AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಮತ್ತೊಂದು ವೈಲ್ಡ್ ಕಾರ್ಡ್ ಎಂಟ್ರಿ; ಪ್ರೋಮೋ ವೈರಲ್

ಮುನಾವರ್ ಅವರ ಅಭಿಮಾನಿಗಳು ಈ ಪ್ರೋಮೋನ ನೋಡಿ ಶಾಕ್ ಆಗಿದ್ದಾರೆ. ಒಂದೊಮ್ಮೆ ಆಯೆಷಾ ಬಿಗ್ ಬಾಸ್ ಮನೆ ಒಳಗೆ ಹೋದರೆ ಇನ್ನೂ ಏನೆಲ್ಲ ಡ್ರಾಮಾ ಆಗಬಹುದು ಎಂದು ಫ್ಯಾನ್ಸ್ ಊಹಿಸಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್ ಮನೆಗೆ ಮತ್ತೊಂದು ವೈಲ್ಡ್ ಕಾರ್ಡ್ ಎಂಟ್ರಿ; ಪ್ರೋಮೋ ವೈರಲ್
ಆಯೆಷಾ
ರಾಜೇಶ್ ದುಗ್ಗುಮನೆ
|

Updated on: Dec 16, 2023 | 11:12 AM

Share

ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ‘ಬಿಗ್ ಬಾಸ್’ ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ. ಬಿಗ್ ಬಾಸ್​ನಲ್ಲಿ ಪ್ರತಿ ಬಾರಿ ವೈಲ್ಡ್ ಕಾರ್ಡ್ ಎಂಟ್ರಿ ಸಾಕಷ್ಟು ಗಮನ ಸೆಳೆಯುತ್ತದೆ. ಈಗಾಗಲೇ ಕನ್ನಡ ಬಿಗ್ ಬಾಸ್​ನಲ್ಲಿ (Bigg Boss) ಇಬ್ಬರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅದೇ ರೀತಿ ಹಿಂದಿಯಲ್ಲೂ ಆಗಿದೆ. ಈಗ ಹಿಂದಿ ಬಿಗ್ ಬಾಸ್​ ಮನೆಗೆ ಒಬ್ಬರ ಎಂಟ್ರಿ ಆಗುತ್ತಿದೆ. ಅವರ ಹೆಸರು ಆಯೆಷಾ ಖಾನ್. ‘ಮುನಾವರ್ ಫಾರೂಕಿ ನನ್ನನ್ನು ಮದುವೆ ಆಗೋ ಭರವಸೆ ನೀಡಿದ್ದಾರೆ’ ಎಂದು ಅವರು ಹೇಳಿದ್ದಾರೆ. ಇದು ಮುನಾವರ್ ಅಭಿಮಾನಿಗಳಿಗೆ ಶಾಕ್ ನೀಡಿದೆ.

‘ನಾನು ಆಯೆಷಾ ಖಾನ್ ಅನ್ನೋದು ನಿಮಗೆ ಗೊತ್ತು. ಶೋನಲ್ಲಿ ಮುನಾವರ್ ಹೆಸರಿನ ಸ್ಪರ್ಧಿ ಇದ್ದಾರೆ. ನನಗೆ ಅವರ ಜೊತೆ ಲಿಂಕ್ ಇದೆ. ಅವರು ಹೇಗೆ ತೋರಿಸಿಕೊಳ್ಳುತ್ತಿದ್ದಾರೋ ಹಾಗಿಲ್ಲ. ಶೋಗೆ ಹೋಗೋ ಮೊದಲು ಅವರು ನನಗೆ ಐ ಲವ್​ ಯೂ, ನಾನು ನಿನ್ನ ಮದುವೆ ಆಗುತ್ತೇನೆ ಎನ್ನುತ್ತಿದ್ದರು. ಅವರು ಹುಡುಗಿಯರನ್ನು ಅಪ್ರೋಚ್ ಮಾಡೋದೆ ಹೀಗೆ. ನನಗೆ ಅವರಿಂದ ಕ್ಷಮೆ ಬೇಕು. ನಾನು ಈ ಶೋಗೆ ಹೋಗೋಕೆ ಅದುವೇ ಮುಖ್ಯ ಕಾರಣ’ ಎಂದಿದ್ದಾರೆ ಆಯೆಷಾ. ಸದ್ಯ ಈ ಪ್ರೋಮೋ ಗಮನ ಸೆಳೆಯುತ್ತಿದೆ.

ಮುನಾವರ್ ಅವರ ಅಭಿಮಾನಿಗಳು ಈ ಪ್ರೋಮೋನ ನೋಡಿ ಶಾಕ್ ಆಗಿದ್ದಾರೆ. ಒಂದೊಮ್ಮೆ ಆಯೆಷಾ ಬಿಗ್ ಬಾಸ್ ಮನೆ ಒಳಗೆ ಹೋದರೆ ಇನ್ನೂ ಏನೆಲ್ಲ ಡ್ರಾಮಾ ಆಗಬಹುದು ಎಂದು ಫ್ಯಾನ್ಸ್ ಊಹಿಸಿಕೊಳ್ಳುತ್ತಿದ್ದಾರೆ. ‘ಮುನಾವರ್ ಅವರ ತಪ್ಪು ಇಲ್ಲ ಎನಿಸುತ್ತಿದೆ. ಜನಪ್ರಿಯತೆ ಪಡೆಯಲು ಆಯೆಷಾ ಈ ರೀತಿ ಮಾಡುತ್ತಿದ್ದಾರೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಸಿಕ್ಕಿದೆ ಕಿಚ್ಚ ಸುದೀಪ್ ಮಾಡಿದ ಅಡುಗೆ

ಮುನಾವರ್ ಅವರು ಬಿಗ್ ಬಾಸ್​ಗೆ ತೆರಳಿ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚಿದೆ.  ಮುನಾವರ್ ಅವರು ಬಿಗ್ ಬಾಸ್ ಗೆಲ್ಲಲಿ ಅನ್ನೋದು ಅನೇಕರ ಕೋರಿಕೆ. ಕಲರ್ಸ್ ಹಾಗೂ ಜಿಯೋ ಸಿನಿಮಾದಲ್ಲಿ ಹಿಂದಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK