AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಬರ್ತ್​ಡೇ ಪ್ರಯುಕ್ತ ಬಿಗ್ ಬಾಸ್ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಏನದು?

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಫ್ಯಾಮಿಲಿ ವೀಕ್ ನಂತರ ‘ಟಿಕೆಟ್ ಟು ಫಿನಾಲೆ’ ಟಾಸ್ಕ್ ಆರಂಭವಾಗಿದೆ. ಫೈನಲ್‌ಗೆ ಹೋಗಲು ಸ್ಪರ್ಧಿಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಕೇವಲ ಎರಡು ವಾರಗಳು ಮಾತ್ರ ಉಳಿದಿರುವುದರಿಂದ ಗೆಲುವು ಯಾರದ್ದಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಹೀಗಿರುವಾಗಲೇ ಯಶ್ ಬರ್ತ್​ಡೇ ದಿನ ಸ್ಪರ್ಧಿಗಳಿಗೆ ಸರ್​ಪ್ರೈಸ್ ಸಿಕ್ಕಿದೆ.

ಯಶ್ ಬರ್ತ್​ಡೇ ಪ್ರಯುಕ್ತ ಬಿಗ್ ಬಾಸ್ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಏನದು?
Yash Birthday
ರಾಜೇಶ್ ದುಗ್ಗುಮನೆ
|

Updated on: Jan 10, 2025 | 7:14 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸ್ಪರ್ಧಿಗಳಿಗೆ ಆಗಾಗ ಸರ್​ಪ್ರೈಸ್ ಸಿಗುತ್ತಲೇ ಇರುತ್ತದೆ. ಕಳೆದ ವಾರ ಫ್ಯಾಮಿಲಿ ವೀಕ್ ಕಾರಣದಿಂದ ಎಲ್ಲರೂ ಹಾಯಾಗಿ ಸಮಯ ಕಳೆದರು. ಸ್ಪರ್ಧಿಗಳಿಗೆ ಕಿಚ್ಚನ ಊಟ ಕೂಡ ಸಿಕ್ಕಿತು. ಈ ವಾರ ಸ್ಪರ್ಧಿಗಳಲ್ಲಿ ಮತ್ತೆ ಗಂಭೀರತೆ ಬಂದಿದೆ. ಅದಕ್ಕೆ ಕಾರಣ ಆಗಿರೋದು ‘ಟಿಕೆಟ್ ಟು ಫಿನಾಲೆ’ ಟಾಸ್ಕ್​. ಬಿಗ್ ಬಾಸ್ ಫಿನಾಲೆ ಟಿಕೆಟ್ ಪಡೆಯಲು ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಹೀಗಿರುವಾಗಲೇ ಸ್ಪರ್ಧಿಗಳಿಗೆ ಬಿಗ್ ಬಾಸ್ ಕಡೆಯಿಂದ ಸ್ಪೆಷಲ್ ಉಡುಗೊರೆ ಒಂದು ಸಿಕ್ಕಿದೆ. ಏನದು? ಆ ಬಗ್ಗೆ ಇಲ್ಲಿದೆ ವಿವರ.

ಜನವರಿ 8ರಂದು ಯಶ್ ಅವರ ಜನ್ಮದಿನ. ಅವರಿಗೆ ಸಾಕಷ್ಟು ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಆರಾಧಿಸುವವರು ಅನೇಕರು ಇದ್ದಾರೆ. ಈಗ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿದೆ. ಜನವರಿ 8ರಂದು ನಡೆದ ಘಟನೆಗಳು ಜನವರಿ 9ರಂದು ಪ್ರಸಾರ ಕಂಡಿವೆ. ಜನವರಿ 8ರಂದು ಮುಂಜಾನೆ ಬಿಗ್ ಬಾಸ್​ನಲ್ಲಿ ಯಶ್ ಸಿನಿಮಾದ ಸಾಂಗ್ ಪ್ಲೇ ಆಗಿದೆ.

ಬೆಳಿಗ್ಗೆ ಸ್ಪರ್ಧಿಗಳನ್ನು ಎಬ್ಬಿಸಲು ಯಾವ ಸಾಂಗ್​ನ ಪ್ಲೇ ಮಾಡಲಾಗುತ್ತದೆ ಎಂಬ ಕುತೂಹಲ ವೀಕ್ಷಕರಲ್ಲಿ ಇರುತ್ತದೆ. ಒಳಗೆ ಇರುವ ಸ್ಪರ್ಧಿಗಳಿಗೂ ಈ ಬಗ್ಗೆ ಕುತೂಹಲ ಇದ್ದೇ ಇರುತ್ತದೆ. ಜನವರಿ 8ರಂದು ಯಾವ ಹಾಡು ಹಾಕುತ್ತಾರೆ ಎಂಬ ಪ್ರಶ್ನೆ ಇತ್ತು. ವಿಶೇಷ ಎಂದರೆ ಯಶ್ ನಟನೆಯ ‘ಗೂಗ್ಲಿ’ ಚಿತ್ರದ ‘ಗೂಗ್ಲಿ..’ ಹಾಡನ್ನೇ ಹಾಕಲಾಗಿದೆ. ಇದಕ್ಕೆ ಸ್ಪರ್ಧಿಗಳು ಕುಣಿದು ಕುಪ್ಪಳಿಸಿದ್ದಾರೆ.

‘ಗೂಗ್ಲಿ’ 2013ರಲ್ಲಿ ರಿಲೀಸ್ ಆದ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಈ ಚಿತ್ರದ ಹಾಡುಗಳು ಕೂಡ ಯಶಸ್ಸು ಕಂಡಿವೆ. ಈ ಚಿತ್ರಕ್ಕೆ ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದರು. ಜಯಣ್ಣ ಹಾಗೂ ಭೋಗೇಂದ್ರ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು.

ಇದನ್ನೂ ಓದಿ: ಜನ್ಮದಿನದಂದು ರಾಧಿಕಾ ಜೊತೆ ಯಶ್ ಡೇಟ್​ ನೈಟ್; ಇಲ್ಲಿವೆ ಸುಂದರ ಫೋಟೋಗಳು

ಈ ವಾರ ಪೂರ್ಣಗೊಂಡರೆ ಬಿಗ್ ಬಾಸ್ ಮನೆಯಲ್ಲಿ ಉಳಿಯೋದು ಇನ್ನು ಕೇವಲ ಎರಡು ವಾರ ಮಾತ್ರ. ಸದ್ಯ 9 ಸ್ಪರ್ಧಿಗಳು ಇದ್ದು ಇವರ ಮಧ್ಯೆ ಕಪ್ ಗೆಲ್ಲೋದು ಯಾರು ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ