿದಾಗಲೇ ಹೆಚ್ಚು ಅಂಕ ಗಳಿಸಿದವರಲ್ಲಿ ಒಬ್ಬರು ಫಿನಾಲೆಗೆ ಟಿಕೆಟ್ ಪಡೆಯಲಿದ್ದಾರೆ ಎಂದೇ ಘೋಷಿಸಿದ್ದರು. ಮನೆಯಲ್ಲಿರುವವರಿಗೆ ಹಾಗೂ ಪ್ರೇಕ್ಷಕರಿಗೆ ಈ ಸ್ಪಷ್ಟನೆ ನನಗೆ ಕೊಡಬೇಕು ಅನ್ನಿಸುತ್ತಿದೆ ಹಾಗಾಗಿ ಕೊಡುತ್ತಿದ್ದೇನೆ ಎಂದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:51 pm, Sat, 13 January 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!