AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬಿಗ್ ಬಾಸ್ ತೊರೆಯಲು ಇದೆ ಹಲವು ಕಾರಣ; ಶಾಕಿಂಗ್ ವಿಚಾರ ರಿವೀಲ್ ಮಾಡಿದ ರೂಪೇಶ್ ರಾಜಣ್ಣ

ಮಹಾಭಾರತದಲ್ಲಿ ಕೃಷ್ಣನ ಪಾತ್ರದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇಡೀ ಮಹಭಾರತಕ್ಕೆ ಅವರದ್ದೇ ನೇತೃತ್ವ. ಅವರು ಇಲ್ಲದೆ ಮಹಾಭಾರತವನ್ನು ಊಹಿಸಿಕೊಳ್ಳುವುದು ಕಷ್ಟ. ಈಗ ಸುದೀಪ್ ಅವರು ‘ಬಿಗ್ ಬಾಸ್’ ತೊರೆದ ಬಗ್ಗೆಯೂ ಇದೇ ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ. ಅವರು ಬಿಗ್ ಬಾಸ್ ತೊರೆದಕ್ಕೆ ಕಾರಣವನ್ನು ರೂಪೇಶ್ ರಾಜಣ್ಣ ವಿವರಿಸಿದ್ದಾರೆ.

ಸುದೀಪ್ ಬಿಗ್ ಬಾಸ್ ತೊರೆಯಲು ಇದೆ ಹಲವು ಕಾರಣ; ಶಾಕಿಂಗ್ ವಿಚಾರ ರಿವೀಲ್ ಮಾಡಿದ ರೂಪೇಶ್ ರಾಜಣ್ಣ
ರೂಪೇಶ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 15, 2024 | 7:01 AM

Share

ಕನ್ನಡ ಪರ ಹೋರಾಟಗಾರ, ಮಾಜಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ರಾಜಣ್ಣ ಅವರು ‘ಬಿಗ್ ಬಾಸ್’ ಆಯೋಜಕರ ವಿರುದ್ಧ ಹರಿಹಾಯ್ದಿದ್ದರು. ಸುದೀಪ್ ಅವರಿಗೆ ಅವಮಾನ ಆಗಿದೆ ಎಂದು ಅವರು ಹೇಳಿದ್ದರು. ಆದರೆ, ಅದಕ್ಕೆ ನಿಜವಾದ ಕಾರಣಗಳು ಏನು ಎಂಬುದು ರಿವೀಲ್ ಆಗಿರಲಿಲ್ಲ. ಈಗ ಈ ವಿಚಾರವನ್ನು ರೂಪೇಶ್ ರಾಜಣ್ಣ ಅವರು ವಿವರಿಸಿದ್ದಾರೆ. ಸುದೀಪ್ ಬಿಗ್ ಬಾಸ್ ತೊರೆಯಲು ಕಾರಣ ಏನು ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ.

ಈ ಮೊದಲು ‘ಬಿಗ್ ಬಾಸ್​’ನಲ್ಲಿ ಯಾರಾದರೂ ಇಂಗ್ಲಿಷ್ ಮಾತನಾಡಿದರೆ ಅದನ್ನು ಬಿಗ್ ಬಾಸ್ ಸಹಿಸುತ್ತಿರಲಿಲ್ಲ. ಆಗ ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡನ್ನು ಹಾಕುತ್ತಿದ್ದರು. ಆದರೆ, ಈಗ ಈ ಪದ್ಧತಿ ಅಳಿದು ಹೋಗಿದೆ. ಇದಕ್ಕೆ ಬಿಗ್ ಬಾಸ್ ಆಯೋಜಕರೇ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನು ಸುದೀಪ್ ಖಂಡಿಸಿದ್ದಾರೆ. ‘ಹೆಚ್ಚು ಇಂಗ್ಲಿಷ್ ಬಳಕೆ ಮಾಡಿದಾಗ ಅದನ್ನು ಪ್ರಶ್ನೆ ಮಾಡಿ’ ಎಂದು ಸುದೀಪ್ ಕೋರಿದ್ದರು. ಆದರೆ, ಇದಕ್ಕೆ ಆಯೋಜಕರು ಒಪ್ಪಿಲ್ಲ.

ಈ ಮೊದಲು ಸ್ವರ್ಗ ಹಾಗೂ ನರಕದ ಕಾನ್ಸೆಪ್ಟ್ ಇತ್ತು. ಸ್ವರ್ಗದ ಮಂದಿ ಹಾಯಾಗಿ ಕುಳಿತಿದ್ದರೆ ನರಕದವರು ನಿಂತೇ ಇದ್ದರು. ಹೀಗಾಗಿ, ಅವರಿಗೆ ಕೂರೂಕೆ ಅವಕಾಶ ಕೊಡಿ ಎಂದು ಸುದೀಪ್ ಕೋರಿದ್ದರು. ಆದರೆ, ಇದಕ್ಕೆ ಆಯೋಜಕರು ಸೊಪ್ಪು ಹಾಕಿಲ್ಲ ಎನ್ನಲಾಗಿದೆ. ಇದು ಸುದೀಪ್ ಕೋಪಕ್ಕೆ ಕಾರಣ ಆಗಿದೆ. ಅಲ್ಲದೆ, ನರಕವಾಸಿಗಳಿಗೆ ಟಾಯ್ಲೆಟ್ ಬಳಕೆಗೆ ಯಾವುದೇ ಷರತ್ತುಗಳನ್ನು ಹಾಕದಂತೆಯೂ ಕೋರಿದ್ದರು.

ಇದನ್ನೂ ಓದಿ: ‘ಕೃಷ್ಣ ಇಲ್ಲದ ಮಹಾಭಾರತ, ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’; ಎಲ್ಲರದ್ದೂ ಒಂದೇ ಅಭಿಪ್ರಾಯ

‘ಎ23 ರಮ್ಮಿ’ ಆ್ಯಪ್​ ಕೂಡ ‘ಬಿಗ್ ಬಾಸ್​’ನ ಸ್ಪಾನ್ಸರ್​ಗಳಲ್ಲಿ ಒಂದಾಗಿದೆ. ಈ ಹೆಸರನ್ನು ತೆಗೆದುಕೊಳ್ಳೋಕೆ ಇರಿಸುಮುರುಸಾಗುತ್ತಿದೆ ಎಂದು ಸುದೀಪ್ ಹೇಳಿದ್ದರು. ಇದನ್ನು ಸ್ವಲ್ಪ ಅವಾಯ್ಡ್ ಮಾಡಿ ಎಂದು ಸುದೀಪ್ ಕೋರಿದ್ದರು. ಆದರೆ, ಆಯೋಜಕರು ಒಪ್ಪಿಲ್ಲ. ಈಗ ಸುದೀಪ್ ಅವರು ಬಿಗ್ ಬಾಸ್ ತೊರೆಯಲು ನಿರ್ಧರಿಸಿರುವುದರಿಂದ ಬದಲಾವಣೆಗಳನ್ನು ಮಾಡಲು ಆಯೋಜಕರು ಒಪ್ಪಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್