AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಿಗ್​ಬಾಸ್ ಮನೆಗೆ ಹೋಗ್ತಾರಾ ವರ್ತೂರು ಸಂತೋಷ್: ವಕೀಲರು ಹೇಳಿದ್ದೇನು?

Varthur Santhosh: ಬಿಗ್​ಬಾಸ್ ಮನೆಯಲ್ಲಿರುವಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ವರ್ತೂರು ಸಂತೋಷ್ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದು ಮತ್ತೆ ಬಿಗ್​ಬಾಸ್​ಗೆ ಹೋಗುತ್ತಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಆ ಬಗ್ಗೆ ಅವರು ವಕೀಲರು ಮಾತನಾಡಿದ್ದಾರೆ.

ಮತ್ತೆ ಬಿಗ್​ಬಾಸ್ ಮನೆಗೆ ಹೋಗ್ತಾರಾ ವರ್ತೂರು ಸಂತೋಷ್: ವಕೀಲರು ಹೇಳಿದ್ದೇನು?
Follow us
ಮಂಜುನಾಥ ಸಿ.
|

Updated on: Oct 27, 2023 | 8:23 PM

ಬಿಗ್​ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ (Varthur Santhosh), ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿ ಇದೀಗ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಜೈಲಿನಿಂದ ಹೊರಬಂದ ಸಂತೋಷ್​ರನ್ನು ಅವರ ಗೆಳೆಯರು, ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬಿಗ್​ಬಾಸ್ ಮನೆಯಿಂದಲೇ ಬಂಧನಕ್ಕೆ ಒಳಗಾಗಿದ್ದ ಸಂತೋಷ್ ಈಗ ಮತ್ತೆ ಬಿಗ್​ಬಾಸ್ ಮನೆಗೆ ಹೋಗುತ್ತಾರಾ ಎಂಬ ಪ್ರಶ್ನೆ ಎಲ್ಲರನ್ನೂ ಮೂಡಿದೆ.

ಪ್ರಸ್ತುತ ಜಾಮೀನಿನ ಮೇಲೆ ಹೊರಬಂದಿರುವ ವರ್ತೂರು ಸಂತೋಷ್​ಗೆ ನ್ಯಾಯಾಲಯ ಷರತ್ತುಗಳನ್ನು ವಿಧಿಸಿರುತ್ತದೆ ಹೀಗಿರುವಾಗ ಅವರು ಬಿಗ್​ಬಾಸ್​ ಮನೆಗೆ ಮತ್ತೆ ಹೋಗಬಲ್ಲರೆ? ಎಂಬ ಅನುಮಾನ ಮೂಡಿತ್ತು, ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ವರ್ತೂರು ಸಂತೋಷ್ ಪರ ವಕೀಲರು, ‘ಸಂತೋಷ್ ಬಯಸಿದಲ್ಲಿ ಅವರು ಮತ್ತೆ ಬಿಗ್​ಬಾಸ್ ಮನೆಗೆ ಹೋಗಬಹುದು ಅದಕ್ಕೆ ಯಾವುದೇ ಕಾನೂನು ತೊಡಕಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ವರ್ತೂರು ಸಂತೋಷ್ ಮೇಲೆ ಮಾಡಲಾಗಿರುವ ಆರೋಪ ಸಮನ್ಸ್ ನೀಡಿ ವಿಚಾರಣೆ ಮಾಡಬೇಕಾಗಿದ್ದ ಆರೋಪ ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಅರ್ಥಹೀನ ಸೆಕ್ಷನ್​ಗಳನ್ನು ಹೇರಿದ್ದಾರೆ. ಆದರೆ ನ್ಯಾಯಾಲಯವು ಯಾವುದೇ ಹೆಚ್ಚುವರಿ ಷರತ್ತುಗಳನ್ನು ವಿಧಿಸದೆ ಜಾಮೀನು ನೀಡಿದೆ. ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಂಪರ್ಕ ಬಯಸಿದಾಗ ಅವರಿಗೆ ಸಂಪರ್ಕಕ್ಕೆ ದೊರಕಬೇಕು ಎಂದಷ್ಟೆ ನ್ಯಾಯಾಲಯ ಹೇಳಿದೆ. ಹಾಗಾಗಿ ಅವರು ಬಿಗ್​ಬಾಸ್ ಮನೆಗೆ ಹೋಗಬಹುದು” ಎಂದಿದ್ದಾರೆ.

ಇದನ್ನೂ ಓದಿ:ಜೈಲಿಂದ ಹೊರಬಂದ ವರ್ತೂರು ಸಂತೋಷ್​ಗೆ ಸಿಕ್ಕ ಅದ್ಧೂರಿ ಸ್ವಾಗತ ಹೀಗಿತ್ತು ನೋಡಿ

”ವರ್ತೂರು ಸಂತೋಷ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿರುವ ಅರಣ್ಯಾ ಇಲಾಖೆ ವಿರುದ್ಧ ನಾವು ಕಾನೂನು ಹೋರಾಟ ಮಾಡಲಿದ್ದೇವೆ. ಹುಲಿ ಕೊಂದು ಉಗುರು ತಂದಿದ್ದಾರೆಂಬಂತೆ ಅವರು ಆರೋಪಗಳನ್ನು ಮಾಡಿ, ಸೆಕ್ಷನ್​ಗಳನ್ನು ಹೇರಿದ್ದಾರೆ. ವರ್ತೂರು ಸಂತೋಷ್ ಧರಿಸಿದ್ದ ಹುಲಿ ಉಗುರನ್ನು ಫೊರ್ಯಾನ್ಸಿಕ್ ಪರೀಕ್ಷೆಗೆ ಕಳಿಸಲಾಗಿದೆ. ಅದರ ವರದಿ ಬಂದ ಬಳಿಕವಷ್ಟೆ ಸಂತೋಷ್ ವಿರುದ್ಧ ಮುಂದಿನ ಕ್ರಮ ಜರುಗಿಸಬಹುದಾಗಿದೆ” ಎಂದಿದ್ದಾರೆ ವಕೀಲರು.

ಬಿಗ್​ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನು ಧರಿಸಿದ್ದರು, ಇದನ್ನು ಆಧರಿಸಿ ಸುಮೋಟೊ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದರು. ಸೋಮವಾರದಂದು ಬಿಗ್​ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅವರಿಗೆ ಇಂದು (ಅಕ್ಟೊಬರ್ 27) ಜಾಮೀನು ದೊರೆತಿದೆ. ಜೈಲಿನಿಂದ ಹೊರಬಂದ ವರ್ತೂರು ಸಂತೋಷ್ ಅವರಿಗೆ ಅದ್ಧೂರಿ ಸ್ವಾಗತ ಸಹ ದೊರಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು