AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಗೆ ಮತ್ತೊಂದು ವೈಲ್ಡ್ ಕಾರ್ಡ್ ಎಂಟ್ರಿ; ಪ್ರೋಮೋ ವೈರಲ್

ಮುನಾವರ್ ಅವರ ಅಭಿಮಾನಿಗಳು ಈ ಪ್ರೋಮೋನ ನೋಡಿ ಶಾಕ್ ಆಗಿದ್ದಾರೆ. ಒಂದೊಮ್ಮೆ ಆಯೆಷಾ ಬಿಗ್ ಬಾಸ್ ಮನೆ ಒಳಗೆ ಹೋದರೆ ಇನ್ನೂ ಏನೆಲ್ಲ ಡ್ರಾಮಾ ಆಗಬಹುದು ಎಂದು ಫ್ಯಾನ್ಸ್ ಊಹಿಸಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್ ಮನೆಗೆ ಮತ್ತೊಂದು ವೈಲ್ಡ್ ಕಾರ್ಡ್ ಎಂಟ್ರಿ; ಪ್ರೋಮೋ ವೈರಲ್
ಆಯೆಷಾ
ರಾಜೇಶ್ ದುಗ್ಗುಮನೆ
|

Updated on: Dec 16, 2023 | 11:12 AM

Share

ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ‘ಬಿಗ್ ಬಾಸ್’ ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ. ಬಿಗ್ ಬಾಸ್​ನಲ್ಲಿ ಪ್ರತಿ ಬಾರಿ ವೈಲ್ಡ್ ಕಾರ್ಡ್ ಎಂಟ್ರಿ ಸಾಕಷ್ಟು ಗಮನ ಸೆಳೆಯುತ್ತದೆ. ಈಗಾಗಲೇ ಕನ್ನಡ ಬಿಗ್ ಬಾಸ್​ನಲ್ಲಿ (Bigg Boss) ಇಬ್ಬರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅದೇ ರೀತಿ ಹಿಂದಿಯಲ್ಲೂ ಆಗಿದೆ. ಈಗ ಹಿಂದಿ ಬಿಗ್ ಬಾಸ್​ ಮನೆಗೆ ಒಬ್ಬರ ಎಂಟ್ರಿ ಆಗುತ್ತಿದೆ. ಅವರ ಹೆಸರು ಆಯೆಷಾ ಖಾನ್. ‘ಮುನಾವರ್ ಫಾರೂಕಿ ನನ್ನನ್ನು ಮದುವೆ ಆಗೋ ಭರವಸೆ ನೀಡಿದ್ದಾರೆ’ ಎಂದು ಅವರು ಹೇಳಿದ್ದಾರೆ. ಇದು ಮುನಾವರ್ ಅಭಿಮಾನಿಗಳಿಗೆ ಶಾಕ್ ನೀಡಿದೆ.

‘ನಾನು ಆಯೆಷಾ ಖಾನ್ ಅನ್ನೋದು ನಿಮಗೆ ಗೊತ್ತು. ಶೋನಲ್ಲಿ ಮುನಾವರ್ ಹೆಸರಿನ ಸ್ಪರ್ಧಿ ಇದ್ದಾರೆ. ನನಗೆ ಅವರ ಜೊತೆ ಲಿಂಕ್ ಇದೆ. ಅವರು ಹೇಗೆ ತೋರಿಸಿಕೊಳ್ಳುತ್ತಿದ್ದಾರೋ ಹಾಗಿಲ್ಲ. ಶೋಗೆ ಹೋಗೋ ಮೊದಲು ಅವರು ನನಗೆ ಐ ಲವ್​ ಯೂ, ನಾನು ನಿನ್ನ ಮದುವೆ ಆಗುತ್ತೇನೆ ಎನ್ನುತ್ತಿದ್ದರು. ಅವರು ಹುಡುಗಿಯರನ್ನು ಅಪ್ರೋಚ್ ಮಾಡೋದೆ ಹೀಗೆ. ನನಗೆ ಅವರಿಂದ ಕ್ಷಮೆ ಬೇಕು. ನಾನು ಈ ಶೋಗೆ ಹೋಗೋಕೆ ಅದುವೇ ಮುಖ್ಯ ಕಾರಣ’ ಎಂದಿದ್ದಾರೆ ಆಯೆಷಾ. ಸದ್ಯ ಈ ಪ್ರೋಮೋ ಗಮನ ಸೆಳೆಯುತ್ತಿದೆ.

ಮುನಾವರ್ ಅವರ ಅಭಿಮಾನಿಗಳು ಈ ಪ್ರೋಮೋನ ನೋಡಿ ಶಾಕ್ ಆಗಿದ್ದಾರೆ. ಒಂದೊಮ್ಮೆ ಆಯೆಷಾ ಬಿಗ್ ಬಾಸ್ ಮನೆ ಒಳಗೆ ಹೋದರೆ ಇನ್ನೂ ಏನೆಲ್ಲ ಡ್ರಾಮಾ ಆಗಬಹುದು ಎಂದು ಫ್ಯಾನ್ಸ್ ಊಹಿಸಿಕೊಳ್ಳುತ್ತಿದ್ದಾರೆ. ‘ಮುನಾವರ್ ಅವರ ತಪ್ಪು ಇಲ್ಲ ಎನಿಸುತ್ತಿದೆ. ಜನಪ್ರಿಯತೆ ಪಡೆಯಲು ಆಯೆಷಾ ಈ ರೀತಿ ಮಾಡುತ್ತಿದ್ದಾರೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಸಿಕ್ಕಿದೆ ಕಿಚ್ಚ ಸುದೀಪ್ ಮಾಡಿದ ಅಡುಗೆ

ಮುನಾವರ್ ಅವರು ಬಿಗ್ ಬಾಸ್​ಗೆ ತೆರಳಿ ಜನಪ್ರಿಯತೆ ಹೆಚ್ಚಿಸಿಕೊಂಡಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚಿದೆ.  ಮುನಾವರ್ ಅವರು ಬಿಗ್ ಬಾಸ್ ಗೆಲ್ಲಲಿ ಅನ್ನೋದು ಅನೇಕರ ಕೋರಿಕೆ. ಕಲರ್ಸ್ ಹಾಗೂ ಜಿಯೋ ಸಿನಿಮಾದಲ್ಲಿ ಹಿಂದಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು