AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್​ಗೆ ಕಾಗೆ ಅಂದಿದ್ದ ಈಶಾನಿಗೆ ಕಿಚ್ಚನ ಕ್ಲಾಸ್​? ಎಲಿಮಿನೇಟ್​ ಬಳಿಕವೂ ಕಿರಿಕ್​

ಬಿಗ್​ ಬಾಸ್ ಮನೆಯಲ್ಲಿ ಈ ವಾರ ಒಂದು ಮಹತ್ವದ ಸಂಗತಿ ಜರುಗಿತು. ಈಗಾಗಲೇ ಎಲಿಮಿನೇಟ್​ ಆಗಿರುವ ಮೈಕಲ್​ ಅಜಯ್​, ಸ್ನೇಹಿತ್​ ಗೌಡ, ಈಶಾನಿ, ರಕ್ಷಕ್​ ಮುಂತಾದವರು ಮತ್ತೆ ದೊಡ್ಮನೆಯೊಳಗೆ ಕಾಲಿಟ್ಟಿದ್ದರು. ಈ ವೇಳೆ ಈಶಾನಿ ಆಡಿದ ಮಾತುಗಳಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಡ್ರೋನ್​ ಪ್ರತಾಪ್​ ಅವರನ್ನು ಕಾಗೆ ಎಂದು ಈಶಾನಿ ಹೇಳಿದ್ದಾರೆ.

ಪ್ರತಾಪ್​ಗೆ ಕಾಗೆ ಅಂದಿದ್ದ ಈಶಾನಿಗೆ ಕಿಚ್ಚನ ಕ್ಲಾಸ್​? ಎಲಿಮಿನೇಟ್​ ಬಳಿಕವೂ ಕಿರಿಕ್​
ಡ್ರೋನ್​ ಪ್ರತಾಪ್​, ಈಶಾನಿ, ಸುದೀಪ್​
ಮದನ್​ ಕುಮಾರ್​
|

Updated on: Jan 20, 2024 | 3:58 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಈಗ ಅಂತಿಮ ಘಟ್ಟವನ್ನು ತಲುಪಿದೆ. ಇನ್ನು ಕೆಲವೇ ದಿನಗಳಲ್ಲಿ ಫಿನಾಲೆ ನಡೆಯಲಿದೆ. ಜನವರಿ 27 ಮತ್ತು 28ರಂದು ಅದ್ದೂರಿಯಾಗಿ ಬಿಗ್​ ಬಾಸ್​ ಫಿನಾಲೆ (Bigg Boss Kannada Finale) ಪ್ರಸಾರ ಆಗಲಿದೆ. ಕಿಚ್ಚ ಸುದೀಪ್​ ಅವರು ಇಂದು (ಜನವರಿ 20) ಈ ಸೀಸನ್​ನ ಕೊನೇ ಪಂಚಾಯ್ತಿ ನಡೆಸಲಿದ್ದಾರೆ. ಬಿಗ್​ ಬಾಸ್ ಮನೆಯಲ್ಲಿ ಇರುವವರ ತಪ್ಪು ಮಾಡಿದರೆ ಸುದೀಪ್ (Kichcha Sudeep)​ ಕ್ಲಾಸ್​ ತೆಗೆದುಕೊಳ್ಳುತ್ತಾರೆ. ಅದು ಸಹಜ. ಆದರೆ ಎಲಿಮಿನೇಟ್ ಆಗಿ ಹೋದವರು ತಪ್ಪು ಮಾಡಿದರೆ? ಅಂಥವರ ಬಗ್ಗೆ ಸುದೀಪ್​ ಮಾತನಾಡಿದ್ದು ಕಡಿಮೆ. ಆದರೆ ಈ ವಾರ ಅವರು ಆ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಅದಕ್ಕೆ ಕಾರಣ ಆಗಿರುವುದು ಈಶಾನಿ (Eshani) ನೀಡಿದ ಕೆಲವು ಹೇಳಿಕೆಗಳು!

ಬಿಗ್​ ಬಾಸ್ ಮನೆಯಲ್ಲಿ ಈ ವಾರ ಕೆಲವು ಮಹತ್ವದ ಸಂಗತಿಗಳು ಜರುಗಿದವು. ಈಗಾಗಲೇ ಎಲಿಮಿನೇಟ್​ ಆಗಿ ಹೊರಗೆ ಹೊಗಿರುವ ಮೈಕೆಲ್​ ಅಜಯ್​, ಸ್ನೇಹಿತ್​ ಗೌಡ, ಈಶಾನಿ, ರಕ್ಷಕ್​, ಸಿರಿ ಮುಂತಾದವರು ಮತ್ತೆ ದೊಡ್ಮನೆಯೊಳಗೆ ಕಾಲಿಟ್ಟಿದ್ದರು. ಈ ವೇಳೆ ಈಶಾನಿ ಆಡಿದ ಮಾತುಗಳಿಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಡ್ರೋನ್​ ಪ್ರತಾಪ್​ ಅವರನ್ನು ಕಾಗೆ ಎಂದು ಈಶಾನಿ ಹೇಳಿದ್ದಾರೆ. ಇದರ ಬಗ್ಗೆ ವಾರದ ಪಂಚಾಯ್ತಿಯಲ್ಲಿ ಸುದೀಪ್​ ಪ್ರಸ್ತಾಪ ಮಾಡುತ್ತಾರೆ ಎಂಬುದಕ್ಕೆ ಈಗ ಸುಳಿವು ಸಿಕ್ಕಿದೆ.

ವಿರೋಧದ ಬಳಿಕ ಸುದೀಪ್ ಹಾಗೂ ಅವರ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ರಕ್ಷಕ್

‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡ ಪ್ರೋಮೋನಲ್ಲಿ ಸುದೀಪ್​ ಅವರು ಈ ಬಗ್ಗೆ ಮಾತಾಡಿದ್ದಾರೆ. ‘ಈ ವಾರ ಮನೆಗೆ ಹಳೇ ಗೆಳೆಯರು ವಾಪಸ್​ ಬಂದರು. ಅವರು ಹೊಸ ಉತ್ಸಾಹ ತಂದ್ರಾ ಅಥವಾ ಇರುವ ಉತ್ಸಾಹವನ್ನು ಹಾಳುಮಾಡಿ ಹೋದ್ರಾ’ ಎಂದು ಸುದೀಪ್​ ಪ್ರಶ್ನೆ ಮಾಡಿದ್ದಾರೆ. ಈ ಸೀಸನ್​ನ ಕೊನೇ ಪಂಚಾಯ್ತಿಯಲ್ಲಿ ಈ ಎಲ್ಲ ವಿಷಯಗಳು ಪ್ರಸ್ತಾಪ ಆಗಲಿವೆ. ಜನವರಿ 20ರಂದು ಈ ಸಂಚಿಕೆ ‘ಕಲರ್ಸ್​ ಕನ್ನಡ’ ಮತ್ತು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಪ್ರಸಾರ ಆಗಲಿದೆ.

ಈಶಾನಿ ಹೇಳಿದ್ದು ಏನು?

‘ಕಾಗೆ ಕಕ್ಕ ಮಾಡಿ ಎಲ್ಲ ಕಡೆ ಹೋಗುತ್ತಲೇ ಇದೆ. ಸಿಂಪಥಿ ಕಾರ್ಡ್​ ಬಳಕೆ ಮಾಡಿ’ ಎಂದು ಈಶಾನಿ ಹೇಳಿದ್ದರು. ಎಲಿಮಿನೇಟ್​ ಆದ ಬಳಿಕ ಅತಿಥಿಯಾಗಿ ಬಿಗ್​ ಬಾಸ್​ ಮನೆಯೊಳಗೆ ಕಾಲಿಡುವ ಅವಕಾಶ ಈಶಾನಿಗೆ ಸಿಕ್ಕಿತು. ಅತಿಥಿಯಾಗಿ ಬಂದ ಅವರು ಇಷ್ಟೆಲ್ಲ ಖಾರವಾಗಿ ಮಾತನಾಡುವ ಅವಶ್ಯಕತೆ ಇರಲಿಲ್ಲ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ಈಶಾನಿ ಅವರ ಮಾತುಗಳ ಬಗ್ಗೆ ಸುದೀಪ್​ ಕ್ಲಾಸ್​ ತೆಗೆದುಕೊಳ್ಳುತ್ತಾರಾ ಎಂಬುದನ್ನು ತಿಳಿಯಲು ಜ.20ರ ಸಂಚಿಕೆ ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ