AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆ ರಣರಂಗ ಆಗುವಂತಿದೆ ರಜತ್ ಮಾತು; ಹೆಚ್ಚಿದ ಗಲಾಟೆ

ವೈಲ್ಡ್ ಕಾರ್ಡ್​ ಸ್ಪರ್ಧಿಗಳು ಬಂದಾಗ ಬಿಗ್ ಬಾಸ್​ ಮನೆಯಲ್ಲಿ ಸಹಜವಾಗಿಯೇ ಸದ್ದು ಗದ್ದಲ ಜಾಸ್ತಿ ಇರುತ್ತದೆ. ರಜತ್ ಕೂಡ ಭಾರಿ ಸದ್ದು ಮಾಡುತ್ತಿದ್ದಾರೆ. ಅವರ ಮಾತುಗಳು ಖಾರವಾಗಿವೆ. ಇದರಿಂದಾಗಿ ಬಿಗ್ ಬಾಸ್​ ಮನೆಯ ಇನ್ನುಳಿದ ಸ್ಪರ್ಧಿಗಳಿಗೆ ಕೋಪ ಹೆಚ್ಚುತ್ತಿದೆ. ಉಗ್ರಂ ಮಂಜು ಮತ್ತು ರಜತ್ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ಜಾಸ್ತಿ ಆಗಿದೆ.

ಬಿಗ್ ಬಾಸ್ ಮನೆ ರಣರಂಗ ಆಗುವಂತಿದೆ ರಜತ್ ಮಾತು; ಹೆಚ್ಚಿದ ಗಲಾಟೆ
ರಜತ್
ಮದನ್​ ಕುಮಾರ್​
|

Updated on: Nov 28, 2024 | 10:25 PM

Share

ಬಿಗ್ ಬಾಸ್​ ಎಂದರೆ ಗಲಾಟೆಗಳು ಕಾಮನ್. ಆದರೆ ಪ್ರತಿ ಸೀಸನ್​ನಲ್ಲೂ ಜಗಳದ ಪ್ರಮಾಣ ಜಾಸ್ತಿ ಆಗುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಕೂಡ ಸದ್ದು ಗದ್ದಲ ಅಧಿಕ ಆಗಿದೆ. ವೈಲ್ಡ್​ ಕಾರ್ಡ್​ ಮೂಲಕ ರಜತ್ ಅವರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ದೊಡ್ಮನೆಗೆ ಕಾಲಿಡುವುದಕ್ಕೂ ಮುನ್ನವೇ ಅವರು ಕ್ವಾಟ್ಲೆ ಕೊಡುವ ನಿರ್ಧಾರ ಮಾಡಿಕೊಂಡಿದ್ದರು. ಬಂದ ಬಳಿಕ ಮಾತಿನ ಮೂಲಕ ಎಲ್ಲರಿಗೂ ಚಾಟಿ ಬೀಸುತ್ತಿದ್ದಾರೆ. ಆದರೆ ರಜತ್ ಅವರ ಮಾತುಗಳಿಂದ ಕೆಲವರಿಗೆ ನೋವಾಗಿದೆ. ಇದೇ ರೀತಿ ಮುಂದುವರಿದರೆ ಜಗಳ ಜೋರಾಗುವುದು ಗ್ಯಾರಂಟಿ.

ಮಣ್ಣಿನಿಂದ ಆಕೃತಿಗಳನ್ನು ಮಾಡುವ ಟಾಸ್ಕ್​ನಲ್ಲಿ ರಜತ್ ಅವರು ಅಗ್ರೆಷನ್ ತೋರಿಸಿದ್ದಾರೆ. ಆಟದ ನಡುವೆ ಅವರು ಬುರುಡೆ ಒಡೆದು ಹಾಕುವುದಾಗಿ ಬೆದರಿಸಿದ್ದಾರೆ. ಇದನ್ನು ಅನೇಕರು ಖಂಡಿಸಿದ್ದಾರೆ. ‘ಬುರುಡೆ ಹೊಡೆದು ಹಾಕುತ್ತೇನೆ’ ಎಂದು ರಜತ್ ಹೇಳಿದ್ದರು. ‘ಆಟದ ಮಧ್ಯೆದಲ್ಲಿ ಇಂಥ ಮಾತುಗಳನ್ನು ಆಡಿದ್ದು ಸರಿಯಲ್ಲ’ ಎಂದು ಮಂಜು ಟೀಕಿಸಿದ್ದಾರೆ.

ಈ ಮೊದಲು ಚೈತ್ರಾ ಕುಂದಾಪುರ ಜೊತೆ ಜಗಳ ಮಾಡುವಾಗಲೂ ಕೂಡ ರಜತ್ ಅವರು ನಾಲಿಗೆ ಹರಿಬಿಟ್ಟಿದ್ದರು. ಅದಕ್ಕೂ ಮುನ್ನ ಗೋಲ್ಡ್ ಸುರೇಶ್ ಜೊತೆ ಜಗಳ ಮಾಡಿಕೊಂಡಾಗಲೂ ಅವಾಚ್ಯ ಪದಗಳನ್ನು ಬಳಸಿದ್ದರು. ಅವರು ಪ್ರತಿ ಬಾರಿ ಮಾತಿನ ಎಲ್ಲೆ ಮೀರಿದಾಗ ಬಿಗ್ ಬಾಸ್ ಮನೆ ರಣರಂಗ ಆಗಿದೆ. ರಜತ್ ಅವರು ಇನ್ಮೇಲಾದರೂ ತಮ್ಮ ವರ್ತನೆ ಸರಿಪಡಿಸಿಕೊಂಡರೆ ಉತ್ತಮ. ಇಲ್ಲದಿದ್ದರೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದರೂ ಅಚ್ಚರಿ ಇಲ್ಲ.

ಇದನ್ನೂ ಓದಿ: ತಾಯತ ಎಲ್ಲಿ ಕಟ್ಟಿಸಬೇಕೋ ಅಲ್ಲಿ ಕಟ್ಟಿಸುತ್ತೇನೆ: ರಜತ್ ವಿರುದ್ಧ ಶಪತ ಮಾಡಿದ ಚೈತ್ರಾ

ಕ್ಯಾಪ್ಟೆನ್ಸಿ ಟಾಸ್ಕ್​ನಿಂದ ರಜತ್ ಅವರನ್ನು ಉಗ್ರಂ ಮಂಜು ಹೊರಗೆ ಇಟ್ಟಿದ್ದಾರೆ. ಇದರಿಂದಾಗಿ ರಜತ್ ಅವರಿಗೆ ಸಿಕ್ಕಾಪಟ್ಟೆ ಕೋಪ ಬಂದಿದೆ. ಮಂಜುಗೆ ಮಹಾರಾಜನ ಪಟ್ಟ ನೀಡಲಾಗಿದೆ ಎಂಬುದನ್ನೂ ಕೂಡ ಲೆಕ್ಕಿಸದೇ ‘ರೋಗಿಷ್ಟ ರಾಜ’ ಎಂದು ರಜತ್ ಹೇಳಿದ್ದಾರೆ. ಇಂಥ ಹಲವು ಮಾತುಗಳಿಂದ ರಜತ್ ಅವರು ಅನೇಕರ ಕೆಂಗಣ್ಣಿಗೆ ಗುರಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ