AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಮೊದಲ ವಾರ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಮೊದಲ ವಾರದ ಎಲಿಮಿನೇಷನ್​ ಪ್ರಕ್ರಿಯೆ ನಡೆದಿದೆ. ಯಮುನಾ ಶ್ರೀನಿಧಿ ಅವರು ಒಂದೇ ವಾರದಲ್ಲಿ ಆಟ ಮುಗಿಸಿದ್ದಾರೆ. ಫಸ್ಟ್​ ವೀಕ್​ನಲ್ಲಿಯೇ ಅವರು ಎಲಿಮಿನೇಟ್​ ಆಗುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ. ಟ್ರೋಫಿ ಗೆಲ್ಲಬೇಕು ಎಂಬ ಆಸೆ ಇಟ್ಟುಕೊಂಡು ಬಂದಿದ್ದ ಯಮುನಾ ಶ್ರೀನಿಧಿ ಅವರಿಗೆ ನಿರಾಸೆ ಆಗಿದೆ.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಮೊದಲ ವಾರ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ
ಯಮುನಾ ಶ್ರೀನಿಧಿ
ಮದನ್​ ಕುಮಾರ್​
|

Updated on: Oct 06, 2024 | 11:15 PM

Share

ನೋಡನೋಡುತ್ತಿದ್ದಂತೆಯೇ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಆಟದಲ್ಲಿ ಒಂದು ವಾರ ಕಳೆದಿದೆ. 7 ದಿನಗಳ ಕಾಲ ವಿವಿಧ ಟಾಸ್ಕ್​ನಲ್ಲಿ ಗುದ್ದಾಡಿ ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್​, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್​ ಆಗಿದ್ದರು. ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್​ ಆಗಿದ್ದಾರೆ. ಇದರಿಂದ ಅವರಿಗೆ ಶಾಕ್​ ಆಗಿದೆ. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್​ ಆಗಿದ್ದರೂ ಕೂಡ ಎಲಿಮಿನೇಷನ್​ ಆಗುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಯಮುನಾ ಶ್ರೀನಿಧಿ ಅವರು ಮೊದಲ ದಿನದಿಂದಲೂ ಆ್ಯಕ್ಟೀವ್​ ಆಗಿದ್ದರು. ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಕೆಲವೇ ಕ್ಷಣಗಳ ಬಳಿಕ ಅವರು ಗೋಲ್ಡ್​ ಸುರೇಶ್​ ಬಳಿ ವಾದಕ್ಕೆ ಇಳಿದಿದ್ದರು. ಎಲ್ಲದೇ ಜಗದೀಶ್​ ಅವರು ಹಲವು ಬಾರಿ ನಿಯಮಗಳನ್ನು ಮುರಿದಾಗ ನೇರವಾಗಿ ವಿರೋಧಿಸಿದ್ದರು. ಇಷ್ಟೆಲ್ಲ ಆ್ಯಕ್ಟೀವ್​ ಆಗಿದ್ದರೂ ಸಹ ಅವರ ಆಟ ಒಂದೇ ವಾರದಲ್ಲಿ ಅಂತ್ಯವಾಗಿದೆ.

ಯಮುನಾ ಶ್ರೀನಿಧಿ ಅವರು ಬಿಗ್​ ಬಾಸ್​ ಮನೆಯಿಂದ ಹೊರಗೆ ಹೋಗುವಾಗ ಐಶ್ವರ್ಯಾ ಭಾವುಕವಾಗಿ ಕಣ್ಣೀರು ಹಾಕಿದರು. ಬಳಿಕ ವೇದಿಕೆಗೆ ಬಂದ ಯಮುನಾ ಅವರು ಸುದೀಪ್​ ಜತೆ ಎಲಿಮಿನೇಷನ್​ ಬಗ್ಗೆ ಮಾತನಾಡಿದರು. ‘ಇದನ್ನು ನಾನು ನಿರೀಕ್ಷಿಸಿರಲ್ಲ, ಇನ್ನಷ್ಟು ದಿನ ಇರುವಷ್ಟು ಸಾಮರ್ಥ್ಯ ನನ್ನಲ್ಲಿ ಇತ್ತು ಅನಿಸುತ್ತೆ. ಶಿಶಿರ್, ಧರ್ಮ, ತ್ರಿವಿಕ್ರಮ್ ಅವರು ಟಾಪ್​ 3 ಸ್ಪರ್ಧಿಗಳಾಗಿರುತ್ತಾರೆ’ ಎಂದು ಹೇಳಿ ಬಿಗ್ ಬಾಸ್​ ಆಟಕ್ಕೆ ಯಮುನಾ ವಿದಾಯ ಹೇಳಿದರು.

ಇದನ್ನೂ ಓದಿ: ‘ಸುದೀಪ್​ ಮಾತಿಗೆ ಬೆಲೆ ಕೊಡ್ತೀನಿ, ಇನ್ಮೇಲೆ ಬದಲಾಗ್ತೀನಿ’: ಬಿಗ್​ ಬಾಸ್​ನಲ್ಲಿ ಜಗದೀಶ್ ನಿರ್ಧಾರ

ಒಂದೇ ವಾರಕ್ಕೆ ಬಿಗ್​ ಬಾಸ್​ ಆಟ ಅಂತ್ಯಗೊಳಿಸಿದ ಯಮುನಾ ಶ್ರೀನಿಧಿ ಅವರಿಗೆ 1 ಲಕ್ಷ ರೂಪಾಯಿ ಚೆಕ್​ ನೀಡಲಾಯಿತು. ಮೊದಲ ವಾರದ ಎಲಿಮಿನೇಷನ್​ ಬಳಿಕ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಪೈಪೋಟಿ ಹೆಚ್ಚಾಗಿದೆ. ನರಕದಲ್ಲಿ ಇದ್ದ ರಂಜಿತ್​ ಅವರಿಗೆ ಸ್ವರ್ಗಕ್ಕೆ ಎಂಟ್ರಿ ಸಿಕ್ಕಿದೆ. ಇಷ್ಟು ದಿನ ಸ್ವರ್ಗದಲ್ಲಿ ಹಾರಾಡುತ್ತಿದ್ದ ಜಗದೀಶ್ ಅವರನ್ನು ನರಕಕ್ಕೆ ಕಳಿಸಲಾಗಿದೆ. ಬಿಗ್​ ಬಾಸ್​ ಮನೆಯ ಮೊದಲ ಕ್ಯಾಪ್ಟನ್ ಆಗಿ ಹಂಸಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ