AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸಂಗೀತಾ ಶೃಂಗೇರಿ-ತುಕಾಲಿ ಸಂತೋಷ್​ ಭೇಟಿ ಆಗೋದೇ ಇಲ್ವಾ?

ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನವೂ ತುಕಾಲಿ ಸಂತೋಷ್​ ಅವರು ವರ್ತೂರು ಸಂತೋಷ್​ ಜೊತೆ ಆಪ್ತವಾಗಿದ್ದರು. ಆದರೆ ಸಂಗೀತಾ ಶೃಂಗೇರಿ ಮತ್ತು ತುಕಾಲಿ ಸಂತೋಷ್​ ಅವರ ನಡುವೆ ಹಲವು ಬಾರಿ ಮಾತಿನ ಚಕಮಕಿ ನಡೆದಿತ್ತು. ತುಕಾಲಿ ಸಂತೋಷ್​ ಅವರನ್ನು ಮತ್ತೆ ಭೇಟಿ ಮಾಡುವುದಿಲ್ಲ ಎಂದು ಸಂಗೀತಾ ಹೇಳಿದ್ದರು.

ಮತ್ತೆ ಸಂಗೀತಾ ಶೃಂಗೇರಿ-ತುಕಾಲಿ ಸಂತೋಷ್​ ಭೇಟಿ ಆಗೋದೇ ಇಲ್ವಾ?
ಸಂಗೀತಾ ಶೃಂಗೇರಿ, ತುಕಾಲಿ ಸಂತೋಷ್​
ಮದನ್​ ಕುಮಾರ್​
| Edited By: |

Updated on:Jan 30, 2024 | 6:29 AM

Share

ಬಿಗ್​ ಬಾಸ್​ ಮನೆಯಲ್ಲಿ ಜಗಳಗಳು ಸಹಜ. ತುಕಾಲಿ ಸಂತೋಷ್​ ಮತ್ತು ಸಂಗೀತಾ ಶೃಂಗೇರಿ (Sangeetha Sringeri) ನಡುವೆಯೂ ಹಲವು ಬಾರಿ ಜಗಳ ಆಗಿದೆ. ಅಲ್ಲದೇ, ತುಕಾಲಿ ಸಂತೋಷ್​ ಅವರನ್ನು ಬಿಗ್​ ಬಾಸ್ ​(Bigg Boss Kannada) ಮನೆಯ ಹೊರಗೆ ಭೇಟಿ ಆಗುವುದೇ ಇಲ್ಲ ಎಂದು ಸಂಗೀತಾ ಹೇಳಿದ್ದರು. ಆದರೆ ನಂತರದ ದಿನಗಳಲ್ಲಿ ಅವರಿಬ್ಬರ ನಡುವಿನ ಮನಸ್ತಾಪ ಅಂತ್ಯ ಆಯಿತು. ಈಗ ಬಿಗ್​ ಬಾಸ್​ ಮುಕ್ತಾಯ ಆಗಿದೆ. ಎಲ್ಲ ಕ್ಷಣಗಳನ್ನು ಸ್ಪರ್ಧಿಗಳ ಮೆಲುಕು ಹಾಕುತ್ತಿದ್ದಾರೆ. ಸಂಗೀತಾ ಶೃಂಗೇರಿ ಮತ್ತು ತುಕಾಲಿ ಸಂತೋಷ್​ (Tukali Santhosh) ಅವರು ಮತ್ತೊಮ್ಮೆ ಭೇಟಿ ಆಗುತ್ತಾರೋ ಅಥವಾ ಇಲ್ಲವೋ ಎಂಬ ಪ್ರಶ್ನೆ ವೀಕ್ಷಕರ ಮನದಲ್ಲಿದೆ. ಅದಕ್ಕೆ ತುಕಾಲಿ ಸಂತೋಷ್​ ಉತ್ತರ ನೀಡಿದ್ದಾರೆ.

‘ಖಂಡಿತಾ ನಾವು ಮೀಟ್​ ಮಾಡುತ್ತೇವೆ. ಅದು ಆಟ ಮಾತ್ರ. ಆದರೆ ಇದು ಜೀವನ ಪಾಠ. ಆಟದಲ್ಲಿ ಇಲ್ಲದೇ ಇರುವುದು ಜೀವನ ಪಾಠದಲ್ಲಿ ಇರುತ್ತದೆ. ಸಂಗೀತಾ ಅವರು ತುಂಬ ಸ್ಟ್ರಾಂಗ್​ ಲೇಡಿ. ಅವರು ಗೆದ್ದಿದ್ದರೂ ನನಗೆ ಖುಷಿ ಆಗುತ್ತಿತ್ತು. ಟ್ರೋಫಿಗೆ ಅವರು ಅರ್ಹರು. ಅವರಿಗೆ ಒಳ್ಳೆಯದಾಗಲಿ. ಬದುಕಿನಲ್ಲಿ ತುಂಬ ಕಷ್ಟಪಟ್ಟಿದ್ದಾರೆ. ಅತ್ತಿದ್ದಾರೆ, ನಕ್ಕಿದ್ದಾರೆ. ನಿನ್ನ ಕಾಮಿಡಿಗೆ ನಗು ಬರಲ್ಲ ಅನ್ನುತ್ತಿದ್ದರು. ಆದರೆ ನಂತರ ನಕ್ಕಿದ್ದಾರೆ. ಅವರು ಖುಷಿಯಾಗಿರಲಿ’ ಎಂದು ತುಕಾಲಿ ಸಂತೋಷ್​ ಹೇಳಿದ್ದಾರೆ.

ಇದನ್ನೂ ಓದಿ: ‘ಯಾರು ಗೆಲ್ಲಬೇಕು ಅನ್ನೋದು ಫಿಕ್ಸ್​ ಆಗಿತ್ತು’: ಬಿಗ್ ಬಾಸ್​ ಮೇಲೆ ದೊಡ್ಡ ಆರೋಪ

ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನವೂ ತುಕಾಲಿ ಸಂತೋಷ್​ ಅವರು ವರ್ತೂರು ಸಂತೋಷ್​ ಜೊತೆ ಆಪ್ತವಾಗಿದ್ದರು. ಸಂಗೀತಾ ಶೃಂಗೇರಿ, ಕಾರ್ತಿಕ್​ ಮಹೇಶ್​, ವರ್ತೂರು ಸಂತೋಷ್​, ತುಕಾಲಿ ಸಂತೋಷ್​, ಡ್ರೋನ್​ ಪ್ರತಾಪ್​, ವಿನಯ್​ ಗೌಡ ಅವರ ಫಿನಾಲೆಗೆ ಬಂದಿದ್ದರು. ಅಂತಿಮವಾಗಿ ಅತಿ ಹೆಚ್ಚು ವೋಟ್​ ಪಡೆದ ಕಾರ್ತಿಕ್​ ಮಹೇಶ್​ ಅವರು ವಿನ್ನರ್​ ಪಟ್ಟ ಪಡೆದರು. ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಜನವರಿ 28ರಂದು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಮುಕ್ತಾಯ ಆಯಿತು. ಡ್ರೋನ್​ ಪ್ರತಾಪ್​ ಮೊದಲ ರನ್ನರ್​ ಅಪ್​ ಆದರು. ಎರಡನೇ ರನ್ನರ್​ಅಪ್​ ಸ್ಥಾನಕ್ಕೆ ಸಂಗೀತಾ ಶೃಂಗೇರಿ ತೃಪ್ತಿಪಟ್ಟುಕೊಂಡರು. ಮೂರನೇ ರನ್ನರ್​ಅಪ್​ ಸ್ಥಾನ ವಿನಯ್​ ಗೌಡ ಅವರಿಗೆ ಸಿಕ್ಕಿತು. ವರ್ತೂರು ಸಂತೋಷ್​ ನಾಲ್ಕನೇ ರನ್ನರ್​ಅಪ್​, ತುಕಾಲಿ ಸಂತೋಷ್​ 5ನೇ ರನ್ನರ್​ಅಪ್​ ಆಗಿ ಹೊರಹೊಮ್ಮಿದರು. ಈ ಕಾರ್ಯಕ್ರಮದಿಂದ ಎಲ್ಲರಿಗೂ ಜನಪ್ರಿಯತೆ ಸಿಕ್ಕಿದೆ. ಎಲ್ಲರ ಫ್ಯಾನ್​ ಫಾಲೋಯಿಂಗ್​ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:50 pm, Mon, 29 January 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?