AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಮತ್ತೊಂದು ವೈಲ್ಡ್ ಕಾರ್ಡ್ ಎಂಟ್ರಿ; ಪ್ರೋಮೋ ವೈರಲ್

ಮುನಾವರ್ ಅವರ ಅಭಿಮಾನಿಗಳು ಈ ಪ್ರೋಮೋನ ನೋಡಿ ಶಾಕ್ ಆಗಿದ್ದಾರೆ. ಒಂದೊಮ್ಮೆ ಆಯೆಷಾ ಬಿಗ್ ಬಾಸ್ ಮನೆ ಒಳಗೆ ಹೋದರೆ ಇನ್ನೂ ಏನೆಲ್ಲ ಡ್ರಾಮಾ ಆಗಬಹುದು ಎಂದು ಫ್ಯಾನ್ಸ್ ಊಹಿಸಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್ ಮನೆಗೆ ಮತ್ತೊಂದು ವೈಲ್ಡ್ ಕಾರ್ಡ್ ಎಂಟ್ರಿ; ಪ್ರೋಮೋ ವೈರಲ್
ಆಯೆಷಾ
ರಾಜೇಶ್ ದುಗ್ಗುಮನೆ
|

Updated on: Dec 16, 2023 | 11:12 AM

Share

ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ‘ಬಿಗ್ ಬಾಸ್’ ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ. ಬಿಗ್ ಬಾಸ್​ನಲ್ಲಿ ಪ್ರತಿ ಬಾರಿ ವೈಲ್ಡ್ ಕಾರ್ಡ್ ಎಂಟ್ರಿ ಸಾಕಷ್ಟು ಗಮನ ಸೆಳೆಯುತ್ತದೆ. ಈಗಾಗಲೇ ಕನ್ನಡ ಬಿಗ್ ಬಾಸ್​ನಲ್ಲಿ (Bigg Boss) ಇಬ್ಬರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅದೇ ರೀತಿ ಹಿಂದಿಯಲ್ಲೂ ಆಗಿದೆ. ಈಗ ಹಿಂದಿ ಬಿಗ್ ಬಾಸ್​ ಮನೆಗೆ ಒಬ್ಬರ ಎಂಟ್ರಿ ಆಗುತ್ತಿದೆ. ಅವರ ಹೆಸರು ಆಯೆಷಾ ಖಾನ್. ‘ಮುನಾವರ್ ಫಾರೂಕಿ ನನ್ನನ್ನು ಮದುವೆ ಆಗೋ ಭರವಸೆ ನೀಡಿದ್ದಾರೆ’ ಎಂದು ಅವರು ಹೇಳಿದ್ದಾರೆ. ಇದು ಮುನಾವರ್ ಅಭಿಮಾನಿಗಳಿಗೆ ಶಾಕ್ ನೀಡಿದೆ.

‘ನಾನು ಆಯೆಷಾ ಖಾನ್ ಅನ್ನೋದು ನಿಮಗೆ ಗೊತ್ತು. ಶೋನಲ್ಲಿ ಮುನಾವರ್ ಹೆಸರಿನ ಸ್ಪರ್ಧಿ ಇದ್ದಾರೆ. ನನಗೆ ಅವರ ಜೊತೆ ಲಿಂಕ್ ಇದೆ. ಅವರು ಹೇಗೆ ತೋರಿಸಿಕೊಳ್ಳುತ್ತಿದ್ದಾರೋ ಹಾಗಿಲ್ಲ. ಶೋಗೆ ಹೋಗೋ ಮೊದಲು ಅವರು ನನಗೆ ಐ ಲವ್​ ಯೂ, ನಾನು ನಿನ್ನ ಮದುವೆ ಆಗುತ್ತೇನೆ ಎನ್ನುತ್ತಿದ್ದರು. ಅವರು ಹುಡುಗಿಯರನ್ನು ಅಪ್ರೋಚ್ ಮಾಡೋದೆ ಹೀಗೆ. ನನಗೆ ಅವರಿಂದ ಕ್ಷಮೆ ಬೇಕು. ನಾನು ಈ ಶೋಗೆ ಹೋಗೋಕೆ ಅದುವೇ ಮುಖ್ಯ ಕಾರಣ’ ಎಂದಿದ್ದಾರೆ ಆಯೆಷಾ. ಸದ್ಯ ಈ ಪ್ರೋಮೋ ಗಮನ ಸೆಳೆಯುತ್ತಿದೆ.

ಮುನಾವರ್ ಅವರ ಅಭಿಮಾನಿಗಳು ಈ ಪ್ರೋಮೋನ ನೋಡಿ ಶಾಕ್ ಆಗಿದ್ದಾರೆ. ಒಂದೊಮ್ಮೆ ಆಯೆಷಾ ಬಿಗ್ ಬಾಸ್ ಮನೆ ಒಳಗೆ ಹೋದರೆ ಇನ್ನೂ ಏನೆಲ್ಲ ಡ್ರಾಮಾ ಆಗಬಹುದು ಎಂದು ಫ್ಯಾನ್ಸ್ ಊಹಿಸಿಕೊಳ್ಳುತ್ತಿದ್ದಾರೆ. ‘ಮುನಾವರ್ ಅವರ ತಪ್ಪು ಇಲ್ಲ ಎನಿಸುತ್ತಿದೆ. ಜನಪ್ರಿಯತೆ ಪಡೆಯಲು ಆಯೆಷಾ ಈ ರೀತಿ ಮಾಡುತ್ತಿದ್ದಾರೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಸಿಕ್ಕಿದೆ ಕಿಚ್ಚ ಸುದೀಪ್ ಮಾಡಿದ ಅಡುಗೆ

ಮುನಾವರ್ ಅವರು ಬಿಗ್ ಬಾಸ್​ಗೆ ತೆರಳಿ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚಿದೆ.  ಮುನಾವರ್ ಅವರು ಬಿಗ್ ಬಾಸ್ ಗೆಲ್ಲಲಿ ಅನ್ನೋದು ಅನೇಕರ ಕೋರಿಕೆ. ಕಲರ್ಸ್ ಹಾಗೂ ಜಿಯೋ ಸಿನಿಮಾದಲ್ಲಿ ಹಿಂದಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು