AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀನಿಯರ್ ಹೀರೋಗಳೇ ಹಾಗೆ ನಡೆದುಕೊಂಡಾಗ’; ಯಶ್ ಹಳೆಯ ವಿಡಿಯೋ ವೈರಲ್

ಪುನೀತ್ ರಾಜ್​ಕುಮಾರ್ ನಿಧನ ಹೊಂದುವುದಕ್ಕೂ ಕೆಲವೇ ದಿನ ಮೊದಲು ಯಶ್ ಹಾಗೂ ಪುನೀತ್ ಭೇಟಿ ಆಗಿದ್ದರು. ‘ಭಜರಂಗಿ 2’ ವೇದಿಕೆ ಮೇಲೆ ಯಶ್, ಶಿವಣ್ಣ ಹಾಗೂ ಪುನೀತ್ ಒಟ್ಟಾಗಿ ಡ್ಯಾನ್ಸ್ ಮಾಡಿದ್ದರು. ಆ ವಿಡಿಯೋ ವೈರಲ್ ಆಗಿ ಗಮನ ಸೆಳೆದಿತ್ತು. ಈ ವೇದಿಕೆ ಮೇಲೆ ಪುನೀತ್ ಅವರನ್ನು ಹೊಗಳುವ ಕೆಲಸವನ್ನು ಯಶ್ ಅವರು ಮಾಡಿದ್ದರು.

‘ಸೀನಿಯರ್ ಹೀರೋಗಳೇ ಹಾಗೆ ನಡೆದುಕೊಂಡಾಗ’; ಯಶ್ ಹಳೆಯ ವಿಡಿಯೋ ವೈರಲ್
ಯಶ್-ಪುನೀತ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 06, 2025 | 8:02 AM

Share

ಯಶ್ (Yash) ಅವರು ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರು ಈಗ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಹೀಗಿರುವಾಗಲೇ ಯಶ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಪುನೀತ್ ರಾಜ್​ಕುಮಾರ್ ಬಗ್ಗೆ ಮಾತನಾಡಿದ್ದರು. ಪುನೀತ್ ರಾಜ್​ಕುಮಾರ್ ಅವರನ್ನು ಹಾಡಿ ಹೊಗಳುವ ಕೆಲಸವನ್ನು ಅವರು ಮಾಡಿದ್ದರು. ಆ ವಿಡಿಯೋ ಇಲ್ಲಿದೆ.

ಪುನೀತ್ ರಾಜ್​ಕುಮಾರ್ ನಿಧನ ಹೊಂದುವುದಕ್ಕೂ ಕೆಲವೇ ದಿನ ಮೊದಲು ಯಶ್ ಹಾಗೂ ಪುನೀತ್ ಭೇಟಿ ಆಗಿದ್ದರು. ‘ಭಜರಂಗಿ 2’ ವೇದಿಕೆ ಮೇಲೆ ಯಶ್, ಶಿವಣ್ಣ ಹಾಗೂ ಪುನೀತ್ ಒಟ್ಟಾಗಿ ಡ್ಯಾನ್ಸ್ ಮಾಡಿದ್ದರು. ಆ ವಿಡಿಯೋ ವೈರಲ್ ಆಗಿ ಗಮನ ಸೆಳೆದಿತ್ತು. ಈ ವೇದಿಕೆ ಮೇಲೆ ಪುನೀತ್ ಅವರನ್ನು ಹೊಗಳುವ ಕೆಲಸವನ್ನು ಯಶ್ ಅವರು ಮಾಡಿದ್ದರು. ಈಗ ಯಶ್ ಅವರ ಹಳೆಯ ವಿಡಿಯೋ ವೈರಲ್ ಆಗಿದೆ.

‘ಕೆಜಿಎಫ್’ ಯಶಸ್ಸು ಕಂಡಾಗ ಯಶ್ ಆಡಿದ ಮಾತು ಇದಾಗಿದೆ. ಆಗ ಪುನೀತ್ ಕರೆ ಮಾಡಿದ್ರಾ ಎಂಬ ಪ್ರಶ್ನೆಗೆ ಯಶ್ ಅವರು ಉತ್ತರ ನೀಡಿದ್ದರು. ಕೇವಲ ಕೆಜಿಎಫ್ ಮಾತ್ರವಲ್ಲ, ಅದಕ್ಕೂ ಮೊದಲೇ ಪುನೀತ್ ಅವರು ಯಶ್​ಗೆ ಕರೆ ಮಾಡಿ ಹೊಗಳಿದ್ದರಂತೆ.

‘ರಾಮಾಚಾರಿ ಸಕ್ಸಸ್ ಆದಾಗ ಪುನೀತ್ ಕರೆ ಮಾಡಿ, ಏನ್ ಕಲೆಕ್ಷನ್ ಯಶ್, ಏನಿದು ರೆಕಾರ್ಡ್ ಎಂದು ಹೇಳಿದ್ದರು. ಸೀನಿಯರ್  ಈ ರೀತಿ ನಡೆದುಕೊಂಡಾಗ ಖುಷಿ ಆಗುತ್ತದೆ. ಆ ವ್ಯಕ್ತಿ ಇದ್ದಾಗಲೇ ಮಾತನಾಡಿದೀನಿ. ಅಪ್ಪು ಹೋದ್ಮೇಲೆ ಅಪ್ಸೆಟ್ ಆದೆ. ಆ ವ್ಯಕ್ತಿ ಹೃದಯದಲ್ಲಿದ್ದಾರೆ. ಇದು ಮೋಸ. ಇದ್ದಾಗ ಬೆಲೆ ತಿಳಿದುಕೊಳ್ಳಬೇಕು, ಗೌರವ ಕೊಡಬೇಕು. ಪ್ರೀತಿ ಸಂಬಂಧ ಹೃದಯದಲ್ಲಿದೆ’ ಎಂದು ಯಶ್ ಅವರು ಪ್ರೀತಿಯಿಂದ ಮಾತನಾಡಿದ್ದರು. ಈ ವಿಡಿಯೋಗಳನ್ನು ಈಗ ವೈರಲ್ ಮಾಡಲಾಗುತ್ತಾ ಇದೆ.

ಇದನ್ನೂ ಓದಿ: ಯಶ್​ಗೆ ಹೆದರಿದ ಬನ್ಸಾಲಿ; ‘ಟಾಕ್ಸಿಕ್’ ಚಿತ್ರದ ಎದುರು ಬರಲು ‘ಲವ್ ಆ್ಯಂಡ್ ವಾರ್’ ಹಿಂದೇಟು

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರ. ಇದರ ಜೊತೆಗೆ ರಾಮಾಯಣ ಸಿನಿಮಾದಲ್ಲೂ ಅವರು ಬ್ಯುಸಿ ಇದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ