ಮತ್ತೆ ಬಿಗ್​ಬಾಸ್ ಮನೆಗೆ ಹೋಗ್ತಾರಾ ವರ್ತೂರು ಸಂತೋಷ್: ವಕೀಲರು ಹೇಳಿದ್ದೇನು?

Varthur Santhosh: ಬಿಗ್​ಬಾಸ್ ಮನೆಯಲ್ಲಿರುವಾಗಲೇ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ ವರ್ತೂರು ಸಂತೋಷ್ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದು ಮತ್ತೆ ಬಿಗ್​ಬಾಸ್​ಗೆ ಹೋಗುತ್ತಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಆ ಬಗ್ಗೆ ಅವರು ವಕೀಲರು ಮಾತನಾಡಿದ್ದಾರೆ.

ಮತ್ತೆ ಬಿಗ್​ಬಾಸ್ ಮನೆಗೆ ಹೋಗ್ತಾರಾ ವರ್ತೂರು ಸಂತೋಷ್: ವಕೀಲರು ಹೇಳಿದ್ದೇನು?
Follow us
|

Updated on: Oct 27, 2023 | 8:23 PM

ಬಿಗ್​ಬಾಸ್ ಮನೆಯಲ್ಲಿದ್ದ ವರ್ತೂರು ಸಂತೋಷ್ (Varthur Santhosh), ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿ ಇದೀಗ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ಜೈಲಿನಿಂದ ಹೊರಬಂದ ಸಂತೋಷ್​ರನ್ನು ಅವರ ಗೆಳೆಯರು, ಅಭಿಮಾನಿಗಳು ಭಾರಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬಿಗ್​ಬಾಸ್ ಮನೆಯಿಂದಲೇ ಬಂಧನಕ್ಕೆ ಒಳಗಾಗಿದ್ದ ಸಂತೋಷ್ ಈಗ ಮತ್ತೆ ಬಿಗ್​ಬಾಸ್ ಮನೆಗೆ ಹೋಗುತ್ತಾರಾ ಎಂಬ ಪ್ರಶ್ನೆ ಎಲ್ಲರನ್ನೂ ಮೂಡಿದೆ.

ಪ್ರಸ್ತುತ ಜಾಮೀನಿನ ಮೇಲೆ ಹೊರಬಂದಿರುವ ವರ್ತೂರು ಸಂತೋಷ್​ಗೆ ನ್ಯಾಯಾಲಯ ಷರತ್ತುಗಳನ್ನು ವಿಧಿಸಿರುತ್ತದೆ ಹೀಗಿರುವಾಗ ಅವರು ಬಿಗ್​ಬಾಸ್​ ಮನೆಗೆ ಮತ್ತೆ ಹೋಗಬಲ್ಲರೆ? ಎಂಬ ಅನುಮಾನ ಮೂಡಿತ್ತು, ಈ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ವರ್ತೂರು ಸಂತೋಷ್ ಪರ ವಕೀಲರು, ‘ಸಂತೋಷ್ ಬಯಸಿದಲ್ಲಿ ಅವರು ಮತ್ತೆ ಬಿಗ್​ಬಾಸ್ ಮನೆಗೆ ಹೋಗಬಹುದು ಅದಕ್ಕೆ ಯಾವುದೇ ಕಾನೂನು ತೊಡಕಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ವರ್ತೂರು ಸಂತೋಷ್ ಮೇಲೆ ಮಾಡಲಾಗಿರುವ ಆರೋಪ ಸಮನ್ಸ್ ನೀಡಿ ವಿಚಾರಣೆ ಮಾಡಬೇಕಾಗಿದ್ದ ಆರೋಪ ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಅರ್ಥಹೀನ ಸೆಕ್ಷನ್​ಗಳನ್ನು ಹೇರಿದ್ದಾರೆ. ಆದರೆ ನ್ಯಾಯಾಲಯವು ಯಾವುದೇ ಹೆಚ್ಚುವರಿ ಷರತ್ತುಗಳನ್ನು ವಿಧಿಸದೆ ಜಾಮೀನು ನೀಡಿದೆ. ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಂಪರ್ಕ ಬಯಸಿದಾಗ ಅವರಿಗೆ ಸಂಪರ್ಕಕ್ಕೆ ದೊರಕಬೇಕು ಎಂದಷ್ಟೆ ನ್ಯಾಯಾಲಯ ಹೇಳಿದೆ. ಹಾಗಾಗಿ ಅವರು ಬಿಗ್​ಬಾಸ್ ಮನೆಗೆ ಹೋಗಬಹುದು” ಎಂದಿದ್ದಾರೆ.

ಇದನ್ನೂ ಓದಿ:ಜೈಲಿಂದ ಹೊರಬಂದ ವರ್ತೂರು ಸಂತೋಷ್​ಗೆ ಸಿಕ್ಕ ಅದ್ಧೂರಿ ಸ್ವಾಗತ ಹೀಗಿತ್ತು ನೋಡಿ

”ವರ್ತೂರು ಸಂತೋಷ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿರುವ ಅರಣ್ಯಾ ಇಲಾಖೆ ವಿರುದ್ಧ ನಾವು ಕಾನೂನು ಹೋರಾಟ ಮಾಡಲಿದ್ದೇವೆ. ಹುಲಿ ಕೊಂದು ಉಗುರು ತಂದಿದ್ದಾರೆಂಬಂತೆ ಅವರು ಆರೋಪಗಳನ್ನು ಮಾಡಿ, ಸೆಕ್ಷನ್​ಗಳನ್ನು ಹೇರಿದ್ದಾರೆ. ವರ್ತೂರು ಸಂತೋಷ್ ಧರಿಸಿದ್ದ ಹುಲಿ ಉಗುರನ್ನು ಫೊರ್ಯಾನ್ಸಿಕ್ ಪರೀಕ್ಷೆಗೆ ಕಳಿಸಲಾಗಿದೆ. ಅದರ ವರದಿ ಬಂದ ಬಳಿಕವಷ್ಟೆ ಸಂತೋಷ್ ವಿರುದ್ಧ ಮುಂದಿನ ಕ್ರಮ ಜರುಗಿಸಬಹುದಾಗಿದೆ” ಎಂದಿದ್ದಾರೆ ವಕೀಲರು.

ಬಿಗ್​ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನು ಧರಿಸಿದ್ದರು, ಇದನ್ನು ಆಧರಿಸಿ ಸುಮೋಟೊ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದರು. ಸೋಮವಾರದಂದು ಬಿಗ್​ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅವರಿಗೆ ಇಂದು (ಅಕ್ಟೊಬರ್ 27) ಜಾಮೀನು ದೊರೆತಿದೆ. ಜೈಲಿನಿಂದ ಹೊರಬಂದ ವರ್ತೂರು ಸಂತೋಷ್ ಅವರಿಗೆ ಅದ್ಧೂರಿ ಸ್ವಾಗತ ಸಹ ದೊರಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ