Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ಸೋತ ಸ್ಮೃತಿ ಇರಾನಿ ಮತ್ತೆ ಧಾರಾವಾಹಿಯಲ್ಲಿ ನಟಿಸುತ್ತಾರಾ? ಸಿಕ್ತು ಸ್ಪಷ್ಟನೆ

ಕಿರುತೆರೆಯಿಂದ ಜನಪ್ರಿಯತೆ ಪಡೆದ ಸ್ಮೃತಿ ಇರಾನಿ ಅವರು ಹಲವು ವರ್ಷಗಳ ಗ್ಯಾಪ್ ಬಳಿಕ ಮತ್ತೆ ಸೀರಿಯಲ್​ನಲ್ಲಿ ನಟಿಸುತ್ತಾರೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ‘ಅನುಪಮಾ’ ಧಾರಾವಾಹಿಯಲ್ಲಿ ಸ್ಮೃತಿ ಇರಾನಿ ಅವರು ಒಂದು ಅತಿಥಿ ಪಾತ್ರ ನಿಭಾಯಿಸುತ್ತಾರೆ ಎಂಬ ಗಾಸಿಪ್ ಹಬ್ಬಿದೆ. ಅದಕ್ಕೆ ಸ್ವತಃ ಸ್ಮೃತಿ ಇರಾನಿ ಅವರು ಪ್ರತಿಕ್ರಿಯಿಸಿದ್ದಾರೆ.

ಚುನಾವಣೆಯಲ್ಲಿ ಸೋತ ಸ್ಮೃತಿ ಇರಾನಿ ಮತ್ತೆ ಧಾರಾವಾಹಿಯಲ್ಲಿ ನಟಿಸುತ್ತಾರಾ? ಸಿಕ್ತು ಸ್ಪಷ್ಟನೆ
ಸ್ಮೃತಿ ಇರಾನಿ
Follow us
ಮದನ್​ ಕುಮಾರ್​
|

Updated on: Oct 17, 2024 | 9:03 PM

ಹಿಂದಿ ಸೀರಿಯಲ್ ಲೋಕದಲ್ಲಿ ಸ್ಮೃತಿ ಇರಾನಿ ಅವರು ದೊಡ್ಡ ಹೆಸರು ಮಾಡಿದ್ದಾರೆ. ರಾಜಕೀಯಕ್ಕೆ ಬರುವುದಕ್ಕೂ ಮುನ್ನ ಅವರು ನಟಿಯಾಗಿ ಭಾರಿ ಜನಪ್ರಿಯತೆ ಪಡೆದಿದ್ದರು. ಪೂರ್ಣಾವಧಿ ರಾಜಕೀಯದಲ್ಲಿ ತೊಡಗಿಕೊಂಡ ಬಳಿಕ ಅವರು ಸೀರಿಯಲ್​ನಲ್ಲಿ ನಟಿಸುವುದು ನಿಲ್ಲಿಸಿದರು. ಈ ವರ್ಷ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಹಾಗಾಗಿ ಮತ್ತೆ ಅವರು ಧಾರಾವಾಹಿಗಳಲ್ಲಿ ನಟಿಸುತ್ತಾರೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಹಾಗಾದರೆ ಇದು ನಿಜವೇ? ಈ ಬಗ್ಗೆ ಸ್ವತಃ ಸ್ಮೃತಿ ಇರಾನಿ ಅವರಿಂದಲೇ ಸ್ಪಷ್ಟನೆ ಸಿಕ್ಕಿದೆ.

‘ಕ್ಯೂಂಕಿ ಸಾಸ್​ ಭಿ ಕಭಿ ಬಹು ಥಿ’ ಸೀರಿಯಲ್​ 2000ನೇ ಇಸವಿಯಿಂದ 2008ರ ತನಕ ಪ್ರಸಾರ ಆಗಿತ್ತು. ಅದರಲ್ಲಿ ಸ್ಮೃತಿ ಇರಾನಿ ಅವರು ಪ್ರಮುಖ ಪಾತ್ರ ಮಾಡಿದ್ದರು. ಅವರ ಅಭಿನಯಕ್ಕೆ ವೀಕ್ಷಕರು ಮನಸೋತಿದ್ದರು. ಆ ಸಮಯಲ್ಲಿ ‘ಕ್ಯೂಂಕಿ ಸಾಸ್​ ಭಿ ಕಭಿ ಬಹು ಥಿ’ ಧಾರಾವಾಹಿ ತುಂಬ ಜನಪ್ರಿಯತೆ ಹೊಂದಿತ್ತು. ಆ ಜನಪ್ರಿಯತೆಯಿಂದ ಸ್ಮೃತಿ ಇರಾನಿ ಅವರು 2003ರಲ್ಲಿ ರಾಜಕೀಯದತ್ತ ಗಮನ ಹರಿಸಿದರು.

ರಾಜಕೀಯದಲ್ಲಿ ಸ್ಮೃತಿ ಇರಾನಿ ಅವರು ಏಳು-ಬೀಳುಗಳನ್ನು ಕಂಡಿದ್ದಾರೆ. ಕೇಂದ್ರ ಸಚಿವೆ ಆಗಿದ್ದ ಅವರು ಈ ವರ್ಷ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಹಾಗಾಗಿ ಮತ್ತೆ ಅವರು ಸೀರಿಯಲ್ ಕಡೆಗೆ ಮುಖ ಮಾಡುತ್ತಾರೆ ಎಂಬುದು ಕೆಲವರ ಊಹೆ ಆಗಿತ್ತು. ಆದರೆ ಆ ಊಹೆ ನಿಜವಾಗಿಲ್ಲ. ತಾವು ಯಾವುದೇ ಸೀರಿಯಲ್​ನಲ್ಲಿ ನಟಿಸುವುದಿಲ್ಲ ಎಂದು ಸ್ಮೃತಿ ಇರಾನಿ ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ‘ಸೋತರೂ ನಿಮ್ಮ ಜೊತೆ ಇರುತ್ತೇವೆ’: ಸ್ಮೃತಿ ಇರಾನಿಗೆ ಬಾಲಿವುಡ್ ಮಂದಿ ಬೆಂಬಲ

ಹಿಂದಿಯ ‘ಅನುಪಮಾ’ ಧಾರಾವಾಹಿಯಲ್ಲಿ ಸ್ಮೃತಿ ಇರಾನಿ ಅವರು ಅತಿಥಿ ಪಾತ್ರದಲ್ಲಿ ನಟಿಸುತ್ತಾರೆ ಎಂದು ‘ಟೆಲಿ ಚಕ್ಕರ್’ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಲಾಗಿತ್ತು. ಅದು ಸ್ವತಃ ಸ್ಮೃತಿ ಇರಾನಿ ಅವರ ಗಮನಕ್ಕೂ ಬಂದಿದೆ. ಆ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ ಅವರು ‘ಸುಳ್ಳು ಸುದ್ದಿ’ ಎಂದು ಕಮೆಂಟ್​ ಮಾಡಿದ್ದಾರೆ. ಆ ಮೂಲಕ ಎಲ್ಲ ಅಂತೆ-ಕಂತೆಗಳಿಗೆ ಅವರು ಪೂರ್ಣವಿರಾಮ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ