AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF 2: ಜೀ ಕನ್ನಡದಲ್ಲಿ ಬರ್ತಿದೆ ‘ಕೆಜಿಎಫ್​: ಚಾಪ್ಟರ್​ 2’; ಆಗಸ್ಟ್​ 20ಕ್ಕೆ ಯಶ್​ ಅಭಿಮಾನಿಗಳಿಗೆ ಹಬ್ಬ

KGF Chapter 2 Television Premiere: ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ‘ಕೆಜಿಎಫ್​ 2’ ಚಿತ್ರವನ್ನು ಮಿಸ್​ ಮಾಡಿಕೊಂಡವರು ಈಗ ಟಿವಿಯಲ್ಲಿ ನೋಡಲು ಕಾಲ ಕೂಡಿಬಂದಿದೆ. ಆಗಸ್ಟ್​ 20ರ ಶನಿವಾರ ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ.

KGF 2: ಜೀ ಕನ್ನಡದಲ್ಲಿ ಬರ್ತಿದೆ ‘ಕೆಜಿಎಫ್​: ಚಾಪ್ಟರ್​ 2’; ಆಗಸ್ಟ್​ 20ಕ್ಕೆ ಯಶ್​ ಅಭಿಮಾನಿಗಳಿಗೆ ಹಬ್ಬ
ಯಶ್
TV9 Web
| Edited By: |

Updated on: Aug 18, 2022 | 3:29 PM

Share

ನಟ ‘ರಾಕಿಂಗ್​ ಸ್ಟಾರ್​’ ಯಶ್​ (Yash) ಅವರ ವೃತ್ತಿಬದುಕಿನ ಅತಿ ದೊಡ್ಡ ಸಿನಿಮಾವಾಗಿ ಮೂಡಿಬಂದ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಚಿತ್ರದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಕನ್ನಡ ಚಿತ್ರರಂಗದ ಕಡೆಗೆ ಇಡೀ ಜಗತ್ತು ತಿರುಗಿ ನೋಡುವಂತೆ ಮಾಡಿದ ಚಿತ್ರವಿದು. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಅಬ್ಬರಿಸಿದ ಪರಿಗೆ ಬಾಲಿವುಡ್​ ಮಂದಿ ಕೂಡ ದಂಗಾದರು. ನಂತರ ಒಟಿಟಿಯಲ್ಲಿ ಪ್ರಸಾರವಾಗಿಯೂ ಈ ಚಿತ್ರ ಸದ್ದು ಮಾಡಿತು. ಈಗ ಇದೇ ಮೊದಲ ಬಾರಿಗೆ ಟಿವಿಯಲ್ಲಿ ಬಿತ್ತರವಾಗಲು ಸಮಯ ನಿಗದಿ ಆಗಿದೆ. ಹೌದು, ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಟಿಲಿವಿಷನ್​ ಪ್ರೀಮಿಯರ್​ ಮಾಡಲಾಗುತ್ತಿದೆ. ಆಗಸ್ಟ್​ 20ರಂದು ಈ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣಲಿದ್ದು, ‘ರಾಕಿಂಗ್​ ಸ್ಟಾರ್​’ ಯಶ್​ ಅಭಿಮಾನಿಗಳಿಗೆ ಅಂದು ಮನರಂಜನೆಯ ಹಬ್ಬ ಆಗಲಿದೆ.

ಪ್ರಶಾಂತ್​ ನೀಲ್​ ಅವರ ನಿರ್ದೇಶನದಲ್ಲಿ ಮೂಡಿಬಂದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರಕ್ಕೆ ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್​ ಕಿರಗಂದೂರು ಬಂಡವಾಳ ಹೂಡಿದ್ದಾರೆ. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಗಳಿಸಿದ್ದು ಬರೋಬ್ಬರಿ 1250 ಕೋಟಿ ರೂಪಾಯಿಗೂ ಹೆಚ್ಚು ಎಂಬುದು ಗಮನಾರ್ಹ. ‘ಕೆಜಿಎಫ್​ 2’ ಚಿತ್ರದಿಂದ ಹಲವರ ಬದುಕು ಬದಲಾಯಿತು. ಯಶ್​ ಅವರ ಮಾರುಕಟ್ಟೆ ಹಿರಿದಾಯಿತು.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಈ ಸಿನಿಮಾದಲ್ಲಿ ಬಾಲಿವುಡ್​ ಕಲಾವಿದರಾದ ರವೀನಾ ಟಂಡನ್​, ಸಂಜಯ್​ ದತ್​ ಅವರು ಮಹತ್ವದ ಪಾತ್ರ ಮಾಡಿದ್ದಾರೆ. ಇನ್ನುಳಿದಂತೆ ಪ್ರಕಾಶ್ ರೈ, ವಸಿಷ್ಠ ಸಿಂಹ, ದಿನೇಶ್​ ಮಂಗಳೂರು, ಅಚ್ಯುತ್​ ಕುಮಾರ್​, ರಾವ್​ ರಮೇಶ್​, ಈಶ್ವರಿ ರಾವ್​, ಅರ್ಚನಾ ಜೋಯಿಸ್​ ಮುಂತಾದವರು ನಟಿಸಿದ್ದಾರೆ. ಯಶ್​ಗೆ ಜೋಡಿಯಾಗಿ ಶ್ರೀನಿಧಿ ಶೆಟ್ಟಿ ಅಭಿನಯಿಸಿದ್ದಾರೆ.

ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ‘ಕೆಜಿಎಫ್​ 2’ ಸಿನಿಮಾವನ್ನು ಮಿಸ್​ ಮಾಡಿಕೊಂಡವರು ಈಗ ಟಿವಿಯಲ್ಲಿ ನೋಡಲು ಕಾಲ ಕೂಡಿಬಂದಿದೆ. ಆಗಸ್ಟ್​ 20ರ ಶನಿವಾರ ಸಂಜೆ 7 ಗಂಟೆಗೆ ಜೀ ಕನ್ನಡದಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ವೀಕೆಂಡ್​ನಲ್ಲಿ ಮನೆ ಮಂದಿಯೆಲ್ಲ ಒಟ್ಟಾಗಿ ಕುಳಿತು ಎಂಜಾಯ್​ ಮಾಡಬಹುದು. ಈಗಾಗಲೇ ಬಿತ್ತರ ಆಗುತ್ತಿರುವ ವಿಶೇಷ ಪ್ರೋಮೋಗಳು ಗಮನ ಸೆಳೆಯುತ್ತಿವೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಭುವನ್​ ಗೌಡ ಅವರ ಛಾಯಾಗ್ರಹಣ, ಶಿವಕುಮಾರ್​ ಅವರ ಕಲಾ ನಿರ್ದೇಶನ ಮುಂತಾದವು ಈ ಚಿತ್ರದ ಹೈಲೈಟ್​.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್