AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್​ಗೆ ಕಾಗೆ ಅಂದಿದ್ದ ಈಶಾನಿಗೆ ಕಿಚ್ಚನ ಕ್ಲಾಸ್​? ಎಲಿಮಿನೇಟ್​ ಬಳಿಕವೂ ಕಿರಿಕ್​

ಬಿಗ್​ ಬಾಸ್ ಮನೆಯಲ್ಲಿ ಈ ವಾರ ಒಂದು ಮಹತ್ವದ ಸಂಗತಿ ಜರುಗಿತು. ಈಗಾಗಲೇ ಎಲಿಮಿನೇಟ್​ ಆಗಿರುವ ಮೈಕಲ್​ ಅಜಯ್​, ಸ್ನೇಹಿತ್​ ಗೌಡ, ಈಶಾನಿ, ರಕ್ಷಕ್​ ಮುಂತಾದವರು ಮತ್ತೆ ದೊಡ್ಮನೆಯೊಳಗೆ ಕಾಲಿಟ್ಟಿದ್ದರು. ಈ ವೇಳೆ ಈಶಾನಿ ಆಡಿದ ಮಾತುಗಳಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಡ್ರೋನ್​ ಪ್ರತಾಪ್​ ಅವರನ್ನು ಕಾಗೆ ಎಂದು ಈಶಾನಿ ಹೇಳಿದ್ದಾರೆ.

ಪ್ರತಾಪ್​ಗೆ ಕಾಗೆ ಅಂದಿದ್ದ ಈಶಾನಿಗೆ ಕಿಚ್ಚನ ಕ್ಲಾಸ್​? ಎಲಿಮಿನೇಟ್​ ಬಳಿಕವೂ ಕಿರಿಕ್​
ಡ್ರೋನ್​ ಪ್ರತಾಪ್​, ಈಶಾನಿ, ಸುದೀಪ್​
ಮದನ್​ ಕುಮಾರ್​
|

Updated on: Jan 20, 2024 | 3:58 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಈಗ ಅಂತಿಮ ಘಟ್ಟವನ್ನು ತಲುಪಿದೆ. ಇನ್ನು ಕೆಲವೇ ದಿನಗಳಲ್ಲಿ ಫಿನಾಲೆ ನಡೆಯಲಿದೆ. ಜನವರಿ 27 ಮತ್ತು 28ರಂದು ಅದ್ದೂರಿಯಾಗಿ ಬಿಗ್​ ಬಾಸ್​ ಫಿನಾಲೆ (Bigg Boss Kannada Finale) ಪ್ರಸಾರ ಆಗಲಿದೆ. ಕಿಚ್ಚ ಸುದೀಪ್​ ಅವರು ಇಂದು (ಜನವರಿ 20) ಈ ಸೀಸನ್​ನ ಕೊನೇ ಪಂಚಾಯ್ತಿ ನಡೆಸಲಿದ್ದಾರೆ. ಬಿಗ್​ ಬಾಸ್ ಮನೆಯಲ್ಲಿ ಇರುವವರ ತಪ್ಪು ಮಾಡಿದರೆ ಸುದೀಪ್ (Kichcha Sudeep)​ ಕ್ಲಾಸ್​ ತೆಗೆದುಕೊಳ್ಳುತ್ತಾರೆ. ಅದು ಸಹಜ. ಆದರೆ ಎಲಿಮಿನೇಟ್ ಆಗಿ ಹೋದವರು ತಪ್ಪು ಮಾಡಿದರೆ? ಅಂಥವರ ಬಗ್ಗೆ ಸುದೀಪ್​ ಮಾತನಾಡಿದ್ದು ಕಡಿಮೆ. ಆದರೆ ಈ ವಾರ ಅವರು ಆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಅದಕ್ಕೆ ಕಾರಣ ಆಗಿರುವುದು ಈಶಾನಿ (Eshani) ನೀಡಿದ ಕೆಲವು ಹೇಳಿಕೆಗಳು!

ಬಿಗ್​ ಬಾಸ್ ಮನೆಯಲ್ಲಿ ಈ ವಾರ ಕೆಲವು ಮಹತ್ವದ ಸಂಗತಿಗಳು ಜರುಗಿದವು. ಈಗಾಗಲೇ ಎಲಿಮಿನೇಟ್​ ಆಗಿ ಹೊರಗೆ ಹೊಗಿರುವ ಮೈಕೆಲ್​ ಅಜಯ್​, ಸ್ನೇಹಿತ್​ ಗೌಡ, ಈಶಾನಿ, ರಕ್ಷಕ್​, ಸಿರಿ ಮುಂತಾದವರು ಮತ್ತೆ ದೊಡ್ಮನೆಯೊಳಗೆ ಕಾಲಿಟ್ಟಿದ್ದರು. ಈ ವೇಳೆ ಈಶಾನಿ ಆಡಿದ ಮಾತುಗಳಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಡ್ರೋನ್​ ಪ್ರತಾಪ್​ ಅವರನ್ನು ಕಾಗೆ ಎಂದು ಈಶಾನಿ ಹೇಳಿದ್ದಾರೆ. ಇದರ ಬಗ್ಗೆ ವಾರದ ಪಂಚಾಯ್ತಿಯಲ್ಲಿ ಸುದೀಪ್​ ಪ್ರಸ್ತಾಪ ಮಾಡುತ್ತಾರೆ ಎಂಬುದಕ್ಕೆ ಈಗ ಸುಳಿವು ಸಿಕ್ಕಿದೆ.

ವಿರೋಧದ ಬಳಿಕ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ರಕ್ಷಕ್

‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡ ಪ್ರೋಮೋನಲ್ಲಿ ಸುದೀಪ್​ ಅವರು ಈ ಬಗ್ಗೆ ಮಾತಾಡಿದ್ದಾರೆ. ‘ಈ ವಾರ ಮನೆಗೆ ಹಳೇ ಗೆಳೆಯರು ವಾಪಸ್​ ಬಂದರು. ಅವರು ಹೊಸ ಉತ್ಸಾಹ ತಂದ್ರಾ ಅಥವಾ ಇರುವ ಉತ್ಸಾಹವನ್ನು ಹಾಳುಮಾಡಿ ಹೋದ್ರಾ’ ಎಂದು ಸುದೀಪ್​ ಪ್ರಶ್ನೆ ಮಾಡಿದ್ದಾರೆ. ಈ ಸೀಸನ್​ನ ಕೊನೇ ಪಂಚಾಯ್ತಿಯಲ್ಲಿ ಈ ಎಲ್ಲ ವಿಷಯಗಳು ಪ್ರಸ್ತಾಪ ಆಗಲಿವೆ. ಜನವರಿ 20ರಂದು ಈ ಸಂಚಿಕೆ ‘ಕಲರ್ಸ್​ ಕನ್ನಡ’ ಮತ್ತು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಪ್ರಸಾರ ಆಗಲಿದೆ.

ಈಶಾನಿ ಹೇಳಿದ್ದು ಏನು?

‘ಕಾಗೆ ಕಕ್ಕ ಮಾಡಿ ಎಲ್ಲ ಕಡೆ ಹೋಗುತ್ತಲೇ ಇದೆ. ಸಿಂಪಥಿ ಕಾರ್ಡ್​ ಬಳಕೆ ಮಾಡಿ’ ಎಂದು ಈಶಾನಿ ಹೇಳಿದ್ದರು. ಎಲಿಮಿನೇಟ್​ ಆದ ಬಳಿಕ ಅತಿಥಿಯಾಗಿ ಬಿಗ್​ ಬಾಸ್​ ಮನೆಯೊಳಗೆ ಕಾಲಿಡುವ ಅವಕಾಶ ಈಶಾನಿಗೆ ಸಿಕ್ಕಿತು. ಅತಿಥಿಯಾಗಿ ಬಂದ ಅವರು ಇಷ್ಟೆಲ್ಲ ಖಾರವಾಗಿ ಮಾತನಾಡುವ ಅವಶ್ಯಕತೆ ಇರಲಿಲ್ಲ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ಈಶಾನಿ ಅವರ ಮಾತುಗಳ ಬಗ್ಗೆ ಸುದೀಪ್​ ಕ್ಲಾಸ್​ ತೆಗೆದುಕೊಳ್ಳುತ್ತಾರಾ ಎಂಬುದನ್ನು ತಿಳಿಯಲು ಜ.20ರ ಸಂಚಿಕೆ ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು