AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತೇ ಬಂಡವಾಳ ಎಂದುಕೊಂಡಿದ್ದ ಯಮುನಾಗೆ ಅದುವೇ ಮುಳುವಾಯ್ತಾ?

ಯಮುನಾ ಶ್ರೀನಿಧಿ ಅವರು ಮೊದಲ ದಿನದಿಂದಲೂ ಆ್ಯಕ್ಟೀವ್​ ಆಗಿದ್ದರು. ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಕೆಲವೇ ಕ್ಷಣಗಳ ಬಳಿಕ ಅವರು ಗೋಲ್ಡ್​ ಸುರೇಶ್​ ಬಳಿ ವಾದಕ್ಕೆ ಇಳಿದಿದ್ದರು. ಎಲ್ಲದೇ ಜಗದೀಶ್​ ಅವರು ಹಲವು ಬಾರಿ ನಿಯಮಗಳನ್ನು ಮುರಿದಾಗ ನೇರವಾಗಿ ವಿರೋಧಿಸಿದ್ದರು.

ಮಾತೇ ಬಂಡವಾಳ ಎಂದುಕೊಂಡಿದ್ದ ಯಮುನಾಗೆ ಅದುವೇ ಮುಳುವಾಯ್ತಾ?
ಯಮುನಾ
ರಾಜೇಶ್ ದುಗ್ಗುಮನೆ
|

Updated on: Oct 07, 2024 | 6:50 AM

Share

ನಟಿ ಯಮುನಾ ಶ್ರೀನಿಧಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಎಲಿಮಿನೇಟ್ ಆದ ಮೊದಲ ಸ್ಪರ್ಧಿ ಆಗಿದ್ದಾರೆ. ಅವರ ಎಲಿಮಿನೇಷನ್ ಶಾಕಿಂಗ್ ಎನಿಸಿದೆ. ಯಾರೂ ಇದನ್ನು ನಿರೀಕ್ಷಿಸಿರಲಿಲ್ಲ. ಯಮುನಾ ಎಲಿಮಿನೇಟ್ ಆಗುತ್ತಿದ್ದಂತೆ ಮನೆಯಲ್ಲಿ ಕೆಲವರು ಕಣ್ಣೀರು ಹಾಕಿದರು. ಆದರೆ, ಒಬ್ಬರು ಪ್ರತಿ ವಾರ ಎಲಿಮಿನೇಟ್ ಆಗೋದು ನಿಯಮ. ನಟಿ ಯಮುನಾಗೆ ಮಾತೇ ಬಂಡವಾಳ ಎಂದು ಕೆಲವರು ಅಂದುಕೊಂಡಿದ್ದರು. ಆದರೆ, ಅದುವೇ ಮುಳುವಾಯಿತೇ ಎನ್ನುವ ಪ್ರಶ್ನೆ ಮೂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ 17 ಸ್ಪರ್ಧಿಗಳು ಇದ್ದಾರೆ. ಇದರಲ್ಲಿ ಆರಂಭದಿಂದಲೂ ಹೆಚ್ಚು ಗಮನ ಸೆಳೆಯುವ ಪ್ರಯತ್ನ ಮಾಡಿದ್ದು ಯಮುನಾ. ಅವರು ಜೋರು ಜೋರಾಗಿ ಕೂಗಾಡುತ್ತಿದ್ದರು. ಎಲ್ಲರ ವಿರುದ್ಧ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರು. ಉಗ್ರಂ ಮಂಜು ಜೊತೆ ಅನೇಕ ಬಾರಿ ಜಗಳ ಕೂಡ ಮಾಡಿಕೊಂಡಿದ್ದರು.

ಜೋರಾಗಿ ಮಾತನಾಡಿದರೆ ಕೆಲವೊಮ್ಮೆ ಕೆಲವರು ಹೈಲೈಟ್ ಆಗೋ ಸಾಧ್ಯತೆ ಇರುತ್ತದೆ. ಅದೇ ರೀತಿ ಕೆಲವರಿಗೆ ಅದು ನೆಗೆಟಿವ್ ಆಗುವ ಸಾಧ್ಯತೆಯೂ ಇರುತ್ತದೆ. ಇಂಥ ಸ್ಪರ್ಧಿಗಳನ್ನು ಜನರು ದ್ವೇಷಿಸಿದ್ದೂ ಇದೆ. ಯಮುನಾ ಶ್ರೀನಿಧಿಗೂ ಇದೇ ರೀತಿ ಆಯಿತೇ ಎನ್ನುವ ಪ್ರಶ್ನೆ ಅನೇಕರನ್ನು ಕಾಡಿದೆ.

ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್​, ಮಾನಸಾ ಮತ್ತು ಮೋಕ್ಷಿತಾ ಅವರು ಕಳೆದ ವಾರ ನಾಮಿನೇಟ್​ ಆಗಿದ್ದರು. ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್​ ಆಗಿದ್ದಾರೆ. ತಾವು ಹೊರಗಿನಿಂದ ಮಾಡಿಕೊಂಡು ಬಂದ ಸ್ಟ್ರ್ಯಾಟಜಿಗಳು ಇಲ್ಲಿ ಕೆಲಸ ಮಾಡಲ್ಲ ಅನ್ನೋದಕ್ಕೆ ಇದು ಪಕ್ಕಾ ಉದಾಹರಣೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಿಂದ ಮೊದಲ ವಾರ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ 

ಈ ಬಾರಿ ಬಿಗ್ ಬಾಸ್ ಸೇರಿದ ಬಹುತೇಕ ಎಲ್ಲಾ ಸ್ಪರ್ಧಿಗಳ ಪರಿಚಯ ಪ್ರೇಕ್ಷಕರಿಗೆ ಇದೆ. ಹೀಗಾಗಿ, ಯಾರು ಉಳಿಯುತ್ತಾರೆ ಹಾಗೂ ಯಾರು ಹೋಗುತ್ತಾರೆ ಎಂದು ಊಹಿಸೋದು ಕಷ್ಟ ಆಗುತ್ತಿದೆ. ಈ ವಾರ ಯಾರ್ಯಾರು ನಾಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!