AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಿಗ್​ಬಾಸ್ ಮನೆಗೆ ಹೋಗ್ತಾರಾ ವರ್ತೂರು ಸಂತೋಷ್: ವಕೀಲರು ಹೇಳಿದ್ದೇನು?

Varthur Santhosh: ಬಿಗ್​ಬಾಸ್ ಮನೆಯಲ್ಲಿರುವಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ವರ್ತೂರು ಸಂತೋಷ್ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದು ಮತ್ತೆ ಬಿಗ್​ಬಾಸ್​ಗೆ ಹೋಗುತ್ತಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಆ ಬಗ್ಗೆ ಅವರು ವಕೀಲರು ಮಾತನಾಡಿದ್ದಾರೆ.

ಮತ್ತೆ ಬಿಗ್​ಬಾಸ್ ಮನೆಗೆ ಹೋಗ್ತಾರಾ ವರ್ತೂರು ಸಂತೋಷ್: ವಕೀಲರು ಹೇಳಿದ್ದೇನು?
ಮಂಜುನಾಥ ಸಿ.
|

Updated on: Oct 27, 2023 | 8:23 PM

Share

ಬಿಗ್​ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ (Varthur Santhosh), ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿ ಇದೀಗ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಜೈಲಿನಿಂದ ಹೊರಬಂದ ಸಂತೋಷ್​ರನ್ನು ಅವರ ಗೆಳೆಯರು, ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬಿಗ್​ಬಾಸ್ ಮನೆಯಿಂದಲೇ ಬಂಧನಕ್ಕೆ ಒಳಗಾಗಿದ್ದ ಸಂತೋಷ್ ಈಗ ಮತ್ತೆ ಬಿಗ್​ಬಾಸ್ ಮನೆಗೆ ಹೋಗುತ್ತಾರಾ ಎಂಬ ಪ್ರಶ್ನೆ ಎಲ್ಲರನ್ನೂ ಮೂಡಿದೆ.

ಪ್ರಸ್ತುತ ಜಾಮೀನಿನ ಮೇಲೆ ಹೊರಬಂದಿರುವ ವರ್ತೂರು ಸಂತೋಷ್​ಗೆ ನ್ಯಾಯಾಲಯ ಷರತ್ತುಗಳನ್ನು ವಿಧಿಸಿರುತ್ತದೆ ಹೀಗಿರುವಾಗ ಅವರು ಬಿಗ್​ಬಾಸ್​ ಮನೆಗೆ ಮತ್ತೆ ಹೋಗಬಲ್ಲರೆ? ಎಂಬ ಅನುಮಾನ ಮೂಡಿತ್ತು, ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ವರ್ತೂರು ಸಂತೋಷ್ ಪರ ವಕೀಲರು, ‘ಸಂತೋಷ್ ಬಯಸಿದಲ್ಲಿ ಅವರು ಮತ್ತೆ ಬಿಗ್​ಬಾಸ್ ಮನೆಗೆ ಹೋಗಬಹುದು ಅದಕ್ಕೆ ಯಾವುದೇ ಕಾನೂನು ತೊಡಕಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ವರ್ತೂರು ಸಂತೋಷ್ ಮೇಲೆ ಮಾಡಲಾಗಿರುವ ಆರೋಪ ಸಮನ್ಸ್ ನೀಡಿ ವಿಚಾರಣೆ ಮಾಡಬೇಕಾಗಿದ್ದ ಆರೋಪ ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಅರ್ಥಹೀನ ಸೆಕ್ಷನ್​ಗಳನ್ನು ಹೇರಿದ್ದಾರೆ. ಆದರೆ ನ್ಯಾಯಾಲಯವು ಯಾವುದೇ ಹೆಚ್ಚುವರಿ ಷರತ್ತುಗಳನ್ನು ವಿಧಿಸದೆ ಜಾಮೀನು ನೀಡಿದೆ. ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಂಪರ್ಕ ಬಯಸಿದಾಗ ಅವರಿಗೆ ಸಂಪರ್ಕಕ್ಕೆ ದೊರಕಬೇಕು ಎಂದಷ್ಟೆ ನ್ಯಾಯಾಲಯ ಹೇಳಿದೆ. ಹಾಗಾಗಿ ಅವರು ಬಿಗ್​ಬಾಸ್ ಮನೆಗೆ ಹೋಗಬಹುದು” ಎಂದಿದ್ದಾರೆ.

ಇದನ್ನೂ ಓದಿ:ಜೈಲಿಂದ ಹೊರಬಂದ ವರ್ತೂರು ಸಂತೋಷ್​ಗೆ ಸಿಕ್ಕ ಅದ್ಧೂರಿ ಸ್ವಾಗತ ಹೀಗಿತ್ತು ನೋಡಿ

”ವರ್ತೂರು ಸಂತೋಷ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿರುವ ಅರಣ್ಯಾ ಇಲಾಖೆ ವಿರುದ್ಧ ನಾವು ಕಾನೂನು ಹೋರಾಟ ಮಾಡಲಿದ್ದೇವೆ. ಹುಲಿ ಕೊಂದು ಉಗುರು ತಂದಿದ್ದಾರೆಂಬಂತೆ ಅವರು ಆರೋಪಗಳನ್ನು ಮಾಡಿ, ಸೆಕ್ಷನ್​ಗಳನ್ನು ಹೇರಿದ್ದಾರೆ. ವರ್ತೂರು ಸಂತೋಷ್ ಧರಿಸಿದ್ದ ಹುಲಿ ಉಗುರನ್ನು ಫೊರ್ಯಾನ್ಸಿಕ್ ಪರೀಕ್ಷೆಗೆ ಕಳಿಸಲಾಗಿದೆ. ಅದರ ವರದಿ ಬಂದ ಬಳಿಕವಷ್ಟೆ ಸಂತೋಷ್ ವಿರುದ್ಧ ಮುಂದಿನ ಕ್ರಮ ಜರುಗಿಸಬಹುದಾಗಿದೆ” ಎಂದಿದ್ದಾರೆ ವಕೀಲರು.

ಬಿಗ್​ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನು ಧರಿಸಿದ್ದರು, ಇದನ್ನು ಆಧರಿಸಿ ಸುಮೋಟೊ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದರು. ಸೋಮವಾರದಂದು ಬಿಗ್​ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅವರಿಗೆ ಇಂದು (ಅಕ್ಟೊಬರ್ 27) ಜಾಮೀನು ದೊರೆತಿದೆ. ಜೈಲಿನಿಂದ ಹೊರಬಂದ ವರ್ತೂರು ಸಂತೋಷ್ ಅವರಿಗೆ ಅದ್ಧೂರಿ ಸ್ವಾಗತ ಸಹ ದೊರಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ