AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತೇ ಬಂಡವಾಳ ಎಂದುಕೊಂಡಿದ್ದ ಯಮುನಾಗೆ ಅದುವೇ ಮುಳುವಾಯ್ತಾ?

ಯಮುನಾ ಶ್ರೀನಿಧಿ ಅವರು ಮೊದಲ ದಿನದಿಂದಲೂ ಆ್ಯಕ್ಟೀವ್​ ಆಗಿದ್ದರು. ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಕೆಲವೇ ಕ್ಷಣಗಳ ಬಳಿಕ ಅವರು ಗೋಲ್ಡ್​ ಸುರೇಶ್​ ಬಳಿ ವಾದಕ್ಕೆ ಇಳಿದಿದ್ದರು. ಎಲ್ಲದೇ ಜಗದೀಶ್​ ಅವರು ಹಲವು ಬಾರಿ ನಿಯಮಗಳನ್ನು ಮುರಿದಾಗ ನೇರವಾಗಿ ವಿರೋಧಿಸಿದ್ದರು.

ಮಾತೇ ಬಂಡವಾಳ ಎಂದುಕೊಂಡಿದ್ದ ಯಮುನಾಗೆ ಅದುವೇ ಮುಳುವಾಯ್ತಾ?
ಯಮುನಾ
ರಾಜೇಶ್ ದುಗ್ಗುಮನೆ
|

Updated on: Oct 07, 2024 | 6:50 AM

Share

ನಟಿ ಯಮುನಾ ಶ್ರೀನಿಧಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಎಲಿಮಿನೇಟ್ ಆದ ಮೊದಲ ಸ್ಪರ್ಧಿ ಆಗಿದ್ದಾರೆ. ಅವರ ಎಲಿಮಿನೇಷನ್ ಶಾಕಿಂಗ್ ಎನಿಸಿದೆ. ಯಾರೂ ಇದನ್ನು ನಿರೀಕ್ಷಿಸಿರಲಿಲ್ಲ. ಯಮುನಾ ಎಲಿಮಿನೇಟ್ ಆಗುತ್ತಿದ್ದಂತೆ ಮನೆಯಲ್ಲಿ ಕೆಲವರು ಕಣ್ಣೀರು ಹಾಕಿದರು. ಆದರೆ, ಒಬ್ಬರು ಪ್ರತಿ ವಾರ ಎಲಿಮಿನೇಟ್ ಆಗೋದು ನಿಯಮ. ನಟಿ ಯಮುನಾಗೆ ಮಾತೇ ಬಂಡವಾಳ ಎಂದು ಕೆಲವರು ಅಂದುಕೊಂಡಿದ್ದರು. ಆದರೆ, ಅದುವೇ ಮುಳುವಾಯಿತೇ ಎನ್ನುವ ಪ್ರಶ್ನೆ ಮೂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ 17 ಸ್ಪರ್ಧಿಗಳು ಇದ್ದಾರೆ. ಇದರಲ್ಲಿ ಆರಂಭದಿಂದಲೂ ಹೆಚ್ಚು ಗಮನ ಸೆಳೆಯುವ ಪ್ರಯತ್ನ ಮಾಡಿದ್ದು ಯಮುನಾ. ಅವರು ಜೋರು ಜೋರಾಗಿ ಕೂಗಾಡುತ್ತಿದ್ದರು. ಎಲ್ಲರ ವಿರುದ್ಧ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರು. ಉಗ್ರಂ ಮಂಜು ಜೊತೆ ಅನೇಕ ಬಾರಿ ಜಗಳ ಕೂಡ ಮಾಡಿಕೊಂಡಿದ್ದರು.

ಜೋರಾಗಿ ಮಾತನಾಡಿದರೆ ಕೆಲವೊಮ್ಮೆ ಕೆಲವರು ಹೈಲೈಟ್ ಆಗೋ ಸಾಧ್ಯತೆ ಇರುತ್ತದೆ. ಅದೇ ರೀತಿ ಕೆಲವರಿಗೆ ಅದು ನೆಗೆಟಿವ್ ಆಗುವ ಸಾಧ್ಯತೆಯೂ ಇರುತ್ತದೆ. ಇಂಥ ಸ್ಪರ್ಧಿಗಳನ್ನು ಜನರು ದ್ವೇಷಿಸಿದ್ದೂ ಇದೆ. ಯಮುನಾ ಶ್ರೀನಿಧಿಗೂ ಇದೇ ರೀತಿ ಆಯಿತೇ ಎನ್ನುವ ಪ್ರಶ್ನೆ ಅನೇಕರನ್ನು ಕಾಡಿದೆ.

ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್​, ಮಾನಸಾ ಮತ್ತು ಮೋಕ್ಷಿತಾ ಅವರು ಕಳೆದ ವಾರ ನಾಮಿನೇಟ್​ ಆಗಿದ್ದರು. ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್​ ಆಗಿದ್ದಾರೆ. ತಾವು ಹೊರಗಿನಿಂದ ಮಾಡಿಕೊಂಡು ಬಂದ ಸ್ಟ್ರ್ಯಾಟಜಿಗಳು ಇಲ್ಲಿ ಕೆಲಸ ಮಾಡಲ್ಲ ಅನ್ನೋದಕ್ಕೆ ಇದು ಪಕ್ಕಾ ಉದಾಹರಣೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಮೊದಲ ವಾರ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ 

ಈ ಬಾರಿ ಬಿಗ್ ಬಾಸ್ ಸೇರಿದ ಬಹುತೇಕ ಎಲ್ಲಾ ಸ್ಪರ್ಧಿಗಳ ಪರಿಚಯ ಪ್ರೇಕ್ಷಕರಿಗೆ ಇದೆ. ಹೀಗಾಗಿ, ಯಾರು ಉಳಿಯುತ್ತಾರೆ ಹಾಗೂ ಯಾರು ಹೋಗುತ್ತಾರೆ ಎಂದು ಊಹಿಸೋದು ಕಷ್ಟ ಆಗುತ್ತಿದೆ. ಈ ವಾರ ಯಾರ್ಯಾರು ನಾಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?