AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಮೊದಲ ವಾರ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಮೊದಲ ವಾರದ ಎಲಿಮಿನೇಷನ್​ ಪ್ರಕ್ರಿಯೆ ನಡೆದಿದೆ. ಯಮುನಾ ಶ್ರೀನಿಧಿ ಅವರು ಒಂದೇ ವಾರದಲ್ಲಿ ಆಟ ಮುಗಿಸಿದ್ದಾರೆ. ಫಸ್ಟ್​ ವೀಕ್​ನಲ್ಲಿಯೇ ಅವರು ಎಲಿಮಿನೇಟ್​ ಆಗುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ. ಟ್ರೋಫಿ ಗೆಲ್ಲಬೇಕು ಎಂಬ ಆಸೆ ಇಟ್ಟುಕೊಂಡು ಬಂದಿದ್ದ ಯಮುನಾ ಶ್ರೀನಿಧಿ ಅವರಿಗೆ ನಿರಾಸೆ ಆಗಿದೆ.

Bigg Boss Elimination: ಬಿಗ್​ ಬಾಸ್​ ಮನೆಯಿಂದ ಮೊದಲ ವಾರ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ
ಯಮುನಾ ಶ್ರೀನಿಧಿ
ಮದನ್​ ಕುಮಾರ್​
|

Updated on: Oct 06, 2024 | 11:15 PM

Share

ನೋಡನೋಡುತ್ತಿದ್ದಂತೆಯೇ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಆಟದಲ್ಲಿ ಒಂದು ವಾರ ಕಳೆದಿದೆ. 7 ದಿನಗಳ ಕಾಲ ವಿವಿಧ ಟಾಸ್ಕ್​ನಲ್ಲಿ ಗುದ್ದಾಡಿ ಎಲಿಮಿನೇಷನ್​ನಿಂದ ಬಚಾವ್​ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್​, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್​ ಆಗಿದ್ದರು. ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್​ ಆಗಿದ್ದಾರೆ. ಇದರಿಂದ ಅವರಿಗೆ ಶಾಕ್​ ಆಗಿದೆ. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್​ ಆಗಿದ್ದರೂ ಕೂಡ ಎಲಿಮಿನೇಷನ್​ ಆಗುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಯಮುನಾ ಶ್ರೀನಿಧಿ ಅವರು ಮೊದಲ ದಿನದಿಂದಲೂ ಆ್ಯಕ್ಟೀವ್​ ಆಗಿದ್ದರು. ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಕೆಲವೇ ಕ್ಷಣಗಳ ಬಳಿಕ ಅವರು ಗೋಲ್ಡ್​ ಸುರೇಶ್​ ಬಳಿ ವಾದಕ್ಕೆ ಇಳಿದಿದ್ದರು. ಎಲ್ಲದೇ ಜಗದೀಶ್​ ಅವರು ಹಲವು ಬಾರಿ ನಿಯಮಗಳನ್ನು ಮುರಿದಾಗ ನೇರವಾಗಿ ವಿರೋಧಿಸಿದ್ದರು. ಇಷ್ಟೆಲ್ಲ ಆ್ಯಕ್ಟೀವ್​ ಆಗಿದ್ದರೂ ಸಹ ಅವರ ಆಟ ಒಂದೇ ವಾರದಲ್ಲಿ ಅಂತ್ಯವಾಗಿದೆ.

ಯಮುನಾ ಶ್ರೀನಿಧಿ ಅವರು ಬಿಗ್​ ಬಾಸ್​ ಮನೆಯಿಂದ ಹೊರಗೆ ಹೋಗುವಾಗ ಐಶ್ವರ್ಯಾ ಭಾವುಕವಾಗಿ ಕಣ್ಣೀರು ಹಾಕಿದರು. ಬಳಿಕ ವೇದಿಕೆಗೆ ಬಂದ ಯಮುನಾ ಅವರು ಸುದೀಪ್​ ಜತೆ ಎಲಿಮಿನೇಷನ್​ ಬಗ್ಗೆ ಮಾತನಾಡಿದರು. ‘ಇದನ್ನು ನಾನು ನಿರೀಕ್ಷಿಸಿರಲ್ಲ, ಇನ್ನಷ್ಟು ದಿನ ಇರುವಷ್ಟು ಸಾಮರ್ಥ್ಯ ನನ್ನಲ್ಲಿ ಇತ್ತು ಅನಿಸುತ್ತೆ. ಶಿಶಿರ್, ಧರ್ಮ, ತ್ರಿವಿಕ್ರಮ್ ಅವರು ಟಾಪ್​ 3 ಸ್ಪರ್ಧಿಗಳಾಗಿರುತ್ತಾರೆ’ ಎಂದು ಹೇಳಿ ಬಿಗ್ ಬಾಸ್​ ಆಟಕ್ಕೆ ಯಮುನಾ ವಿದಾಯ ಹೇಳಿದರು.

ಇದನ್ನೂ ಓದಿ: ‘ಸುದೀಪ್​ ಮಾತಿಗೆ ಬೆಲೆ ಕೊಡ್ತೀನಿ, ಇನ್ಮೇಲೆ ಬದಲಾಗ್ತೀನಿ’: ಬಿಗ್​ ಬಾಸ್​ನಲ್ಲಿ ಜಗದೀಶ್ ನಿರ್ಧಾರ

ಒಂದೇ ವಾರಕ್ಕೆ ಬಿಗ್​ ಬಾಸ್​ ಆಟ ಅಂತ್ಯಗೊಳಿಸಿದ ಯಮುನಾ ಶ್ರೀನಿಧಿ ಅವರಿಗೆ 1 ಲಕ್ಷ ರೂಪಾಯಿ ಚೆಕ್​ ನೀಡಲಾಯಿತು. ಮೊದಲ ವಾರದ ಎಲಿಮಿನೇಷನ್​ ಬಳಿಕ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಪೈಪೋಟಿ ಹೆಚ್ಚಾಗಿದೆ. ನರಕದಲ್ಲಿ ಇದ್ದ ರಂಜಿತ್​ ಅವರಿಗೆ ಸ್ವರ್ಗಕ್ಕೆ ಎಂಟ್ರಿ ಸಿಕ್ಕಿದೆ. ಇಷ್ಟು ದಿನ ಸ್ವರ್ಗದಲ್ಲಿ ಹಾರಾಡುತ್ತಿದ್ದ ಜಗದೀಶ್ ಅವರನ್ನು ನರಕಕ್ಕೆ ಕಳಿಸಲಾಗಿದೆ. ಬಿಗ್​ ಬಾಸ್​ ಮನೆಯ ಮೊದಲ ಕ್ಯಾಪ್ಟನ್ ಆಗಿ ಹಂಸಾ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್